<p>ಗೋರನಳ್ಳಿ(ಜನವಾಡ): ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚಿಗೆ ಎಂಜಿನಿಯರಿಂಗ್ ಮತ್ತು ನಿರ್ವಹಣಾ ಅಧ್ಯಯನಗಳ ಪ್ರಚಲಿತ ಪ್ರವೃತ್ತಿಗಳ ಕುರಿತು ಎರಡನೇ ರಾಷ್ಟ್ರೀಯ ಸಮ್ಮೇಳನ ಶನಿವಾರ ನಡೆಯಿತು.</p>.<p>ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ವಿ.ಡಿ.ಮೈತ್ರಿ ಮಾತನಾಡಿ, ‘ತಂತ್ರಜ್ಞಾನ ಹಾಗೂ ನಿರ್ವಹಣಾ ಅಧ್ಯಯನ ಒಂದಕ್ಕೊಂದು ಅವಲಂಬಿತವಾಗಿವೆ. ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ, ಎಂಎಲ್, ಐಒಟಿ, ಡೇಟಾ ಅನಾಲಿಟಿಕ್ಸ್, ಕ್ವಾಂಟಮ್ ಕಂಪ್ಯೂಟಿಂಗ್ ಕುರಿತು ಅಧ್ಯಯನ ನಡೆಸಬೇಕು’ ಎಂದರು.</p>.<p>ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ಎಸ್.ಎಚ್.ಹೊನ್ನಳ್ಳಿ ಮಾತನಾಡಿ, ‘ಸುಸ್ಥಿರ ಇಂಧನ ಅಭಿವೃದ್ಧಿ, ಸುಸ್ಥಿರ ವ್ಯವಹಾರ ಅಭಿವೃದ್ಧಿ, ಜನರ ನಿರ್ವಹಣೆ ಬಗ್ಗೆ ಹೆಚ್ಚು ಅಧ್ಯಯನಗಳು ಆಗಬೇಕಿದೆ’ ಎಂದರು.</p>.<p>ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಉಮಾ ದೇಶಮುಖ ಮಾತನಾಡಿ, ‘ಸಮ್ಮೇಳನ ಹಲವು ತಾಂತ್ರಿಕ ಹಾಗೂ ನಿರ್ವಹಣಾ ಅಧ್ಯಯನಗಳಿಗೆ ಸಹಕಾರಿಯಾಗಲಿದೆ. ಕಾಲೇಜು ಇನ್ನೂ ಹೆಚ್ಚಿನ ಅಧ್ಯಯನಗಳಿಗೆ ಶ್ರಮಿಸಲಿದೆ’ ಎಂದರು.</p>.<p>ಪ್ರಾಚಾರ್ಯೆ ವಿನಿತಾ ಪಾಟೀಲ, ಜಿಎನ್ಐಟಿ ಕಾಲೇಜಿನ ಡೀನ್ ಶತ್ರುಘ್ನ ಪ್ರಸಾದ್ ಯಾದವ್, ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕ ಜಸ್ಮಿನೀತ್ ಕೌರ್ ಉಪನ್ಯಾಸ ನೀಡಿದರು.</p>.<p>ಈ ಸಂದರ್ಭದಲ್ಲಿ ಸಂಶೋಧನಾ ಪ್ರಬಂಧಗಳ ಪುಸ್ತಕ ಬಿಡುಗಡೆ ಮಾಡಲಾಯಿತು.</p>.<p>ಶರಣಬಸವೇಶ್ವರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ್ ಪ್ರತಾಪುರ ಇದ್ದರು. ಸಾಗರಕುಮಾರ ಬುಯ್ಯ ನಿರೂಪಿಸಿದರು. ಬಸವಲಿಂಗ ಸ್ವಾಮಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-33-959069448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋರನಳ್ಳಿ(ಜನವಾಡ): ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚಿಗೆ ಎಂಜಿನಿಯರಿಂಗ್ ಮತ್ತು ನಿರ್ವಹಣಾ ಅಧ್ಯಯನಗಳ ಪ್ರಚಲಿತ ಪ್ರವೃತ್ತಿಗಳ ಕುರಿತು ಎರಡನೇ ರಾಷ್ಟ್ರೀಯ ಸಮ್ಮೇಳನ ಶನಿವಾರ ನಡೆಯಿತು.</p>.<p>ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ವಿ.ಡಿ.ಮೈತ್ರಿ ಮಾತನಾಡಿ, ‘ತಂತ್ರಜ್ಞಾನ ಹಾಗೂ ನಿರ್ವಹಣಾ ಅಧ್ಯಯನ ಒಂದಕ್ಕೊಂದು ಅವಲಂಬಿತವಾಗಿವೆ. ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ, ಎಂಎಲ್, ಐಒಟಿ, ಡೇಟಾ ಅನಾಲಿಟಿಕ್ಸ್, ಕ್ವಾಂಟಮ್ ಕಂಪ್ಯೂಟಿಂಗ್ ಕುರಿತು ಅಧ್ಯಯನ ನಡೆಸಬೇಕು’ ಎಂದರು.</p>.<p>ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ಎಸ್.ಎಚ್.ಹೊನ್ನಳ್ಳಿ ಮಾತನಾಡಿ, ‘ಸುಸ್ಥಿರ ಇಂಧನ ಅಭಿವೃದ್ಧಿ, ಸುಸ್ಥಿರ ವ್ಯವಹಾರ ಅಭಿವೃದ್ಧಿ, ಜನರ ನಿರ್ವಹಣೆ ಬಗ್ಗೆ ಹೆಚ್ಚು ಅಧ್ಯಯನಗಳು ಆಗಬೇಕಿದೆ’ ಎಂದರು.</p>.<p>ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಉಮಾ ದೇಶಮುಖ ಮಾತನಾಡಿ, ‘ಸಮ್ಮೇಳನ ಹಲವು ತಾಂತ್ರಿಕ ಹಾಗೂ ನಿರ್ವಹಣಾ ಅಧ್ಯಯನಗಳಿಗೆ ಸಹಕಾರಿಯಾಗಲಿದೆ. ಕಾಲೇಜು ಇನ್ನೂ ಹೆಚ್ಚಿನ ಅಧ್ಯಯನಗಳಿಗೆ ಶ್ರಮಿಸಲಿದೆ’ ಎಂದರು.</p>.<p>ಪ್ರಾಚಾರ್ಯೆ ವಿನಿತಾ ಪಾಟೀಲ, ಜಿಎನ್ಐಟಿ ಕಾಲೇಜಿನ ಡೀನ್ ಶತ್ರುಘ್ನ ಪ್ರಸಾದ್ ಯಾದವ್, ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕ ಜಸ್ಮಿನೀತ್ ಕೌರ್ ಉಪನ್ಯಾಸ ನೀಡಿದರು.</p>.<p>ಈ ಸಂದರ್ಭದಲ್ಲಿ ಸಂಶೋಧನಾ ಪ್ರಬಂಧಗಳ ಪುಸ್ತಕ ಬಿಡುಗಡೆ ಮಾಡಲಾಯಿತು.</p>.<p>ಶರಣಬಸವೇಶ್ವರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ್ ಪ್ರತಾಪುರ ಇದ್ದರು. ಸಾಗರಕುಮಾರ ಬುಯ್ಯ ನಿರೂಪಿಸಿದರು. ಬಸವಲಿಂಗ ಸ್ವಾಮಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-33-959069448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>