<p>ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮದ ಹೆಸರಿನಲ್ಲಿ ಕಡ್ಡಾಯ ಇಂಗ್ಲಿಷ್ ಮಾಧ್ಯಮ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.</p>.<p>‘ಇಂಗ್ಲಿಷ್ ಮಾಧ್ಯಮ ಕಡ್ಡಾಯಎಂದು ಹೇರುವ ಬದಲು ಕನ್ನಡಮಾಧ್ಯಮ ಆಯ್ಕೆ ಸ್ವಾತಂತ್ರ್ಯವನ್ನು ಉಳಿಸಬೇಕು. ಇದು ಸ್ಥಗಿತಗೊಳಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಆಗ್ರಹಿಸಿದರು.</p>.<p>ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯ ಎನ್.ಕೆ. ತುಳಜಾರಾಮ್ ಮಾತನಾಡಿ, ‘ನಾವು ಇಂಗ್ಲಿಷ್ ಮಾಧ್ಯಮ ವಿರೋಧಿಗಳಲ್ಲ. ಆದರೆ, ಕನ್ನಡ ಭಾಷೆ ಕಸಿದು ಇಂಗ್ಲಿಷ್ ಮಾಧ್ಯಮ ಕಡ್ಡಾಯಗೊಳಿಸುವುದನ್ನು ಒಪ್ಪುವುದಿಲ್ಲ’ ಎಂದರು.</p>.<p>‘ದಶಕಗಳ ಕಾಲ ಕನ್ನಡದಲ್ಲಿ ಬೋಧಿಸಿದ ಶಿಕ್ಷಕರಿಗೆ ಕೇವಲ ಐದು ದಿನಗಳ ಅರೆಬರೆ ಆನ್ಲೈನ್ ತರಬೇತಿ ನೀಡಿ ಇಂಗ್ಲಿಷ್ನಲ್ಲಿ ಪಾಠ ಮಾಡಲು ಸೂಚಿಸುವುದು ಅವೈಜ್ಞಾನಿಕ. ಇದು ಖಾಸಗಿ ಶಾಲೆಗಳ ಮುಂದೆ ಸರ್ಕಾರಿ ಶಾಲಾ ಮಕ್ಕಳನ್ನು ದುರ್ಬಲರನ್ನಾಗಿಸುವ ತಾರತಮ್ಯದ ನಡೆಯಾಗಿದೆ’ ಎಂದು ಟೀಕಿಸಿದರು.</p>.<p>ಸಂಘಟನೆ ರಾಜ್ಯ ಅಧ್ಯಕ್ಷೆ ಅಶ್ವಿನಿ ಕೆ.ಎಸ್, ಕಾರ್ಯದರ್ಶಿ ಅಜಯ್ ಕಾಮತ್, ಸದಸ್ಯೆ ಶಿಲ್ಪಾ ಬಿ.ಕೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-4-561613089</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮದ ಹೆಸರಿನಲ್ಲಿ ಕಡ್ಡಾಯ ಇಂಗ್ಲಿಷ್ ಮಾಧ್ಯಮ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.</p>.<p>‘ಇಂಗ್ಲಿಷ್ ಮಾಧ್ಯಮ ಕಡ್ಡಾಯಎಂದು ಹೇರುವ ಬದಲು ಕನ್ನಡಮಾಧ್ಯಮ ಆಯ್ಕೆ ಸ್ವಾತಂತ್ರ್ಯವನ್ನು ಉಳಿಸಬೇಕು. ಇದು ಸ್ಥಗಿತಗೊಳಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಆಗ್ರಹಿಸಿದರು.</p>.<p>ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯ ಎನ್.ಕೆ. ತುಳಜಾರಾಮ್ ಮಾತನಾಡಿ, ‘ನಾವು ಇಂಗ್ಲಿಷ್ ಮಾಧ್ಯಮ ವಿರೋಧಿಗಳಲ್ಲ. ಆದರೆ, ಕನ್ನಡ ಭಾಷೆ ಕಸಿದು ಇಂಗ್ಲಿಷ್ ಮಾಧ್ಯಮ ಕಡ್ಡಾಯಗೊಳಿಸುವುದನ್ನು ಒಪ್ಪುವುದಿಲ್ಲ’ ಎಂದರು.</p>.<p>‘ದಶಕಗಳ ಕಾಲ ಕನ್ನಡದಲ್ಲಿ ಬೋಧಿಸಿದ ಶಿಕ್ಷಕರಿಗೆ ಕೇವಲ ಐದು ದಿನಗಳ ಅರೆಬರೆ ಆನ್ಲೈನ್ ತರಬೇತಿ ನೀಡಿ ಇಂಗ್ಲಿಷ್ನಲ್ಲಿ ಪಾಠ ಮಾಡಲು ಸೂಚಿಸುವುದು ಅವೈಜ್ಞಾನಿಕ. ಇದು ಖಾಸಗಿ ಶಾಲೆಗಳ ಮುಂದೆ ಸರ್ಕಾರಿ ಶಾಲಾ ಮಕ್ಕಳನ್ನು ದುರ್ಬಲರನ್ನಾಗಿಸುವ ತಾರತಮ್ಯದ ನಡೆಯಾಗಿದೆ’ ಎಂದು ಟೀಕಿಸಿದರು.</p>.<p>ಸಂಘಟನೆ ರಾಜ್ಯ ಅಧ್ಯಕ್ಷೆ ಅಶ್ವಿನಿ ಕೆ.ಎಸ್, ಕಾರ್ಯದರ್ಶಿ ಅಜಯ್ ಕಾಮತ್, ಸದಸ್ಯೆ ಶಿಲ್ಪಾ ಬಿ.ಕೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-4-561613089</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>