<p>ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಹಿಂದುಳಿದ ವಿದ್ಯಾರ್ಥಿಗಳಿಗೆ ನೀಟ್, ಜೆಇಇ ಮತ್ತು ಸಿಇಟಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ.</p>.<p>ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ಪ್ರತಿ ಜಿಲ್ಲೆಗೆ 15 ರಂತೆ ಒಟ್ಟು 500 ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ’ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಇದಕ್ಕಾಗಿ ₹15 ಕೋಟಿ ವೆಚ್ಚದಲ್ಲಿ 2 ವರ್ಷಗಳ ವಸತಿ ಸಹಿತ ಪ್ರಥಮ ಪಿಯುಮತ್ತು ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಶಿಕ್ಷಣದೊಂದಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು ಎಂದರು.</p>.<p>l ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಶಾಲಾ ಪೂರ್ವ ಶಿಕ್ಷಣ ಕಿಟ್ಗಳನ್ನು ಪ್ರತಿ ಕೇಂದ್ರಕ್ಕೆ ₹3,000 ಘಟಕ ವೆಚ್ಚದಲ್ಲಿ 69,922 ಅಂಗನವಾಡಿಗಳಿಗೆ ಒಟ್ಟು ₹20.98 ಕೋಟಿ ವೆಚ್ಚದಲ್ಲಿ ಖರೀದಿಸಲಾಗುವುದು.</p>.<p>l ಎಡಿಬಿ ನೆರವಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯಡಿ ಕೇಂದ್ರದ ಆರ್ಥಿಕ ವ್ಯವಹಾರಗಳ ಇಲಾಖೆಯ ಸಾಲದ ಮಾತುಕತೆ ಸಿದ್ದತೆಯ ಮಾನದಂಡಗಳ ಅನ್ವಯ 53 ಸರ್ಕಾರಿ ಪದವಿ ಕಾಲೇಜುಗಳು, 14 ಸರ್ಕಾರಿ ಪಾಲಿಟೆಕ್ನಿಕ್ಗಳು, 5 ಉತ್ಕೃಷ್ಟತಾ ಕೇಂದ್ರಗಳು ಹಾಗೂ ಯೋಜನಾ ನಿರ್ವಹಣಾ ಘಟಕಕ್ಕೆ ₹802 ಕೋಟಿ ಮೊತ್ತದ ವಸ್ತುಗಳ ಮುಂಗಡ ಖರೀದಿಗೆ ಅನುಮೋದನೆ</p>.<p>ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಗಳಲ್ಲಿ ಹೊಸ ಯಂತ್ರೋಪಕರಣಗಳು ಮತ್ತು ಸಲಕರಣೆಗಳನ್ನು ₹90 ಕೋಟಿ ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ</p>.<p>ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನ</p>.<p>ಬೆಂಗಳೂರು ಕೇಂದ್ರ, ಧಾರವಾಡ ಕೇಂದ್ರ, ಬೆಳಗಾವಿ ಮತ್ತು ಬಳ್ಳಾರಿ ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಕಾರಾಗೃಹ ಇಲಾಖೆಗೆ ಸೇರಿದ ಜಮೀನುಗಳಲ್ಲಿ ಪೆಟ್ರೋಲ್ ಪಂಪ್ ಮತ್ತು ಮಾರಾಟ ಮಳಿಗೆ ಸ್ಥಾಪಿಸಲು ಒಪ್ಪಿಗೆ</p>.<p>ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟದ ಹತ್ತಿರ ಕಬಿನಿ ನದಿಗೆ ಅಡ್ಡಾಗಿ ವಿಯರ್ ನಿರ್ಮಾಣ ಮಾಡುವ ₹15 ಕೋಟಿ ಕಾಮಗಾರಿಗೆ ಅನುಮೋದನೆ</p>.<p>ರಾಯಚೂರು ಜಿಲ್ಲೆ ರಾಯಚೂರು ಮತ್ತು ಮಾನ್ವಿ ತಾಲ್ಲೂಕು ವ್ಯಾಪ್ತಿಗೆ ಬರುವ ₹182.70 ಕೋಟಿ ವೆಚ್ಚದ ಮಟಮಾರಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-51-1966137578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಹಿಂದುಳಿದ ವಿದ್ಯಾರ್ಥಿಗಳಿಗೆ ನೀಟ್, ಜೆಇಇ ಮತ್ತು ಸಿಇಟಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ.