<p>ಅಷ್ಟೂರು(ಜನವಾಡ): ‘ಮಹಿಳೆಯರು ಸಾಧನೆಗೆ ಇರುವ ಅವಕಾಶಗಳ ಸದುಪಯೋಗ ಪಡೆಯಬೇಕು’ ಎಂದು ಬೀದರ್ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಅಷ್ಟೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸ್ವ ಉದ್ಯೋಗ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಮುಂದೆ ಬರಬೇಕು’ ಎಂದು ಸಲಹೆ ಮಾಡಿದರು.</p>.<p>‘ಮಹಿಳೆಯರಲ್ಲಿ ಅಗಾಧ ಶಕ್ತಿ ಇದೆ. ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಹೀಗಾಗಿ ಕೀಳರಿಮೆ ಬಿಟ್ಟು, ಮುಂದಡಿ ಇಡಬೇಕು’ ಎಂದು ಪಿಡಿಒ ಗಾಯತ್ರಿದೇವಿ ಹೇಳಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಮಾತನಾಡಿದರು. ಮಹಿಳೆಯರು ಕೋಲಾಟ ಪ್ರದರ್ಶಿಸಿ ಗಮನ ಸೆಳೆದರು. ವಿವಿಧ ಸ್ಪರ್ಧೆಗಳ ವಿಜೇತ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕಿಯರನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೀದರ್ ಗ್ರಾಮೀಣ ಠಾಣೆ ಪಿಎಸ್ಐ ಸಂಗಮ್ಮ, ವಕೀಲ ಧನವಂತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ, ಸದಸ್ಯರಾದ ಕಸ್ತೂರಿಬಾಯಿ, ವಿಜಯಲಕ್ಷ್ಮಿ, ಶಂಕರೆಮ್ಮ, ಸಂಗಾರೆಡ್ಡಿ, ಕುಶಾಲರಾವ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-33-114854283</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಷ್ಟೂರು(ಜನವಾಡ): ‘ಮಹಿಳೆಯರು ಸಾಧನೆಗೆ ಇರುವ ಅವಕಾಶಗಳ ಸದುಪಯೋಗ ಪಡೆಯಬೇಕು’ ಎಂದು ಬೀದರ್ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಅಷ್ಟೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸ್ವ ಉದ್ಯೋಗ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಮುಂದೆ ಬರಬೇಕು’ ಎಂದು ಸಲಹೆ ಮಾಡಿದರು.</p>.<p>‘ಮಹಿಳೆಯರಲ್ಲಿ ಅಗಾಧ ಶಕ್ತಿ ಇದೆ. ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಹೀಗಾಗಿ ಕೀಳರಿಮೆ ಬಿಟ್ಟು, ಮುಂದಡಿ ಇಡಬೇಕು’ ಎಂದು ಪಿಡಿಒ ಗಾಯತ್ರಿದೇವಿ ಹೇಳಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಮಾತನಾಡಿದರು. ಮಹಿಳೆಯರು ಕೋಲಾಟ ಪ್ರದರ್ಶಿಸಿ ಗಮನ ಸೆಳೆದರು. ವಿವಿಧ ಸ್ಪರ್ಧೆಗಳ ವಿಜೇತ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕಿಯರನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೀದರ್ ಗ್ರಾಮೀಣ ಠಾಣೆ ಪಿಎಸ್ಐ ಸಂಗಮ್ಮ, ವಕೀಲ ಧನವಂತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ, ಸದಸ್ಯರಾದ ಕಸ್ತೂರಿಬಾಯಿ, ವಿಜಯಲಕ್ಷ್ಮಿ, ಶಂಕರೆಮ್ಮ, ಸಂಗಾರೆಡ್ಡಿ, ಕುಶಾಲರಾವ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-33-114854283</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>