<p>ಕಮಠಾಣ (ಜನವಾಡ): ಕೃಷಿ ಕೋಟಾದಡಿ ಕೃಷಿ, ಪಶು ವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಗೆ ಆನ್ಲೈನ್ನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಳಿಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪರೀಕ್ಷಾ ಕೇಂದ್ರದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಪರೀಕ್ಷೆ ಕೇಂದ್ರದ ಎದುರು ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಪಾಲಕರು, ಮೊದಲ ಬಾರಿ ತಿರಸ್ಕರಿಸಿದ ನಂತರ ಪುನಃ ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಶೀಲಿಸಿ ಹಾಲ್ ಟಿಕೆಟ್ ನೀಡಬೇಕು ಇಲ್ಲವೇ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>ಯುಜಿ ಸಿಇಟಿ ಪ್ರಾಯೋಗಿಕ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಿತ್ತು. ಏಪ್ರಿಲ್ 27ರಂದು ಪರೀಕ್ಷೆಗೆ ಅರ್ಹ ಹಾಗೂ ಅನರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿತ್ತು. 243 ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕೃತಗೊಳಿಸಲಾಗಿತ್ತು ಎಂದು ತಿಳಿಸಿದರು.</p>.<p>ಆದಾಯ ಪ್ರಮಾಣ ಪತ್ರ, ಅಫಿಡವಿತ್ ಇತ್ಯಾದಿ ಕಾರಣಕ್ಕೆ ತಿರಸ್ಕೃತಗೊಂಡ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪುನಃ ಅಪ್ಲೋಡ್ ಮಾಡಲು ಮೇ 4 ರ ವರೆಗೆ ಕಾಲಾವಕಾಶ ಕೊಟ್ಟಿತ್ತು. 243 ಮಂದಿ ಅಗತ್ಯ ದಾಖಲೆಗಳೊಂದಿಗೆ ಪುನಃ ಅರ್ಜಿಗಳನ್ನು ಅಪ್ಲೋಡ್ ಮಾಡಿದ್ದಾರೆ. ಎಲ್ಲರಿಗೆ ಸಕ್ಸೆಸ್ಫುಲ್ ಎಂಬ ಸಂದೇಶವೂ ಬಂದಿದೆ. ಆದರೆ, ಅವುಗಳ ಪರಿಶೀಲನೆಯನ್ನೇ ಮಾಡಿಲ್ಲ. ಪುನಃ ಅಪ್ಲೋಡ್ ಮಾಡಿದ ಎಲ್ಲ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ ಎಂದು ಆರೋಪಿಸಿದರು.</p>.<p>ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಲೋಪದಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಹೀಗಾಗಿ ಕೂಡಲೇ ಪುನಃ ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಶೀಲಿಸಿ, ಹಾಲ್ ಟಿಕೆಟ್ ಕೊಡಬೇಕು. ಅದು ಸಾಧ್ಯವಾಗದಿದ್ದರೆ ಭಾನುವಾರ ನಡೆಯಲಿರುವ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>ಬಜರಂಗ ಕಾಶೆಂಪುರ, ದಿಲೀಪಕುಮಾರ ವರ್ಮಾ, ಶ್ರೀಕಾಂತ ಸಾಗರ್, ಪೀಟರ್, ರಾಜಶೇಖರ ದೇವಣಿ ಕಂದಗೂಳ್, ಆದರ್ಶ ರಾಜಕುಮಾರ, ಸ್ನೇಹಾ ರಾಜಕುಮಾರ, ಪ್ರಜ್ವಲ್ ವಿಶ್ವನಾಥ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-33-127946329</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಠಾಣ (ಜನವಾಡ): ಕೃಷಿ ಕೋಟಾದಡಿ ಕೃಷಿ, ಪಶು ವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಗೆ ಆನ್ಲೈನ್ನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಳಿಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪರೀಕ್ಷಾ ಕೇಂದ್ರದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಪರೀಕ್ಷೆ ಕೇಂದ್ರದ ಎದುರು ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಪಾಲಕರು, ಮೊದಲ ಬಾರಿ ತಿರಸ್ಕರಿಸಿದ ನಂತರ ಪುನಃ ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಶೀಲಿಸಿ ಹಾಲ್ ಟಿಕೆಟ್ ನೀಡಬೇಕು ಇಲ್ಲವೇ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>ಯುಜಿ ಸಿಇಟಿ ಪ್ರಾಯೋಗಿಕ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಿತ್ತು. ಏಪ್ರಿಲ್ 27ರಂದು ಪರೀಕ್ಷೆಗೆ ಅರ್ಹ ಹಾಗೂ ಅನರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿತ್ತು. 243 ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕೃತಗೊಳಿಸಲಾಗಿತ್ತು ಎಂದು ತಿಳಿಸಿದರು.</p>.<p>ಆದಾಯ ಪ್ರಮಾಣ ಪತ್ರ, ಅಫಿಡವಿತ್ ಇತ್ಯಾದಿ ಕಾರಣಕ್ಕೆ ತಿರಸ್ಕೃತಗೊಂಡ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪುನಃ ಅಪ್ಲೋಡ್ ಮಾಡಲು ಮೇ 4 ರ ವರೆಗೆ ಕಾಲಾವಕಾಶ ಕೊಟ್ಟಿತ್ತು. 243 ಮಂದಿ ಅಗತ್ಯ ದಾಖಲೆಗಳೊಂದಿಗೆ ಪುನಃ ಅರ್ಜಿಗಳನ್ನು ಅಪ್ಲೋಡ್ ಮಾಡಿದ್ದಾರೆ. ಎಲ್ಲರಿಗೆ ಸಕ್ಸೆಸ್ಫುಲ್ ಎಂಬ ಸಂದೇಶವೂ ಬಂದಿದೆ. ಆದರೆ, ಅವುಗಳ ಪರಿಶೀಲನೆಯನ್ನೇ ಮಾಡಿಲ್ಲ. ಪುನಃ ಅಪ್ಲೋಡ್ ಮಾಡಿದ ಎಲ್ಲ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ ಎಂದು ಆರೋಪಿಸಿದರು.</p>.<p>ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಲೋಪದಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಹೀಗಾಗಿ ಕೂಡಲೇ ಪುನಃ ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಶೀಲಿಸಿ, ಹಾಲ್ ಟಿಕೆಟ್ ಕೊಡಬೇಕು. ಅದು ಸಾಧ್ಯವಾಗದಿದ್ದರೆ ಭಾನುವಾರ ನಡೆಯಲಿರುವ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>ಬಜರಂಗ ಕಾಶೆಂಪುರ, ದಿಲೀಪಕುಮಾರ ವರ್ಮಾ, ಶ್ರೀಕಾಂತ ಸಾಗರ್, ಪೀಟರ್, ರಾಜಶೇಖರ ದೇವಣಿ ಕಂದಗೂಳ್, ಆದರ್ಶ ರಾಜಕುಮಾರ, ಸ್ನೇಹಾ ರಾಜಕುಮಾರ, ಪ್ರಜ್ವಲ್ ವಿಶ್ವನಾಥ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-33-127946329</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>