<p>ಭಟ್ಕಳ: ‘ವಿದ್ಯಾರ್ಥಿಗಳು ಋಣಾತ್ಮಕವಾಗಿ ಚಿಂತಿಸಬಾರದು, ಗುಣಾತ್ಮಕ ಚಿಂತನೆಯೊಂದಿಗೆ ಶ್ರದ್ಧೆಯಿಂದ ಶ್ರಮಿಸಿದರೆ, ಏನನ್ನಾದರೂ ಸಾಧಿಸಬಹುದು’ ಎಂದು ಹೊನ್ನಾವರದ ಮೋಹನ ಕೆ ಶೆಟ್ಟಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವಿನೋದ ಹೆಗ್ಡೆ ಹೇಳಿದರು.</p>.<p>ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹಳೇ ವಿದ್ಯಾರ್ಥಿ ಬ್ಯಾಂಕ್ ಅಫ್ ಬರೋಡಾ, ಉದ್ಯೋಗಿ ರಜತ ಆಚಾರ್ಯ ಮಾತನಾಡಿ, ‘ವಿದ್ಯಾರ್ಥಿಗಳು ಕೌಶಲ, ಸಂವಹನ ಸಾಮರ್ಥ್ಯವನ್ನು ವೃದ್ಧಿಸಿಕೊಂಡು, ಸತತ ಪ್ರಯತ್ನದ ಮೂಲಕ ಅವಕಾಶಗಳನ್ನು ಗಿಟ್ಟಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಭಟ್ಕಳ ಎಜುಕೇಶನ್ ಟ್ರಸ್ಟ'ನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ ಮಾತನಾಡಿ, ‘ಮುಂದಿನ ಶೈಕ್ಷಣಿಕ ವರ್ಷ ಕಾಲೇಜಿನಲ್ಲಿ ಅಕ್ಷ-2026 ರ ಅಡಿಯಲ್ಲಿ ಎ.ಐ ಸರ್ಟಿಫಿಕೇಟ್, ಕೌಶಲ ತರಬೇತಿ, ಸಾಮಾಜಿಕ ಜಾಗೃತಿ ಗೆ ವಿಶೇಷ ಪ್ರಾಶಸ್ತ್ಯ ನೀಡಲಾಗುವುದು ಎಂದು ಹೇಳಿದರು.</p>.<p>ಟ್ರಸ್ಟ್ ಅಧ್ಯಕ್ಷ ಡಾ.ಸುರೇಶ ನಾಯಕ ಮಾತನಾಡಿ, ‘ನಮ್ಮಲ್ಲಿನ ಕ್ಯಾಂಪಸ್ ನೇಮಕಾತಿ ತರಬೇತಿಯಲ್ಲಿ ಶಿಸ್ತಿನಿಂದ ಪಾಲ್ಗೊಳ್ಳುವುದರೊಂದಿಗೆ, ಎಲ್ಲರೂ ಉದ್ಯೋಗವಂತರಾಗಬೇಕು’ ಎಂದು ಹೇಳಿದರು.</p>.<p>ಟ್ರಸ್ಟಿ ರಮೇಶ ಖಾರ್ವಿ ಮಾತನಾಡಿದರು. ಕ್ಯಾಂಪಸ್ ನೇಮಕಾತಿಯ ವಿವರವನ್ನೊಳಗೊಂಡ ಪೋಸ್ಟರ್ನ್ನು ಅನಾವರಣಗೊಳಿಸಲಾಯಿತು. 2025-26ನೇ ಸಾಲಿನ ವಿವಿಧ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪಠ್ಯ ಪಠ್ಯೇತರ, ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲ ಶ್ರೀನಾಥ ಪೈ ಎಲ್ಲರನ್ನೂ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಜರುಗಿದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-20-1833270592</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಟ್ಕಳ: ‘ವಿದ್ಯಾರ್ಥಿಗಳು ಋಣಾತ್ಮಕವಾಗಿ ಚಿಂತಿಸಬಾರದು, ಗುಣಾತ್ಮಕ ಚಿಂತನೆಯೊಂದಿಗೆ ಶ್ರದ್ಧೆಯಿಂದ ಶ್ರಮಿಸಿದರೆ, ಏನನ್ನಾದರೂ ಸಾಧಿಸಬಹುದು’ ಎಂದು ಹೊನ್ನಾವರದ ಮೋಹನ ಕೆ ಶೆಟ್ಟಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವಿನೋದ ಹೆಗ್ಡೆ ಹೇಳಿದರು.</p>.<p>ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹಳೇ ವಿದ್ಯಾರ್ಥಿ ಬ್ಯಾಂಕ್ ಅಫ್ ಬರೋಡಾ, ಉದ್ಯೋಗಿ ರಜತ ಆಚಾರ್ಯ ಮಾತನಾಡಿ, ‘ವಿದ್ಯಾರ್ಥಿಗಳು ಕೌಶಲ, ಸಂವಹನ ಸಾಮರ್ಥ್ಯವನ್ನು ವೃದ್ಧಿಸಿಕೊಂಡು, ಸತತ ಪ್ರಯತ್ನದ ಮೂಲಕ ಅವಕಾಶಗಳನ್ನು ಗಿಟ್ಟಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಭಟ್ಕಳ ಎಜುಕೇಶನ್ ಟ್ರಸ್ಟ'ನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ ಮಾತನಾಡಿ, ‘ಮುಂದಿನ ಶೈಕ್ಷಣಿಕ ವರ್ಷ ಕಾಲೇಜಿನಲ್ಲಿ ಅಕ್ಷ-2026 ರ ಅಡಿಯಲ್ಲಿ ಎ.ಐ ಸರ್ಟಿಫಿಕೇಟ್, ಕೌಶಲ ತರಬೇತಿ, ಸಾಮಾಜಿಕ ಜಾಗೃತಿ ಗೆ ವಿಶೇಷ ಪ್ರಾಶಸ್ತ್ಯ ನೀಡಲಾಗುವುದು ಎಂದು ಹೇಳಿದರು.</p>.<p>ಟ್ರಸ್ಟ್ ಅಧ್ಯಕ್ಷ ಡಾ.ಸುರೇಶ ನಾಯಕ ಮಾತನಾಡಿ, ‘ನಮ್ಮಲ್ಲಿನ ಕ್ಯಾಂಪಸ್ ನೇಮಕಾತಿ ತರಬೇತಿಯಲ್ಲಿ ಶಿಸ್ತಿನಿಂದ ಪಾಲ್ಗೊಳ್ಳುವುದರೊಂದಿಗೆ, ಎಲ್ಲರೂ ಉದ್ಯೋಗವಂತರಾಗಬೇಕು’ ಎಂದು ಹೇಳಿದರು.</p>.<p>ಟ್ರಸ್ಟಿ ರಮೇಶ ಖಾರ್ವಿ ಮಾತನಾಡಿದರು. ಕ್ಯಾಂಪಸ್ ನೇಮಕಾತಿಯ ವಿವರವನ್ನೊಳಗೊಂಡ ಪೋಸ್ಟರ್ನ್ನು ಅನಾವರಣಗೊಳಿಸಲಾಯಿತು. 2025-26ನೇ ಸಾಲಿನ ವಿವಿಧ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪಠ್ಯ ಪಠ್ಯೇತರ, ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲ ಶ್ರೀನಾಥ ಪೈ ಎಲ್ಲರನ್ನೂ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಜರುಗಿದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-20-1833270592</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>