<p>ಬ್ರಹ್ಮಾವರ: ತಾಲ್ಲೂಕಿನ ಕೋಟ ಪಡುಕರೆಯಲ್ಲಿರುವ ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು.</p>.<p>ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ರಾಜೇಂದ್ರ ಎಸ್. ನಾಯಕ್ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ಆಧುನಿಕ ಸೌಲಭ್ಯಗಳು ಹಾಗೂ ಉತ್ತಮ ಕಲಿಕಾ ವಾತಾವರಣದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡುವಂತೆ ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿ ದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಮೇಶ್ ಎಸ್. ಕುಂದರ್, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಜನೆಯೇ ಮುಖ್ಯ. ಇದರಲ್ಲಿ ಯಾವುದೇ ರಾಜಿ ಬೇಡ ಎಂದರು.</p>.<p>ಸಭೆಯ ನಂತರ ಪ್ರತಿ ತರಗತಿಯ ಶೈಕ್ಷಣಿಕ ಸಲಹೆಗಾರರು ಆಯಾ ವಿದ್ಯಾರ್ಥಿಯ ಪೋಷಕರೊಂದಿಗೆ ಪ್ರತ್ಯೇಕವಾಗಿ ಸಂವಹನ ನಡೆಸಿದರು. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದ ವಿಶ್ಲೇಷಣೆ, ಹಾಜರಾತಿಯಲ್ಲಿನ ಏರಿಳಿತ, ವಿದ್ಯಾರ್ಥಿಗಳ ಶೈಕ್ಷಣಿಕ ಸುಧಾರಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.</p>.<p>ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್ ಉಪಸ್ಥಿತರಿದ್ದರು.</p>.<p>ರಕ್ಷಕ ಶಿಕ್ಷಕ ಸಂಘದ ಸಂಚಾಲಕ ಶಂಕರ್ ನಾಯ್ಕ್ ಬಿ. ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.</p>.<p>ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-28-2053500315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ತಾಲ್ಲೂಕಿನ ಕೋಟ ಪಡುಕರೆಯಲ್ಲಿರುವ ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು.</p>.<p>ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ರಾಜೇಂದ್ರ ಎಸ್. ನಾಯಕ್ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ಆಧುನಿಕ ಸೌಲಭ್ಯಗಳು ಹಾಗೂ ಉತ್ತಮ ಕಲಿಕಾ ವಾತಾವರಣದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡುವಂತೆ ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿ ದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಮೇಶ್ ಎಸ್. ಕುಂದರ್, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಜನೆಯೇ ಮುಖ್ಯ. ಇದರಲ್ಲಿ ಯಾವುದೇ ರಾಜಿ ಬೇಡ ಎಂದರು.</p>.<p>ಸಭೆಯ ನಂತರ ಪ್ರತಿ ತರಗತಿಯ ಶೈಕ್ಷಣಿಕ ಸಲಹೆಗಾರರು ಆಯಾ ವಿದ್ಯಾರ್ಥಿಯ ಪೋಷಕರೊಂದಿಗೆ ಪ್ರತ್ಯೇಕವಾಗಿ ಸಂವಹನ ನಡೆಸಿದರು. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದ ವಿಶ್ಲೇಷಣೆ, ಹಾಜರಾತಿಯಲ್ಲಿನ ಏರಿಳಿತ, ವಿದ್ಯಾರ್ಥಿಗಳ ಶೈಕ್ಷಣಿಕ ಸುಧಾರಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.</p>.<p>ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್ ಉಪಸ್ಥಿತರಿದ್ದರು.</p>.<p>ರಕ್ಷಕ ಶಿಕ್ಷಕ ಸಂಘದ ಸಂಚಾಲಕ ಶಂಕರ್ ನಾಯ್ಕ್ ಬಿ. ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.</p>.<p>ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-28-2053500315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>