<p>ಸಂತೇಮರಹಳ್ಳಿ: ಇಲ್ಲಿನ ಜೆಎಸ್ಎಸ್ ವಿದ್ಯಾಸಂಸ್ಥೆಯಲ್ಲಿ ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸೋಮವಾರ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.</p>.<p>ಪ್ರೌಢಶಾಲಾ ಮುಖ್ಯಶಿಕ್ಷಕ ಎ.ಜಿ.ಮರಿಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ಧೈರ್ಯದಿಂದ ಶಾಲೆಗೆ ಹಾಜರಾಗಬೇಕು. ರಜಾ ದಿನಗಳಿಂದ ಹೊರಬಂದು ಶಾಲೆಗೆ ತಪ್ಪದೇ ಹಾಜರಾಗಬೇಕು. ಶಿಕ್ಷಣದಿಂದ ಮಾತ್ರ ವ್ಯಕ್ತಿಯ ಅಭಿವೃದ್ಧಿ ಸಾದ್ಯ ಎಂಬುದನ್ನು ತಿಳಿದುಕೊಂಡು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ಹರಿಸಬೇಕು’ ಎಂದು ತಿಳಿಸಿದರು.</p>.<p>ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವೈ.ಪಿ.ವಿಶ್ವ ಮಾತನಾಡಿ, ‘ಶಾಲೆಗೆ ದಾಖಲಾದ ಹೊಸ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನದೊಂದಿಗೆ ಶಾಲೆಯ ವಾತಾವರಣಕ್ಕೆ ಹೊಂದಿಕೊಂಡು ಪಾಠಗಳ ಕಡೆಗೆ ಗಮನ ಹರಿಸಬೇಕು. ಗುರುಗಳ ಆಶೀರ್ವಾದದೊಂದಿಗೆ ಸನ್ಮಾರ್ಗದಲ್ಲಿ ನಡೆಯಬೇಕು’ ಎಂದು ತಿಳಿಸಿದರು.</p>.<p>ಶಿಕ್ಷಕರಾದ ಶೇಖರ್, ಲೋಕಮಣಿ, ದೀಪಿಕಾ, ಕಾಂತರಾಜು, ಮಲ್ಲಿಕಾರ್ಜುನ್ ಹಾಗೂ ಪೋಷಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-37-29266647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: ಇಲ್ಲಿನ ಜೆಎಸ್ಎಸ್ ವಿದ್ಯಾಸಂಸ್ಥೆಯಲ್ಲಿ ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸೋಮವಾರ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.</p>.<p>ಪ್ರೌಢಶಾಲಾ ಮುಖ್ಯಶಿಕ್ಷಕ ಎ.ಜಿ.ಮರಿಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ಧೈರ್ಯದಿಂದ ಶಾಲೆಗೆ ಹಾಜರಾಗಬೇಕು. ರಜಾ ದಿನಗಳಿಂದ ಹೊರಬಂದು ಶಾಲೆಗೆ ತಪ್ಪದೇ ಹಾಜರಾಗಬೇಕು. ಶಿಕ್ಷಣದಿಂದ ಮಾತ್ರ ವ್ಯಕ್ತಿಯ ಅಭಿವೃದ್ಧಿ ಸಾದ್ಯ ಎಂಬುದನ್ನು ತಿಳಿದುಕೊಂಡು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ಹರಿಸಬೇಕು’ ಎಂದು ತಿಳಿಸಿದರು.</p>.<p>ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವೈ.ಪಿ.ವಿಶ್ವ ಮಾತನಾಡಿ, ‘ಶಾಲೆಗೆ ದಾಖಲಾದ ಹೊಸ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನದೊಂದಿಗೆ ಶಾಲೆಯ ವಾತಾವರಣಕ್ಕೆ ಹೊಂದಿಕೊಂಡು ಪಾಠಗಳ ಕಡೆಗೆ ಗಮನ ಹರಿಸಬೇಕು. ಗುರುಗಳ ಆಶೀರ್ವಾದದೊಂದಿಗೆ ಸನ್ಮಾರ್ಗದಲ್ಲಿ ನಡೆಯಬೇಕು’ ಎಂದು ತಿಳಿಸಿದರು.</p>.<p>ಶಿಕ್ಷಕರಾದ ಶೇಖರ್, ಲೋಕಮಣಿ, ದೀಪಿಕಾ, ಕಾಂತರಾಜು, ಮಲ್ಲಿಕಾರ್ಜುನ್ ಹಾಗೂ ಪೋಷಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-37-29266647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>