<p>ಬ್ರಹ್ಮಾವರ: ‘ಮಾಹಿತಿಯ ಕೊರತೆಯಿಂದಾಗಿ ಇಂದಿನ ಮಕ್ಕಳು ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಮಾರ್ಗದರ್ಶನ ನೀಡಿ, ಶೈಕ್ಷಣಿಕವಾಗಿ ಬಲಿಷ್ಠಗೊಳಿಸಬೇಕು’ ಎಂದು ಚಿಂತಕ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ ಹೇಳಿದರು.</p>.<p>ಕೋಟದ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ, ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಅರಿವು ಡಿಜಿಟಲ್ ಗ್ರಂಥಾಲಯದ ಆಶ್ರಯದಲ್ಲಿ ಆಯೋಜಿಸಿದ್ದ ಶಿಕ್ಷಣ ಸಂಪದ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶೈಕ್ಷಣಿಕ ಚಟುವಟಿಕೆಗಳು ಪಠ್ಯಕ್ಕೆ ಸೀಮಿತವಾಗದೆ ವಿಸ್ತಾರಗೊಳ್ಳಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಜ್ಞಾನದ ಹರಿವು ಹೆಚ್ಚಬೇಕು. ಈ ಉದ್ದೇಶದಿಂದಲೇ ಶಿಕ್ಷಣ ಸಂಪದ ಕಾರ್ಯಕ್ರಮ ರೂಪಿಸಲಾಗಿದ್ದು, ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಶಿಕ್ಷಣ ಕ್ಷೇತ್ರದಲ್ಲಿ ಬೇಕಾದಷ್ಟು ಅವಕಾಶಗಳಿವೆ, ಆದರೆ ಅವುಗಳ ಸದ್ಬಳಕೆಯಾಗುತ್ತಿಲ್ಲ. ಇಬ್ರಾಹಿಂ ಸಾಹೇಬರ ಈ ಶೈಕ್ಷಣಿಕ ಚಿಂತನೆ ಶ್ಲಾಘನೀಯ ಎಂದರು.</p>.<p>ಸುಬ್ರಾಯ ಆಚಾರ್, ಶಿಬಿರದ ಮೇಲ್ವಿಚಾರಕಿ ಶಾರದಾ ಜೈನ್ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು. ಉನ್ನತಿ ಹಂದಟ್ಟು ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-28-1648600084</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ‘ಮಾಹಿತಿಯ ಕೊರತೆಯಿಂದಾಗಿ ಇಂದಿನ ಮಕ್ಕಳು ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಮಾರ್ಗದರ್ಶನ ನೀಡಿ, ಶೈಕ್ಷಣಿಕವಾಗಿ ಬಲಿಷ್ಠಗೊಳಿಸಬೇಕು’ ಎಂದು ಚಿಂತಕ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ ಹೇಳಿದರು.</p>.<p>ಕೋಟದ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ, ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಅರಿವು ಡಿಜಿಟಲ್ ಗ್ರಂಥಾಲಯದ ಆಶ್ರಯದಲ್ಲಿ ಆಯೋಜಿಸಿದ್ದ ಶಿಕ್ಷಣ ಸಂಪದ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶೈಕ್ಷಣಿಕ ಚಟುವಟಿಕೆಗಳು ಪಠ್ಯಕ್ಕೆ ಸೀಮಿತವಾಗದೆ ವಿಸ್ತಾರಗೊಳ್ಳಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಜ್ಞಾನದ ಹರಿವು ಹೆಚ್ಚಬೇಕು. ಈ ಉದ್ದೇಶದಿಂದಲೇ ಶಿಕ್ಷಣ ಸಂಪದ ಕಾರ್ಯಕ್ರಮ ರೂಪಿಸಲಾಗಿದ್ದು, ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಶಿಕ್ಷಣ ಕ್ಷೇತ್ರದಲ್ಲಿ ಬೇಕಾದಷ್ಟು ಅವಕಾಶಗಳಿವೆ, ಆದರೆ ಅವುಗಳ ಸದ್ಬಳಕೆಯಾಗುತ್ತಿಲ್ಲ. ಇಬ್ರಾಹಿಂ ಸಾಹೇಬರ ಈ ಶೈಕ್ಷಣಿಕ ಚಿಂತನೆ ಶ್ಲಾಘನೀಯ ಎಂದರು.</p>.<p>ಸುಬ್ರಾಯ ಆಚಾರ್, ಶಿಬಿರದ ಮೇಲ್ವಿಚಾರಕಿ ಶಾರದಾ ಜೈನ್ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು. ಉನ್ನತಿ ಹಂದಟ್ಟು ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-28-1648600084</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>