<p>ಭದ್ರಾವತಿ: ‘ಶೋಷಿತರ ಕಲ್ಯಾಣಕ್ಕೆ ಜೀವನವನ್ನೇ ಮುಡಿಪಾಗಿಟ್ಟ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಬದುಕು ಹಾಗೂ ಸಾಧನೆ ಅನುಕರಣೀಯ’ ಎಂದು ವಿಐಎಸ್ಎಲ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯ ಮಹಾಪ್ರಬಂಧಕ ಬಿ. ವಿಶ್ವನಾಥ್ ಅಭಿಪ್ರಾಯಪಟ್ಟರು.</p>.<p>ನಗರದ ಸೈಲ್ ವಿಐಎಸ್ಎಲ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಿರಂತರ ಓದು ಹಾಗೂ ಅಧ್ಯಯನದಿಂದ ಅಪಾರ ಪಾಂಡಿತ್ಯ ಸಂಪಾದಿಸಿದ್ದ ಅಂಬೇಡ್ಕರ್, ಭಾರತೀಯ ಸಂವಿಧಾನ ರಚನೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸಿದರು. ಬಾಲ್ಯದಿಂದಲೇ ಸಾಮಾಜಿಕವಾಗಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಿದರೂ ಛಲ ಬಿಡದೆ ಶೋಷಿತರ ಸಬಲೀಕರಣಕ್ಕಾಗಿ ನಡೆಸಿದ ಹೋರಾಟ ಪ್ರಶಂಸನೀಯ’ ಎಂದರು.</p>.<p>ವಿಐಎಸ್ಎಲ್ ಪ್ರಭಾರ ಕಾರ್ಯನಿರ್ವಾಹಕ ನಿರ್ದೇಶಕ ಟಿ. ರವಿಚಂದ್ರನ್, ಮಹಾ ಪ್ರಬಂಧಕರಾದ ಎಂ. ಸುಬ್ಬರಾವ್, ಸುಂದರ ವಡಿವೇಲು, ಕಾರ್ಮಿಕರ ಸಂಘದ ಅಧ್ಯಕ್ಷ ಪಿ. ಅಮೃತ್ ಕುಮಾರ್, ಅಧಿಕಾರಿಗಳ ಸಂಘದ ಅಧ್ಯಕ್ಷ ಅಜಯ್ ಡಿ. ಸೋಂಕುವಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ವಾಚಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-42-1478234482</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ‘ಶೋಷಿತರ ಕಲ್ಯಾಣಕ್ಕೆ ಜೀವನವನ್ನೇ ಮುಡಿಪಾಗಿಟ್ಟ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಬದುಕು ಹಾಗೂ ಸಾಧನೆ ಅನುಕರಣೀಯ’ ಎಂದು ವಿಐಎಸ್ಎಲ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯ ಮಹಾಪ್ರಬಂಧಕ ಬಿ. ವಿಶ್ವನಾಥ್ ಅಭಿಪ್ರಾಯಪಟ್ಟರು.</p>.<p>ನಗರದ ಸೈಲ್ ವಿಐಎಸ್ಎಲ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಿರಂತರ ಓದು ಹಾಗೂ ಅಧ್ಯಯನದಿಂದ ಅಪಾರ ಪಾಂಡಿತ್ಯ ಸಂಪಾದಿಸಿದ್ದ ಅಂಬೇಡ್ಕರ್, ಭಾರತೀಯ ಸಂವಿಧಾನ ರಚನೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸಿದರು. ಬಾಲ್ಯದಿಂದಲೇ ಸಾಮಾಜಿಕವಾಗಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಿದರೂ ಛಲ ಬಿಡದೆ ಶೋಷಿತರ ಸಬಲೀಕರಣಕ್ಕಾಗಿ ನಡೆಸಿದ ಹೋರಾಟ ಪ್ರಶಂಸನೀಯ’ ಎಂದರು.</p>.<p>ವಿಐಎಸ್ಎಲ್ ಪ್ರಭಾರ ಕಾರ್ಯನಿರ್ವಾಹಕ ನಿರ್ದೇಶಕ ಟಿ. ರವಿಚಂದ್ರನ್, ಮಹಾ ಪ್ರಬಂಧಕರಾದ ಎಂ. ಸುಬ್ಬರಾವ್, ಸುಂದರ ವಡಿವೇಲು, ಕಾರ್ಮಿಕರ ಸಂಘದ ಅಧ್ಯಕ್ಷ ಪಿ. ಅಮೃತ್ ಕುಮಾರ್, ಅಧಿಕಾರಿಗಳ ಸಂಘದ ಅಧ್ಯಕ್ಷ ಅಜಯ್ ಡಿ. ಸೋಂಕುವಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ವಾಚಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-42-1478234482</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>