<p>ಬೈಂದೂರು: ‘ಸರ್ಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಜೆಸಿಐ ಸಂಸ್ಥೆಯು ಕೈಗೊಂಡಿರುವ ‘ದಾನ್’ ಕಾರ್ಯಕ್ರಮವು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತವೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಹೇಳಿದರು.</p>.<p>ಜೆಸಿಐ ಬೈಂದೂರು ಸಿಟಿ ಸಂಸ್ಥೆಯ ಪ್ರಮುಖ ಯೋಜನೆಯಾದ ದಾನ್ ಕಾರ್ಯಕ್ರಮದ ಅಡಿಯಲ್ಲಿ ಬೈಂದೂರಿನ ಯೋಜನಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ಹಾಗೂ ಕಲಿಕೋಪಕರಣಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಜೆಸಿಐ ಬೈಂದೂರು ಸಿಟಿ ಘಟಕದ ಅಧ್ಯಕ್ಷೆ ಚೈತ್ರಾ ಅವರು ಪುಸ್ತಕ ಮತ್ತು ಕಲಿಕೋಪಕರಣಗಳನ್ನು ಶಾಲೆಯ ಮುಖ್ಯಶಿಕ್ಷಕಿ ಯಶೋದಾ ಅವರಿಗೆ ಹಸ್ತಾಂತರಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಬೈಂದೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷ ಪ್ರೇಮ, ಜೆಸಿಐ ಸ್ಥಾಪಕ ಅಧ್ಯಕ್ಷ ಮಣಿಕಂಠ ದೇವಾಡಿಗ, ಸದಸ್ಯರಾದ ರಾಜು ಮೊಗವೀರ, ಸುರೇಂದ್ರ ಶೇಟ್, ರಾಘವೇಂದ್ರ ಸುರ್ಕೂಂದ, ನಾಗೇಂದ್ರ ಆಚಾರ್ಯ ಯೋಜನಾ ನಗರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-28-1888755443</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಂದೂರು: ‘ಸರ್ಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಜೆಸಿಐ ಸಂಸ್ಥೆಯು ಕೈಗೊಂಡಿರುವ ‘ದಾನ್’ ಕಾರ್ಯಕ್ರಮವು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತವೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಹೇಳಿದರು.</p>.<p>ಜೆಸಿಐ ಬೈಂದೂರು ಸಿಟಿ ಸಂಸ್ಥೆಯ ಪ್ರಮುಖ ಯೋಜನೆಯಾದ ದಾನ್ ಕಾರ್ಯಕ್ರಮದ ಅಡಿಯಲ್ಲಿ ಬೈಂದೂರಿನ ಯೋಜನಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ಹಾಗೂ ಕಲಿಕೋಪಕರಣಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಜೆಸಿಐ ಬೈಂದೂರು ಸಿಟಿ ಘಟಕದ ಅಧ್ಯಕ್ಷೆ ಚೈತ್ರಾ ಅವರು ಪುಸ್ತಕ ಮತ್ತು ಕಲಿಕೋಪಕರಣಗಳನ್ನು ಶಾಲೆಯ ಮುಖ್ಯಶಿಕ್ಷಕಿ ಯಶೋದಾ ಅವರಿಗೆ ಹಸ್ತಾಂತರಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಬೈಂದೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷ ಪ್ರೇಮ, ಜೆಸಿಐ ಸ್ಥಾಪಕ ಅಧ್ಯಕ್ಷ ಮಣಿಕಂಠ ದೇವಾಡಿಗ, ಸದಸ್ಯರಾದ ರಾಜು ಮೊಗವೀರ, ಸುರೇಂದ್ರ ಶೇಟ್, ರಾಘವೇಂದ್ರ ಸುರ್ಕೂಂದ, ನಾಗೇಂದ್ರ ಆಚಾರ್ಯ ಯೋಜನಾ ನಗರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-28-1888755443</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>