<p>ಭಾಲ್ಕಿ: ‘ಶಿಕ್ಷಣವು ಕೇವಲ ಪಠ್ಯ ಪುಸ್ತಕಗಳಲ್ಲಿನ ಜ್ಞಾನಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ದಾರಿಯಾಗಬೇಕು’ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.</p>.<p>ತಾಲ್ಲೂಕಿನ ತಳವಾಡ (ಕೆ) ಗ್ರಾಮದ ಅಲ್ಲಮಪ್ರಭು ಬಿ. ಇಡಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗುರು ದರ್ಶನ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಸಿದ್ಧಾಂತಾಧಾರಿತ ಅಧ್ಯಯನಕ್ಕಿಂತಲೂ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ತಿಳುವಳಿಕೆಯನ್ನು ವಿಸ್ತರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ’ ಎಂದು ತಿಳಿಸಿದರು.</p>.<p>‘ಪ್ರಾಯೋಗಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ವಿಮರ್ಶಾತ್ಮಕ ಚಿಂತನೆ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ. ವಿಜ್ಞಾನ ಪ್ರಯೋಗಗಳು, ಕ್ರೀಡೆ, ಕಲಾ ಚಟುವಟಿಕೆಗಳು ಹಾಗೂ ಸಮೂಹ ಚರ್ಚೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವುದಲ್ಲದೆ, ತಂಡದಲ್ಲಿ ಕೆಲಸ ಮಾಡುವ ಮನೋಭಾವವನ್ನು ರೂಪಿಸುತ್ತವೆ’ ಎಂದು ಹೇಳಿದರು.</p>.<p>ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಪ್ರಾಚಾರ್ಯ ಪಾಂಡುರಂಗ ವಿ. ಕುಂಬಾರ ಮಾತನಾಡಿದರು. ಹಿರೇಮಠ ಸಂಸ್ಥಾನದ ಶಿವಬಸವ ದೇವರು ಸೇರಿದಂತೆ ಸಿಬ್ಬಂದಿ ಇದ್ದರು. ಸುಧಾರಾಣಿ ಸ್ವಾಗತಿಸಿದರು. ಮಹೇಶ, ಸಹನಾ ನಿರೂಪಿಸಿದರು. ಹಣಮಂತ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-33-1120692455</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಶಿಕ್ಷಣವು ಕೇವಲ ಪಠ್ಯ ಪುಸ್ತಕಗಳಲ್ಲಿನ ಜ್ಞಾನಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ದಾರಿಯಾಗಬೇಕು’ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.</p>.<p>ತಾಲ್ಲೂಕಿನ ತಳವಾಡ (ಕೆ) ಗ್ರಾಮದ ಅಲ್ಲಮಪ್ರಭು ಬಿ. ಇಡಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗುರು ದರ್ಶನ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಸಿದ್ಧಾಂತಾಧಾರಿತ ಅಧ್ಯಯನಕ್ಕಿಂತಲೂ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ತಿಳುವಳಿಕೆಯನ್ನು ವಿಸ್ತರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ’ ಎಂದು ತಿಳಿಸಿದರು.</p>.<p>‘ಪ್ರಾಯೋಗಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ವಿಮರ್ಶಾತ್ಮಕ ಚಿಂತನೆ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ. ವಿಜ್ಞಾನ ಪ್ರಯೋಗಗಳು, ಕ್ರೀಡೆ, ಕಲಾ ಚಟುವಟಿಕೆಗಳು ಹಾಗೂ ಸಮೂಹ ಚರ್ಚೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವುದಲ್ಲದೆ, ತಂಡದಲ್ಲಿ ಕೆಲಸ ಮಾಡುವ ಮನೋಭಾವವನ್ನು ರೂಪಿಸುತ್ತವೆ’ ಎಂದು ಹೇಳಿದರು.</p>.<p>ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಪ್ರಾಚಾರ್ಯ ಪಾಂಡುರಂಗ ವಿ. ಕುಂಬಾರ ಮಾತನಾಡಿದರು. ಹಿರೇಮಠ ಸಂಸ್ಥಾನದ ಶಿವಬಸವ ದೇವರು ಸೇರಿದಂತೆ ಸಿಬ್ಬಂದಿ ಇದ್ದರು. ಸುಧಾರಾಣಿ ಸ್ವಾಗತಿಸಿದರು. ಮಹೇಶ, ಸಹನಾ ನಿರೂಪಿಸಿದರು. ಹಣಮಂತ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-33-1120692455</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>