<p>ಬೆಂಗಳೂರು: ‘ಬಾಲ್ಯದಲ್ಲಿಯೇ ಮಕ್ಕಳ ವ್ಯಕ್ತಿತ್ವ ವಿಕಸನಗೊಳ್ಳಲು ಬೇಸಿಗೆ ಶಿಬಿರಗಳು ಸಹಕಾರಿಯಾಗಲಿವೆ’ ಎಂದು ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ ಹೇಳಿದರು.</p>.<p>ಹಲಸೂರಿನ ರಾಮಕೃಷ್ಣ ಮಠದಲ್ಲಿ ಆಯೋಜಿಸಿರುವ ವಸಂತ ವಿಹಾರ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು</p>.<p>ರಾಮಕೃಷ್ಣ ಮಠದ ಹಲಸೂರು ಶಾಖೆ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದ ಮಹಾರಾಜ್ ಮಾತನಾಡಿ, ‘ವಸಂತ ವಿಹಾರ ಶಿಬಿರವು ಮೇ 10ರವರೆಗೆ ನಡೆಯಲಿದ್ದು, ರಾಮಕೃಷ್ಣ ಪರಮಹಂಸ, ಶಾರದಾಮಾತೆ, ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ತಿಳಿಸಿಕೊಡಲಾಗುತ್ತದೆ’ ಎಂದು ಹೇಳಿದರು.</p>.<p>ಕೆ.ಭಾನುಮೂರ್ತಿ ವಿಶೇಷ ಉಪನ್ಯಾಸ ನೀಡಿದರು. ಮುಂದಿನ ಎರಡು ವಾರ ಶಿಬಿರದಲ್ಲಿ ನಿತ್ಯ ಹಲವು ಚಟುವಟಿಕೆಗಳು ಇರಲಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-4-1384451696</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬಾಲ್ಯದಲ್ಲಿಯೇ ಮಕ್ಕಳ ವ್ಯಕ್ತಿತ್ವ ವಿಕಸನಗೊಳ್ಳಲು ಬೇಸಿಗೆ ಶಿಬಿರಗಳು ಸಹಕಾರಿಯಾಗಲಿವೆ’ ಎಂದು ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ ಹೇಳಿದರು.</p>.<p>ಹಲಸೂರಿನ ರಾಮಕೃಷ್ಣ ಮಠದಲ್ಲಿ ಆಯೋಜಿಸಿರುವ ವಸಂತ ವಿಹಾರ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು</p>.<p>ರಾಮಕೃಷ್ಣ ಮಠದ ಹಲಸೂರು ಶಾಖೆ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದ ಮಹಾರಾಜ್ ಮಾತನಾಡಿ, ‘ವಸಂತ ವಿಹಾರ ಶಿಬಿರವು ಮೇ 10ರವರೆಗೆ ನಡೆಯಲಿದ್ದು, ರಾಮಕೃಷ್ಣ ಪರಮಹಂಸ, ಶಾರದಾಮಾತೆ, ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ತಿಳಿಸಿಕೊಡಲಾಗುತ್ತದೆ’ ಎಂದು ಹೇಳಿದರು.</p>.<p>ಕೆ.ಭಾನುಮೂರ್ತಿ ವಿಶೇಷ ಉಪನ್ಯಾಸ ನೀಡಿದರು. ಮುಂದಿನ ಎರಡು ವಾರ ಶಿಬಿರದಲ್ಲಿ ನಿತ್ಯ ಹಲವು ಚಟುವಟಿಕೆಗಳು ಇರಲಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-4-1384451696</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>