<p>ಬೆಂಗಳೂರು: ವಿಶೇಷ ಭತ್ಯೆ (ನಾನ್ ಪ್ರಾಕ್ಟಿಸಿಂಗ್ ಅಲೋವೆನ್ಸ್) ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ಕೆವಿಎಎಫ್ಎಸ್ಯು) ಶಿಕ್ಷಕರ ಸಂಘ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.</p>.<p>ವಿಶೇಷ ಭತ್ಯೆಯು 7ನೇ ವೇತನ ಆಯೋಗ, ಐಸಿಎಆರ್ ಮತ್ತು ಯುಜಿಸಿ ಮಾರ್ಗಸೂಚಿಗಳ ಅನ್ವಯ 2019ರಿಂದ ಜಾರಿಯಲ್ಲಿದೆ. ಸರ್ಕಾರದ ವಿವಿಧ ಇಲಾಖೆಗಳ ಅನುಮೋದನೆಯೊಂದಿಗೆ ಇದನ್ನುಜಾರಿಗೆ ತರಲಾಗಿದೆ. ಭತ್ಯೆ ಸ್ಥಗಿತಗೊಳಿಸಿರುವುದು ಬೋಧಕ ವರ್ಗದ ಆರ್ಥಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಘ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಪಶುವೈದ್ಯಕೀಯ ಶಿಕ್ಷಕರು ಖಾಸಗಿ ವೃತ್ತಿಯಿಂದ ದೂರವಿದ್ದು, ಕೇವಲ ಬೋಧನೆ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಈ ಭತ್ಯೆ ಅತ್ಯಗತ್ಯವಾಗಿದೆ. ಈಗಾಗಲೇ ವಿಶ್ವವಿದ್ಯಾಲಯದಲ್ಲಿ ಬೋಧಕರ ಕೊರತೆಯಿದ್ದು, ಈ ಭತ್ಯೆ ಸ್ಥಗಿತಗೊಂಡಿರುವುದರಿಂದ ಭವಿಷ್ಯದಲ್ಲಿ ಪ್ರತಿಭಾವಂತರು ಈ ಕ್ಷೇತ್ರಕ್ಕೆ ಬರಲು ಹಿಂದೇಟು ಹಾಕಬಹುದು. ಹಾಗಾಗಿ, ಏಪ್ರಿಲ್ 21ರ ಆದೇಶ ಹಿಂಪಡೆದು, ಬಾಕಿ ಇರುವ ಎರಡು ತಿಂಗಳ ವೇತನವನ್ನು ತಕ್ಷಣವೇ ಪಾವತಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘ ಎಚ್ಚರಿಕೆ ನೀಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-1448532972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿಶೇಷ ಭತ್ಯೆ (ನಾನ್ ಪ್ರಾಕ್ಟಿಸಿಂಗ್ ಅಲೋವೆನ್ಸ್) ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ಕೆವಿಎಎಫ್ಎಸ್ಯು) ಶಿಕ್ಷಕರ ಸಂಘ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.</p>.<p>ವಿಶೇಷ ಭತ್ಯೆಯು 7ನೇ ವೇತನ ಆಯೋಗ, ಐಸಿಎಆರ್ ಮತ್ತು ಯುಜಿಸಿ ಮಾರ್ಗಸೂಚಿಗಳ ಅನ್ವಯ 2019ರಿಂದ ಜಾರಿಯಲ್ಲಿದೆ. ಸರ್ಕಾರದ ವಿವಿಧ ಇಲಾಖೆಗಳ ಅನುಮೋದನೆಯೊಂದಿಗೆ ಇದನ್ನುಜಾರಿಗೆ ತರಲಾಗಿದೆ. ಭತ್ಯೆ ಸ್ಥಗಿತಗೊಳಿಸಿರುವುದು ಬೋಧಕ ವರ್ಗದ ಆರ್ಥಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಘ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಪಶುವೈದ್ಯಕೀಯ ಶಿಕ್ಷಕರು ಖಾಸಗಿ ವೃತ್ತಿಯಿಂದ ದೂರವಿದ್ದು, ಕೇವಲ ಬೋಧನೆ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಈ ಭತ್ಯೆ ಅತ್ಯಗತ್ಯವಾಗಿದೆ. ಈಗಾಗಲೇ ವಿಶ್ವವಿದ್ಯಾಲಯದಲ್ಲಿ ಬೋಧಕರ ಕೊರತೆಯಿದ್ದು, ಈ ಭತ್ಯೆ ಸ್ಥಗಿತಗೊಂಡಿರುವುದರಿಂದ ಭವಿಷ್ಯದಲ್ಲಿ ಪ್ರತಿಭಾವಂತರು ಈ ಕ್ಷೇತ್ರಕ್ಕೆ ಬರಲು ಹಿಂದೇಟು ಹಾಕಬಹುದು. ಹಾಗಾಗಿ, ಏಪ್ರಿಲ್ 21ರ ಆದೇಶ ಹಿಂಪಡೆದು, ಬಾಕಿ ಇರುವ ಎರಡು ತಿಂಗಳ ವೇತನವನ್ನು ತಕ್ಷಣವೇ ಪಾವತಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘ ಎಚ್ಚರಿಕೆ ನೀಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-1448532972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>