ಶುಕ್ರವಾರ ಈ ಬಗ್ಗೆ ಮಾತನಾಡಿರುವ ಅವರು, ಸಮಸ್ಯೆಯನ್ನು ಬಗೆಹರಿಸಲು ಒಂದು ಸಮನ್ವಯ ಸೂತ್ರ ರೂಪಿಸುವಂತೆ ಸೂಚಿಸಿತ್ತು. ಅದರಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದೆವು. ನ್ಯಾಯಾಲಯವು ಸಮಿತಿ ಕೊಟ್ಟ ವರದಿಯನ್ನು ಪುರಸ್ಕರಿಸಿರುವುದು ಸಂತಸ ತಂದಿದೆ ಎಂದಿದ್ದಾರೆ.