<p>ಭಾಲ್ಕಿ: ‘ದೇಶದ ಉನ್ನತಿಗಾಗಿ ರೈತರು ಸೇರಿದಂತೆ ಶ್ರಮಿಕರನ್ನು ಎಲ್ಲರೂ ಗೌರವಿಸಬೇಕು’ ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ್ ಪ್ಯಾಗೆ ಹೇಳಿದರು.</p>.<p>ತಾಲ್ಲೂಕಿನ ರುದನೂರದಲ್ಲಿ ಮಂಗಳವಾರ ನಡೆದ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯಾವುದೇ ದೇಶದ ಪ್ರಗತಿಯಲ್ಲಿ ಶ್ರಮಿಕರ ಪಾತ್ರ ಬಹಳ ಮಹತ್ವದ್ದಾಗಿದೆ. ಆದರೆ, ಪ್ರಸ್ತುತ ಶ್ರೀಮಂತರು, ಪಟ್ಟಭದ್ರರು, ಅಧರ್ಮೀಯರನ್ನು ಮಾತ್ರ ಗೌರವಿಸುತ್ತಿರುವುದು ಕಳವಳಕಾರಿ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಶಂಕರ ಗಣಗೊಂಡ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಸುಚಿತಾನಂದ ಕೆ. ಮಲ್ಕಾಪುರೆ, ಕನ್ನಡ ವಿಭಾಗದ ಮುಖ್ಯಸ್ಥ ರಾಜಕುಮಾರ, ದೇವದಾಸ್ ಯಲೀಶ್ ಮಾತನಾಡಿದರು.</p>.<p>ಶಿವಕುಮಾರ ಚಿಲ್ಲರ್ಗೆ, ಶೀಲಾ ಬಿರಾದಾರ, ಬಾಲಸುಬ್ರಹ್ಮಣ್ಯಂ, ಚನ್ನಕೇಶವ ಮೂರ್ತಿ, ಸುನೀಲಕುಮಾರ ಉಪಸ್ಥಿತರಿದ್ದರು. ಕೀರ್ತನ್ ನಿರೂಪಿಸಿದರು. ಪ್ರೊ. ಸುಮನ್ಬಾಯಿ ಸಿಂಧೆ ವಂದಿಸಿದರು. ಬೀದರ್ ವಿಶ್ವವಿದ್ಯಾಲಯ, ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-33-247718466</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ದೇಶದ ಉನ್ನತಿಗಾಗಿ ರೈತರು ಸೇರಿದಂತೆ ಶ್ರಮಿಕರನ್ನು ಎಲ್ಲರೂ ಗೌರವಿಸಬೇಕು’ ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ್ ಪ್ಯಾಗೆ ಹೇಳಿದರು.</p>.<p>ತಾಲ್ಲೂಕಿನ ರುದನೂರದಲ್ಲಿ ಮಂಗಳವಾರ ನಡೆದ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯಾವುದೇ ದೇಶದ ಪ್ರಗತಿಯಲ್ಲಿ ಶ್ರಮಿಕರ ಪಾತ್ರ ಬಹಳ ಮಹತ್ವದ್ದಾಗಿದೆ. ಆದರೆ, ಪ್ರಸ್ತುತ ಶ್ರೀಮಂತರು, ಪಟ್ಟಭದ್ರರು, ಅಧರ್ಮೀಯರನ್ನು ಮಾತ್ರ ಗೌರವಿಸುತ್ತಿರುವುದು ಕಳವಳಕಾರಿ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಶಂಕರ ಗಣಗೊಂಡ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಸುಚಿತಾನಂದ ಕೆ. ಮಲ್ಕಾಪುರೆ, ಕನ್ನಡ ವಿಭಾಗದ ಮುಖ್ಯಸ್ಥ ರಾಜಕುಮಾರ, ದೇವದಾಸ್ ಯಲೀಶ್ ಮಾತನಾಡಿದರು.</p>.<p>ಶಿವಕುಮಾರ ಚಿಲ್ಲರ್ಗೆ, ಶೀಲಾ ಬಿರಾದಾರ, ಬಾಲಸುಬ್ರಹ್ಮಣ್ಯಂ, ಚನ್ನಕೇಶವ ಮೂರ್ತಿ, ಸುನೀಲಕುಮಾರ ಉಪಸ್ಥಿತರಿದ್ದರು. ಕೀರ್ತನ್ ನಿರೂಪಿಸಿದರು. ಪ್ರೊ. ಸುಮನ್ಬಾಯಿ ಸಿಂಧೆ ವಂದಿಸಿದರು. ಬೀದರ್ ವಿಶ್ವವಿದ್ಯಾಲಯ, ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-33-247718466</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>