<p>ಬ್ರಹ್ಮಾವರ: ‘ಇಂದಿನ ದಿನಗಳಲ್ಲಿ ಅತಿಯಾದ ಮೊಬೈಲ್ ಬಳಕೆ ಮಕ್ಕಳ ಮನಃಸ್ಥಿತಿಯ ಮೇಲೆ ಗಂಭೀರ, ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು ಜಾಗೃತಿ ವಹಿಸಿ, ಅವರಿಗೆ ಉತ್ತಮ ಸಂಸ್ಕಾರ ನೀಡಿ ಸುಸಂಸ್ಕೃತರನ್ನಾಗಿ ರೂಪಿಸಬೇಕು’ ಎಂದು ಸಾಮಾಜಿಕ ಚಿಂತಕ ಋಷಿರಾಜ್ ಸಾಸ್ತಾನ ಹೇಳಿದರು.</p>.<p>ಪಾಂಡೇಶ್ವರ ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಆಶ್ರಯದಲ್ಲಿ ಒಂದು ವಾರ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸೋಮವಾರ ಅವರು ಮಾತನಾಡಿದರು.</p>.<p>ಪಂಚಾಯಿತಿ ಆಯೋಜಿಸಿರುವ ಶಿಬಿರ ಮಕ್ಕಳ ಕೌಶಲಾಭಿವೃದ್ಧಿಗೆ ಪೂರಕವಾಗಿವೆ. ಪೋಷಕರು ಮಕ್ಕಳಿಗೆ ಭಾರತೀಯ, ಹಿಂದೂ ಪರಂಪರೆ, ಗುರು ಪರಂಪರೆ, ಆಚಾರ– ವಿಚಾರಗಳ ಬಗ್ಗೆ ತಿಳಿಸಬೇಕು. ವ್ಯಕ್ತಿತ್ವ ರೂಪಿಸುವಲ್ಲಿ ಸಂಸ್ಕಾರದ ಪಾತ್ರ ದೊಡ್ಡದು’ ಎಂದು ಕಿವಿಮಾತು ಹೇಳಿದರು.</p>.<p>ಸಂಪನ್ಮೂಲ ವ್ಯಕ್ತಿಯಾಗಿದ್ದ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರು ಮಕ್ಕಳಲ್ಲಿ ಕೌಶಲಗಳನ್ನು ಹೇಗೆ ವೃದ್ಧಿಸಿಕೊಳ್ಳಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು. 8 ದಿನಗಳಲ್ಲಿ ಮಾರ್ಗದರ್ಶನ ನೀಡಿದ ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಲಾಯಿತು.</p>.<p>ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳನ್ನು 4 ತಂಡಗಳಾಗಿ ವಿಂಗಡಿಸಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದ 2 ತಂಡಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಪಾಂಡೇಶ್ವರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಂದನಾ ಅಧ್ಯಕ್ಷತೆ ವಹಿಸಿದ್ದರು. ಉಷಾ ಗಣೇಶ್ ಪೂಜಾರಿ ನಿರೂಪಿಸಿದರು. ಗ್ರಂಥಪಾಲಕಿ ಜ್ಯೋತಿ ಪೂಜಾರಿ ಧನ್ಯವಾದ ಸಮರ್ಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-28-800127565</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ‘ಇಂದಿನ ದಿನಗಳಲ್ಲಿ ಅತಿಯಾದ ಮೊಬೈಲ್ ಬಳಕೆ ಮಕ್ಕಳ ಮನಃಸ್ಥಿತಿಯ ಮೇಲೆ ಗಂಭೀರ, ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು ಜಾಗೃತಿ ವಹಿಸಿ, ಅವರಿಗೆ ಉತ್ತಮ ಸಂಸ್ಕಾರ ನೀಡಿ ಸುಸಂಸ್ಕೃತರನ್ನಾಗಿ ರೂಪಿಸಬೇಕು’ ಎಂದು ಸಾಮಾಜಿಕ ಚಿಂತಕ ಋಷಿರಾಜ್ ಸಾಸ್ತಾನ ಹೇಳಿದರು.</p>.<p>ಪಾಂಡೇಶ್ವರ ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಆಶ್ರಯದಲ್ಲಿ ಒಂದು ವಾರ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸೋಮವಾರ ಅವರು ಮಾತನಾಡಿದರು.</p>.<p>ಪಂಚಾಯಿತಿ ಆಯೋಜಿಸಿರುವ ಶಿಬಿರ ಮಕ್ಕಳ ಕೌಶಲಾಭಿವೃದ್ಧಿಗೆ ಪೂರಕವಾಗಿವೆ. ಪೋಷಕರು ಮಕ್ಕಳಿಗೆ ಭಾರತೀಯ, ಹಿಂದೂ ಪರಂಪರೆ, ಗುರು ಪರಂಪರೆ, ಆಚಾರ– ವಿಚಾರಗಳ ಬಗ್ಗೆ ತಿಳಿಸಬೇಕು. ವ್ಯಕ್ತಿತ್ವ ರೂಪಿಸುವಲ್ಲಿ ಸಂಸ್ಕಾರದ ಪಾತ್ರ ದೊಡ್ಡದು’ ಎಂದು ಕಿವಿಮಾತು ಹೇಳಿದರು.</p>.<p>ಸಂಪನ್ಮೂಲ ವ್ಯಕ್ತಿಯಾಗಿದ್ದ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರು ಮಕ್ಕಳಲ್ಲಿ ಕೌಶಲಗಳನ್ನು ಹೇಗೆ ವೃದ್ಧಿಸಿಕೊಳ್ಳಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು. 8 ದಿನಗಳಲ್ಲಿ ಮಾರ್ಗದರ್ಶನ ನೀಡಿದ ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಲಾಯಿತು.</p>.<p>ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳನ್ನು 4 ತಂಡಗಳಾಗಿ ವಿಂಗಡಿಸಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದ 2 ತಂಡಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಪಾಂಡೇಶ್ವರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಂದನಾ ಅಧ್ಯಕ್ಷತೆ ವಹಿಸಿದ್ದರು. ಉಷಾ ಗಣೇಶ್ ಪೂಜಾರಿ ನಿರೂಪಿಸಿದರು. ಗ್ರಂಥಪಾಲಕಿ ಜ್ಯೋತಿ ಪೂಜಾರಿ ಧನ್ಯವಾದ ಸಮರ್ಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-28-800127565</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>