<p>ಬಿಡದಿ: ಬಾಗಲಕೋಟೆ ಬಿ.ವಿ.ವಿ ಸಂಘ ಮತ್ತು ಅಮೃತ ಎಂಜಿನಿಯರಿಂಗ್ ಕಾಲೇಜು ಹಾಗೂ ನಿರ್ವಹಣಾ ವಿಜ್ಞಾನ ಸಂಸ್ಥೆಯಲ್ಲಿ ‘ಬುದ್ಧಿವಂತ ಗಣಕ ವ್ಯವಸ್ಥೆಗಳಿಗಾಗಿ ವಿಶ್ವಾಸಾರ್ಹ ಕೃತಕ ಬುದ್ಧಿಮತ್ತೆ’ ವಿಷಯದ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಿತು.</p>.<p>ಐಇಇಇ ಕಂಪ್ಯೂಟರ್ ಸೊಸೈಟಿ ಬೆಂಗಳೂರು ಘಟಕದ ಅಧ್ಯಕ್ಷ ಡಾ.ಎಂ.ಅಭಿಷೇಕ್ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಿ, ‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಮಾನವ ಕಲ್ಯಾಣಕ್ಕೆ ಪೂರಕವಾಗಿ ಅಭಿವೃದ್ಧಿಪಡಿಸಬೇಕು. ವಿದ್ಯಾರ್ಥಿಗಳು ಸಮಾಜಮುಖಿ ಸಂಶೋಧನೆಗಳಿಗೆ ಒತ್ತು ನೀಡಬೇಕು’ ಎಂದರು.</p>.<p>ಸಂಸ್ಥೆ ಪ್ರಾಂಶುಪಾಲ ಡಾ.ಸಂತೋಷ್ ಎಂ.ಮುರನಾಳ ಮತ್ತು ಶೈಕ್ಷಣಿಕ ಮುಖ್ಯಸ್ಥ ಡಾ.ಕಾದದೇವರಮಠ, ಕೃತಕ ಬುದ್ಧಿಮತ್ತೆ ಹಾಗೂ ತಾಂತ್ರಿಕ ಕೌಶಲ ಮಹತ್ವ ವಿವರಿಸಿದರು. ದೇಶ-ವಿದೇಶಗಳ ನೂರಾರು ಸಂಶೋಧಕರು ಪಾಲ್ಗೊಂಡಿದ್ದ ಈ ಸಮಾವೇಶದಲ್ಲಿ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ, ಸೈಬರ್ ಭದ್ರತೆ ಮತ್ತು ದತ್ತಾಂಶ ವಿಜ್ಞಾನ ಕುರಿತು ಪ್ರಬಂಧ ಮಂಡನೆ ಹಾಗೂ ತಾಂತ್ರಿಕ ಚರ್ಚೆಗಳು ನಡೆದವು.</p>.<p>ಡಾ.ವಿರೇಶ್ ಪಾಟೀಲ, ಡಾ.ಶ್ರೀಧರ್, ಡಾ.ಬಿ.ಬಿ.ಡಿ.ಕುಮಾರ್, ಡಾ.ಮಂಜುನಾಥ್ ಎನ್., ಡಾ.ಅಕ್ಷತಾ ಮುಳಗುಂದ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-15-2031563946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಡದಿ: ಬಾಗಲಕೋಟೆ ಬಿ.ವಿ.ವಿ ಸಂಘ ಮತ್ತು ಅಮೃತ ಎಂಜಿನಿಯರಿಂಗ್ ಕಾಲೇಜು ಹಾಗೂ ನಿರ್ವಹಣಾ ವಿಜ್ಞಾನ ಸಂಸ್ಥೆಯಲ್ಲಿ ‘ಬುದ್ಧಿವಂತ ಗಣಕ ವ್ಯವಸ್ಥೆಗಳಿಗಾಗಿ ವಿಶ್ವಾಸಾರ್ಹ ಕೃತಕ ಬುದ್ಧಿಮತ್ತೆ’ ವಿಷಯದ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಿತು.</p>.<p>ಐಇಇಇ ಕಂಪ್ಯೂಟರ್ ಸೊಸೈಟಿ ಬೆಂಗಳೂರು ಘಟಕದ ಅಧ್ಯಕ್ಷ ಡಾ.ಎಂ.ಅಭಿಷೇಕ್ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಿ, ‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಮಾನವ ಕಲ್ಯಾಣಕ್ಕೆ ಪೂರಕವಾಗಿ ಅಭಿವೃದ್ಧಿಪಡಿಸಬೇಕು. ವಿದ್ಯಾರ್ಥಿಗಳು ಸಮಾಜಮುಖಿ ಸಂಶೋಧನೆಗಳಿಗೆ ಒತ್ತು ನೀಡಬೇಕು’ ಎಂದರು.</p>.<p>ಸಂಸ್ಥೆ ಪ್ರಾಂಶುಪಾಲ ಡಾ.ಸಂತೋಷ್ ಎಂ.ಮುರನಾಳ ಮತ್ತು ಶೈಕ್ಷಣಿಕ ಮುಖ್ಯಸ್ಥ ಡಾ.ಕಾದದೇವರಮಠ, ಕೃತಕ ಬುದ್ಧಿಮತ್ತೆ ಹಾಗೂ ತಾಂತ್ರಿಕ ಕೌಶಲ ಮಹತ್ವ ವಿವರಿಸಿದರು. ದೇಶ-ವಿದೇಶಗಳ ನೂರಾರು ಸಂಶೋಧಕರು ಪಾಲ್ಗೊಂಡಿದ್ದ ಈ ಸಮಾವೇಶದಲ್ಲಿ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ, ಸೈಬರ್ ಭದ್ರತೆ ಮತ್ತು ದತ್ತಾಂಶ ವಿಜ್ಞಾನ ಕುರಿತು ಪ್ರಬಂಧ ಮಂಡನೆ ಹಾಗೂ ತಾಂತ್ರಿಕ ಚರ್ಚೆಗಳು ನಡೆದವು.</p>.<p>ಡಾ.ವಿರೇಶ್ ಪಾಟೀಲ, ಡಾ.ಶ್ರೀಧರ್, ಡಾ.ಬಿ.ಬಿ.ಡಿ.ಕುಮಾರ್, ಡಾ.ಮಂಜುನಾಥ್ ಎನ್., ಡಾ.ಅಕ್ಷತಾ ಮುಳಗುಂದ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-15-2031563946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>