<p>ಮುನಿರಾಬಾದ್: ಸಮೀಪದ ಬೇವಿನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮಕ್ಕಳಿಗೆ ಅಕ್ಷರಾಭ್ಯಾಸ’ ಮಾಡಿಸುವ ಮೂಲಕ ಸೋಮವಾರ ಶಾಲಾ ಆರಂಭೋತ್ಸವ ಸಂಭ್ರಮದಿಂದ ನೆರವೇರಿತು.</p>.<p>ಬೆಳಿಗ್ಗೆ ಗ್ರಾಮದಲ್ಲಿ ಜಾಥಾ ನಡೆಸಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಮನವಿ ಮಾಡಲಾಯಿತು. ನಂತರ ಶಾಲೆಗೆ ಬಂದ ಮಕ್ಕಳನ್ನು ಹೂ ಮಳೆಗರೆಯುವ ಮೂಲಕ ಸ್ವಾಗತಿಸಲಾಯಿತು. ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು.</p>.<p>ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಶರಣಯ್ಯ ಹಿರೇಮಠ ಅವರು ಅಕ್ಷರ ಅಭ್ಯಾಸ ಮಾಡಿಸುವ ಮೂಲಕ ಮಕ್ಕಳನ್ನು ಬರಮಾಡಿಕೊಂಡರು.</p>.<p>ಮುಖ್ಯಶಿಕ್ಷಕ ಸುರೇಶ ಬೇನಳ್ಳಿ ಮಾತನಾಡಿ, ‘ಇಲಾಖೆಯ ನಿರ್ದೇಶನದಂತೆ ಶಾಲಾ ಆರಂಭೋತ್ಸವ, ಶಿಕ್ಷಕ-ಪಾಲಕರ ಮಹಾಸಭೆಯ ಉದ್ದೇಶದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು. ಪತ್ರಕರ್ತ ಮುದ್ದಪ್ಪ ಗೊಂದಿ ಹೊಸಳ್ಳಿ ಮಾತನಾಡಿದರು.</p>.<p>ಶಾಲಾ ಆರಂಭೋತ್ಸವ ಸವಿ ನೆನಪಿಗಾಗಿ ಆವರಣದಲ್ಲಿ ಸಸಿ ನೆಡಲಾಯಿತು. ಪ್ರೌಢಶಾಲೆ ವಿಭಾಗದ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನೆ ನೆರವೇರಿತು. ಮುಖ್ಯಶಿಕ್ಷಕ ಸುರೇಶ ಬೇನಳ್ಳಿ ಅವರು ಶಾಲೆಗೆ ಲ್ಯಾಪ್ ಟಾಪ್ ದೇಣಿಗೆ ನೀಡಿದರು. ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗಿರಿಧರ ನದಿಚ್ಯಾಗಿ, ನಾಗರಾಜ ಬಿ. ಮಾತನಾಡಿದರು. ಪ್ರೌಢಶಾಲೆ ಮುಖ್ಯಶಿಕ್ಷಕ ಹನುಮಂತಪ್ಪ ಕುರಿ, ಶಿಕ್ಷಕರಾದ ಬೆಟದಪ್ಪ, ರಾಜ ಮಹಮ್ಮದ್, ಶಿಲ್ಪಾ, ಕವಿತಾ ಪೂಜಾರ ಹಾಜರಿದ್ದರು.</p>.<p>ರೇಖಾ ನಿರೂಪಿಸಿದರು. ಅರುಣಕುಮಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-35-283278025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುನಿರಾಬಾದ್: ಸಮೀಪದ ಬೇವಿನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮಕ್ಕಳಿಗೆ ಅಕ್ಷರಾಭ್ಯಾಸ’ ಮಾಡಿಸುವ ಮೂಲಕ ಸೋಮವಾರ ಶಾಲಾ ಆರಂಭೋತ್ಸವ ಸಂಭ್ರಮದಿಂದ ನೆರವೇರಿತು.</p>.<p>ಬೆಳಿಗ್ಗೆ ಗ್ರಾಮದಲ್ಲಿ ಜಾಥಾ ನಡೆಸಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಮನವಿ ಮಾಡಲಾಯಿತು. ನಂತರ ಶಾಲೆಗೆ ಬಂದ ಮಕ್ಕಳನ್ನು ಹೂ ಮಳೆಗರೆಯುವ ಮೂಲಕ ಸ್ವಾಗತಿಸಲಾಯಿತು. ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು.</p>.<p>ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಶರಣಯ್ಯ ಹಿರೇಮಠ ಅವರು ಅಕ್ಷರ ಅಭ್ಯಾಸ ಮಾಡಿಸುವ ಮೂಲಕ ಮಕ್ಕಳನ್ನು ಬರಮಾಡಿಕೊಂಡರು.</p>.<p>ಮುಖ್ಯಶಿಕ್ಷಕ ಸುರೇಶ ಬೇನಳ್ಳಿ ಮಾತನಾಡಿ, ‘ಇಲಾಖೆಯ ನಿರ್ದೇಶನದಂತೆ ಶಾಲಾ ಆರಂಭೋತ್ಸವ, ಶಿಕ್ಷಕ-ಪಾಲಕರ ಮಹಾಸಭೆಯ ಉದ್ದೇಶದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು. ಪತ್ರಕರ್ತ ಮುದ್ದಪ್ಪ ಗೊಂದಿ ಹೊಸಳ್ಳಿ ಮಾತನಾಡಿದರು.</p>.<p>ಶಾಲಾ ಆರಂಭೋತ್ಸವ ಸವಿ ನೆನಪಿಗಾಗಿ ಆವರಣದಲ್ಲಿ ಸಸಿ ನೆಡಲಾಯಿತು. ಪ್ರೌಢಶಾಲೆ ವಿಭಾಗದ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನೆ ನೆರವೇರಿತು. ಮುಖ್ಯಶಿಕ್ಷಕ ಸುರೇಶ ಬೇನಳ್ಳಿ ಅವರು ಶಾಲೆಗೆ ಲ್ಯಾಪ್ ಟಾಪ್ ದೇಣಿಗೆ ನೀಡಿದರು. ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗಿರಿಧರ ನದಿಚ್ಯಾಗಿ, ನಾಗರಾಜ ಬಿ. ಮಾತನಾಡಿದರು. ಪ್ರೌಢಶಾಲೆ ಮುಖ್ಯಶಿಕ್ಷಕ ಹನುಮಂತಪ್ಪ ಕುರಿ, ಶಿಕ್ಷಕರಾದ ಬೆಟದಪ್ಪ, ರಾಜ ಮಹಮ್ಮದ್, ಶಿಲ್ಪಾ, ಕವಿತಾ ಪೂಜಾರ ಹಾಜರಿದ್ದರು.</p>.<p>ರೇಖಾ ನಿರೂಪಿಸಿದರು. ಅರುಣಕುಮಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-35-283278025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>