<p>ಚಾಮರಾಜನಗರ: ‘ಶತಮಾನ ಕಂಡ ಶಾಲೆಗಳಲ್ಲಿ ಜಿಲ್ಲೆಗೆ ಒಂದರಂತೆ 31 ಶಾಲೆಗಳನ್ನು ಪಾರಂಪರಿಕ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.</p>.<p>ಕನ್ನಡ ಮಾಧ್ಯಮ ಶಾಲೆಗಳ ಉಳಿವು ಕುರಿತು ಇಲ್ಲಿ ನಡೆದ ಸಭೆಯಲ್ಲಿ ಅವರು, ‘ಗಾಂಧೀಜಿ ಭೇಟಿ ನೀಡಿದ್ದ ಶಾಲೆ, ವಿಶ್ವೇಶ್ವರಯ್ಯ, ಕುವೆಂಪು ಓದಿದ ಶಾಲೆ, ಕನ್ನಡ ಭಾಷೆಯನ್ನು ಬೆಳೆಸಿದ ಮಹನೀಯರು, ವಿಜ್ಞಾನಿಗಳು ಓದಿದ ಶಾಲೆಗಳನ್ನು ಆಯ್ಕೆ ಮಾಡುವಂತೆ ಗಮನ ಸೆಳೆಯಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ 290 ಭಾಷೆಗಳು ಬಳಕೆಯಲ್ಲಿವೆ. 27 ಭಾಷೆಗಳನ್ನು 15 ಸಾವಿರಕ್ಕೂ ಹೆಚ್ಚು ಜನ ಬಳಸುತ್ತಾರೆ. ಹಿಂದಿ ಭಾಷೆ ಕಲಿಕೆಗೆ ನೀಡುವ ಆದ್ಯತೆಯನ್ನು ಈ ಭಾಷೆಗಳ ಕಲಿಕೆಗೂ ನೀಡಬೇಕು. ಕರಾವಳಿ ಭಾಗದ ಕೆಲ ಶಾಲೆಗಳಲ್ಲಿ ಕೊರಗ, ತುಳು ಭಾಷೆ, ಕೊಡಗಿನ ಕೆಲ ಶಾಲೆಗಳಲ್ಲಿ ಕೊಡವ ಭಾಷೆ, ಹೀಗೆ ಆಯಾ ಪ್ರಾಂತ್ಯದ ಆಡುಭಾಷೆ ಕಲಿಕೆಗೆ ಆದ್ಯತೆ ನೀಡಿದರೆ ಬಹುದೊಡ್ಡ ಸಾಂಸ್ಕೃತಿಕ ಕ್ರಾಂತಿ ಮಾಡಬಹುದು’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-51-1845640432</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ‘ಶತಮಾನ ಕಂಡ ಶಾಲೆಗಳಲ್ಲಿ ಜಿಲ್ಲೆಗೆ ಒಂದರಂತೆ 31 ಶಾಲೆಗಳನ್ನು ಪಾರಂಪರಿಕ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.</p>.<p>ಕನ್ನಡ ಮಾಧ್ಯಮ ಶಾಲೆಗಳ ಉಳಿವು ಕುರಿತು ಇಲ್ಲಿ ನಡೆದ ಸಭೆಯಲ್ಲಿ ಅವರು, ‘ಗಾಂಧೀಜಿ ಭೇಟಿ ನೀಡಿದ್ದ ಶಾಲೆ, ವಿಶ್ವೇಶ್ವರಯ್ಯ, ಕುವೆಂಪು ಓದಿದ ಶಾಲೆ, ಕನ್ನಡ ಭಾಷೆಯನ್ನು ಬೆಳೆಸಿದ ಮಹನೀಯರು, ವಿಜ್ಞಾನಿಗಳು ಓದಿದ ಶಾಲೆಗಳನ್ನು ಆಯ್ಕೆ ಮಾಡುವಂತೆ ಗಮನ ಸೆಳೆಯಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ 290 ಭಾಷೆಗಳು ಬಳಕೆಯಲ್ಲಿವೆ. 27 ಭಾಷೆಗಳನ್ನು 15 ಸಾವಿರಕ್ಕೂ ಹೆಚ್ಚು ಜನ ಬಳಸುತ್ತಾರೆ. ಹಿಂದಿ ಭಾಷೆ ಕಲಿಕೆಗೆ ನೀಡುವ ಆದ್ಯತೆಯನ್ನು ಈ ಭಾಷೆಗಳ ಕಲಿಕೆಗೂ ನೀಡಬೇಕು. ಕರಾವಳಿ ಭಾಗದ ಕೆಲ ಶಾಲೆಗಳಲ್ಲಿ ಕೊರಗ, ತುಳು ಭಾಷೆ, ಕೊಡಗಿನ ಕೆಲ ಶಾಲೆಗಳಲ್ಲಿ ಕೊಡವ ಭಾಷೆ, ಹೀಗೆ ಆಯಾ ಪ್ರಾಂತ್ಯದ ಆಡುಭಾಷೆ ಕಲಿಕೆಗೆ ಆದ್ಯತೆ ನೀಡಿದರೆ ಬಹುದೊಡ್ಡ ಸಾಂಸ್ಕೃತಿಕ ಕ್ರಾಂತಿ ಮಾಡಬಹುದು’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-51-1845640432</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>