<p>ಬ್ರಹ್ಮಾವರ: ಓದು ಮನುಷ್ಯನನ್ನು ರೂಪಿಸಿದರೆ, ಸಾಹಿತ್ಯ ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದತ್ತ ಒಲವು ಬೆಳೆಸಿಕೊಳ್ಳುವುದು ಇಂದಿನ ಅಗತ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ್ ಹೇಳಿದರು.</p>.<p>ಇಲ್ಲಿನ ಮಾಬುಕಳದ ಫಾರ್ಚುನ್ ಅಕಾಡೆಮಿ ಆಫ್ ಸೈನ್ಸ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ವತಿಯಿಂದ ಆಯೋಜಿಸಿದ್ದ ‘ಸಾಹಿತ್ಯ ಸಂಚಾರ- 62’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾಲೇಜಿನ ವ್ಯವಸ್ಥಾಪಕ ತಾರಾನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕ ಪವನ್, ಸಾಹಿತ್ಯವು ಸಮಾಜ ಮತ್ತು ಜನಸಂಸ್ಕೃತಿಗಳ ಬಗ್ಗೆ ತಾತ್ವಿಕ ತಿಳಿವಳಿಕೆಮೂಡಿಸುತ್ತದೆ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಸರಿತಾ ಉಪಾಧ್ಯಾಯ ಅವರು ವೈದ್ಯಕೀಯ ಕ್ಷೇತ್ರ ಹಾಗೂ ಸಾಹಿತ್ಯದ ನಡುವಿನ ಸಂಬಂಧದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ನರೇಂದ್ರ ಕುಮಾರ್ ಕೋಟ ಅವರು ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಮಹಾನ್ ವ್ಯಕ್ತಿಗಳ ವಿವರ ನೀಡಿದರು.</p>.<p>ಮಹಾಲಕ್ಷ್ಮಿ ಸೋಮಯಾಜಿ ಅವರು ಆಂಗಿಕ ಅಭಿನಯದ ಮೂಲಕ ಸಾಹಿತ್ಯದ ಮೆರುಗನ್ನು ಹೆಚ್ಚಿಸಿದರೆ, ಅಚ್ಯುತ ಪೂಜಾರಿ ಅವರು ತಮ್ಮ ಸಾಧನೆಯ ಹಾದಿಯನ್ನು ಹಂಚಿಕೊಂಡು, ಕನ್ನಡ ಗೀತೆಗಳನ್ನು ಹಾಡಿ ರಂಜಿಸಿದರು.</p>.<p>ವಿದ್ಯಾರ್ಥಿ ಚೇತನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-28-1465052228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ಓದು ಮನುಷ್ಯನನ್ನು ರೂಪಿಸಿದರೆ, ಸಾಹಿತ್ಯ ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದತ್ತ ಒಲವು ಬೆಳೆಸಿಕೊಳ್ಳುವುದು ಇಂದಿನ ಅಗತ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ್ ಹೇಳಿದರು.</p>.<p>ಇಲ್ಲಿನ ಮಾಬುಕಳದ ಫಾರ್ಚುನ್ ಅಕಾಡೆಮಿ ಆಫ್ ಸೈನ್ಸ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ವತಿಯಿಂದ ಆಯೋಜಿಸಿದ್ದ ‘ಸಾಹಿತ್ಯ ಸಂಚಾರ- 62’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾಲೇಜಿನ ವ್ಯವಸ್ಥಾಪಕ ತಾರಾನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕ ಪವನ್, ಸಾಹಿತ್ಯವು ಸಮಾಜ ಮತ್ತು ಜನಸಂಸ್ಕೃತಿಗಳ ಬಗ್ಗೆ ತಾತ್ವಿಕ ತಿಳಿವಳಿಕೆಮೂಡಿಸುತ್ತದೆ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಸರಿತಾ ಉಪಾಧ್ಯಾಯ ಅವರು ವೈದ್ಯಕೀಯ ಕ್ಷೇತ್ರ ಹಾಗೂ ಸಾಹಿತ್ಯದ ನಡುವಿನ ಸಂಬಂಧದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ನರೇಂದ್ರ ಕುಮಾರ್ ಕೋಟ ಅವರು ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಮಹಾನ್ ವ್ಯಕ್ತಿಗಳ ವಿವರ ನೀಡಿದರು.</p>.<p>ಮಹಾಲಕ್ಷ್ಮಿ ಸೋಮಯಾಜಿ ಅವರು ಆಂಗಿಕ ಅಭಿನಯದ ಮೂಲಕ ಸಾಹಿತ್ಯದ ಮೆರುಗನ್ನು ಹೆಚ್ಚಿಸಿದರೆ, ಅಚ್ಯುತ ಪೂಜಾರಿ ಅವರು ತಮ್ಮ ಸಾಧನೆಯ ಹಾದಿಯನ್ನು ಹಂಚಿಕೊಂಡು, ಕನ್ನಡ ಗೀತೆಗಳನ್ನು ಹಾಡಿ ರಂಜಿಸಿದರು.</p>.<p>ವಿದ್ಯಾರ್ಥಿ ಚೇತನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-28-1465052228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>