<p>ಭಾಲ್ಕಿ: ‘ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸುವುದು ಇಂದಿನ ತುರ್ತು ಅಗತ್ಯವಾಗಿದೆ’ ಎಂದು ಯೋಗ ಪ್ರಮುಖ ಗುರುನಾಥ ರಾಜಗೀರಾ ಹೇಳಿದರು.</p>.<p>ಪಟ್ಟಣದ ಸಂಸ್ಕಾರ ಪಬ್ಲಿಕ್ ಶಾಲೆಯಲ್ಲಿ ನಡೆದ ವಾಷಿಕೋತ್ಸವ ಮತ್ತು ಸಂಸ್ಕಾರ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಂಸ್ಕಾರ ಪಬ್ಲಿಕ್ ಶಾಲೆಯು ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಸ್ಪರ್ಧಾ ಜಗತ್ತಿನ ಶಿಕ್ಷಣಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಮಕ್ಕಳಲ್ಲಿ ದೇಶ ಭಕ್ತಿಯನ್ನು ಬೆಳೆಸುವುದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ’ ಎಂದು ಹೇಳಿದರು.</p>.<p>ಮೆಹಕರ ಪಿಎಸ್ಐ ಸಿದ್ದವೀರರೆಡ್ಡಿ ಮಾತನಾಡಿ, ‘ದೇಶದ ಭವಿಷ್ಯ ಕಟ್ಟುವ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅತ್ಯವಶ್ಯಕವಾಗಿದೆ. ಪಾಲಕರು ತಮ್ಮ ಕರ್ತವ್ಯ ನಿಭಾಯಿಸುವುದರ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡುವ ಕಾರ್ಯಮಾಡಬೇಕು’ ಎಂದರು. ಸಂಸ್ಥೆಯ ಅಧ್ಯಕ್ಷ ಈಶ್ವರ ರುಮ್ಮಾ ಮಾತನಾಡಿದರು.</p>.<p>ಪ್ರಮುಖರಾದ ಅಮರ ಹಲಮಂಡಗೆ, ಅರವಿಂದ ಕುಲಕರ್ಣಿ, ಶಿವಕುಮಾರ ಕೇರೂರೆ, ದತ್ತು ಪಾಂಡ್ರೆ, ಚಂದ್ರಕಾಂತ ತಳವಾಡೆ, ಲಕ್ಷ್ಮಿ ದೇಶಮುಖ, ಲಕ್ಷ್ಮಿ ಪುರಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-33-1442162612</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸುವುದು ಇಂದಿನ ತುರ್ತು ಅಗತ್ಯವಾಗಿದೆ’ ಎಂದು ಯೋಗ ಪ್ರಮುಖ ಗುರುನಾಥ ರಾಜಗೀರಾ ಹೇಳಿದರು.</p>.<p>ಪಟ್ಟಣದ ಸಂಸ್ಕಾರ ಪಬ್ಲಿಕ್ ಶಾಲೆಯಲ್ಲಿ ನಡೆದ ವಾಷಿಕೋತ್ಸವ ಮತ್ತು ಸಂಸ್ಕಾರ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಂಸ್ಕಾರ ಪಬ್ಲಿಕ್ ಶಾಲೆಯು ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಸ್ಪರ್ಧಾ ಜಗತ್ತಿನ ಶಿಕ್ಷಣಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಮಕ್ಕಳಲ್ಲಿ ದೇಶ ಭಕ್ತಿಯನ್ನು ಬೆಳೆಸುವುದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ’ ಎಂದು ಹೇಳಿದರು.</p>.<p>ಮೆಹಕರ ಪಿಎಸ್ಐ ಸಿದ್ದವೀರರೆಡ್ಡಿ ಮಾತನಾಡಿ, ‘ದೇಶದ ಭವಿಷ್ಯ ಕಟ್ಟುವ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅತ್ಯವಶ್ಯಕವಾಗಿದೆ. ಪಾಲಕರು ತಮ್ಮ ಕರ್ತವ್ಯ ನಿಭಾಯಿಸುವುದರ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡುವ ಕಾರ್ಯಮಾಡಬೇಕು’ ಎಂದರು. ಸಂಸ್ಥೆಯ ಅಧ್ಯಕ್ಷ ಈಶ್ವರ ರುಮ್ಮಾ ಮಾತನಾಡಿದರು.</p>.<p>ಪ್ರಮುಖರಾದ ಅಮರ ಹಲಮಂಡಗೆ, ಅರವಿಂದ ಕುಲಕರ್ಣಿ, ಶಿವಕುಮಾರ ಕೇರೂರೆ, ದತ್ತು ಪಾಂಡ್ರೆ, ಚಂದ್ರಕಾಂತ ತಳವಾಡೆ, ಲಕ್ಷ್ಮಿ ದೇಶಮುಖ, ಲಕ್ಷ್ಮಿ ಪುರಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-33-1442162612</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>