</p>.<p>ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ಪ್ರತಿ ಜಿಲ್ಲೆಗೆ 15 ರಂತೆ ಒಟ್ಟು 500 ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ’ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಇದಕ್ಕಾಗಿ ₹15 ಕೋಟಿ ವೆಚ್ಚದಲ್ಲಿ 2 ವರ್ಷಗಳ ವಸತಿ ಸಹಿತ ಪ್ರಥಮ ಪಿಯುಮತ್ತು ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಶಿಕ್ಷಣದೊಂದಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು ಎಂದರು.</p>.<p>l ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಶಾಲಾ ಪೂರ್ವ ಶಿಕ್ಷಣ ಕಿಟ್ಗಳನ್ನು ಪ್ರತಿ ಕೇಂದ್ರಕ್ಕೆ ₹3,000 ಘಟಕ ವೆಚ್ಚದಲ್ಲಿ 69,922 ಅಂಗನವಾಡಿಗಳಿಗೆ ಒಟ್ಟು ₹20.98 ಕೋಟಿ ವೆಚ್ಚದಲ್ಲಿ ಖರೀದಿಸಲಾಗುವುದು.</p>.<p>l ಎಡಿಬಿ ನೆರವಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯಡಿ ಕೇಂದ್ರದ ಆರ್ಥಿಕ ವ್ಯವಹಾರಗಳ ಇಲಾಖೆಯ ಸಾಲದ ಮಾತುಕತೆ ಸಿದ್ದತೆಯ ಮಾನದಂಡಗಳ ಅನ್ವಯ 53 ಸರ್ಕಾರಿ ಪದವಿ ಕಾಲೇಜುಗಳು, 14 ಸರ್ಕಾರಿ ಪಾಲಿಟೆಕ್ನಿಕ್ಗಳು, 5 ಉತ್ಕೃಷ್ಟತಾ ಕೇಂದ್ರಗಳು ಹಾಗೂ ಯೋಜನಾ ನಿರ್ವಹಣಾ ಘಟಕಕ್ಕೆ ₹802 ಕೋಟಿ ಮೊತ್ತದ ವಸ್ತುಗಳ ಮುಂಗಡ ಖರೀದಿಗೆ ಅನುಮೋದನೆ</p>.<p>ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಗಳಲ್ಲಿ ಹೊಸ ಯಂತ್ರೋಪಕರಣಗಳು ಮತ್ತು ಸಲಕರಣೆಗಳನ್ನು ₹90 ಕೋಟಿ ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ</p>.<p>ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನ</p>.<p>ಬೆಂಗಳೂರು ಕೇಂದ್ರ, ಧಾರವಾಡ ಕೇಂದ್ರ, ಬೆಳಗಾವಿ ಮತ್ತು ಬಳ್ಳಾರಿ ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಕಾರಾಗೃಹ ಇಲಾಖೆಗೆ ಸೇರಿದ ಜಮೀನುಗಳಲ್ಲಿ ಪೆಟ್ರೋಲ್ ಪಂಪ್ ಮತ್ತು ಮಾರಾಟ ಮಳಿಗೆ ಸ್ಥಾಪಿಸಲು ಒಪ್ಪಿಗೆ</p>.<p>ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟದ ಹತ್ತಿರ ಕಬಿನಿ ನದಿಗೆ ಅಡ್ಡಾಗಿ ವಿಯರ್ ನಿರ್ಮಾಣ ಮಾಡುವ ₹15 ಕೋಟಿ ಕಾಮಗಾರಿಗೆ ಅನುಮೋದನೆ</p>.<p>ರಾಯಚೂರು ಜಿಲ್ಲೆ ರಾಯಚೂರು ಮತ್ತು ಮಾನ್ವಿ ತಾಲ್ಲೂಕು ವ್ಯಾಪ್ತಿಗೆ ಬರುವ ₹182.70 ಕೋಟಿ ವೆಚ್ಚದ ಮಟಮಾರಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-51-1966137578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>