<p>ಹಿರೇಮಳಲಿ(ಚನ್ನಗಿರಿ): ‘ಬಡ ವರ್ಗದ ಮಕ್ಕಳು ಆರ್ಥಿಕ ಸಮಸ್ಯೆಯಿಂದಾಗಿ ಉತ್ತಮ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಿಂದ ವಿಶೇಷ ಬೇಸಿಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪಿಡಿಒ ರಶ್ಮಿ ತಿಳಿಸಿದರು.</p>.<p>ತಾಲ್ಲೂಕಿನ ಹಿರೇಮಳಲಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅರಿವು ಕೇಂದ್ರದಿಂದ ಶುಕ್ರವಾರ ನಡೆದ ವಿಶೇಷ ಬೇಸಿಗೆ ಉಚಿತ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಶಾಲೆಗಳಿಗೆ ರಜೆ ಇದ್ದು, ಈ ಸಮಯದಲ್ಲಿ ವಿದ್ಯಾರ್ಥಿಗಳು ಮನೆಗಳಲ್ಲೇ ವ್ಯರ್ಥವಾಗಿ ಕಾಲ ಕಳೆಯುತ್ತಾರೆ. ಇಂತಹ ಬಡ ವರ್ಗದ ವಿದ್ಯಾರ್ಥಿಗಳಿಗೆ ಶಿಬಿರದಲ್ಲಿ ಕಂಪ್ಯೂಟರ್, ಕಲೆ, ಕ್ರೀಡೆಗಳ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಸುಕನ್ಯಾ ನಾಗರಾಜ್, ಎಂ.ವಿ. ರಮೇಶ್, ವಿಜಯ್ ನಾಯ್ಕ, ರೆಹಮತ್, ಗ್ರಂಥಪಾಲಕ ಸಾಗರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-43-241253257</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರೇಮಳಲಿ(ಚನ್ನಗಿರಿ): ‘ಬಡ ವರ್ಗದ ಮಕ್ಕಳು ಆರ್ಥಿಕ ಸಮಸ್ಯೆಯಿಂದಾಗಿ ಉತ್ತಮ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಿಂದ ವಿಶೇಷ ಬೇಸಿಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪಿಡಿಒ ರಶ್ಮಿ ತಿಳಿಸಿದರು.</p>.<p>ತಾಲ್ಲೂಕಿನ ಹಿರೇಮಳಲಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅರಿವು ಕೇಂದ್ರದಿಂದ ಶುಕ್ರವಾರ ನಡೆದ ವಿಶೇಷ ಬೇಸಿಗೆ ಉಚಿತ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಶಾಲೆಗಳಿಗೆ ರಜೆ ಇದ್ದು, ಈ ಸಮಯದಲ್ಲಿ ವಿದ್ಯಾರ್ಥಿಗಳು ಮನೆಗಳಲ್ಲೇ ವ್ಯರ್ಥವಾಗಿ ಕಾಲ ಕಳೆಯುತ್ತಾರೆ. ಇಂತಹ ಬಡ ವರ್ಗದ ವಿದ್ಯಾರ್ಥಿಗಳಿಗೆ ಶಿಬಿರದಲ್ಲಿ ಕಂಪ್ಯೂಟರ್, ಕಲೆ, ಕ್ರೀಡೆಗಳ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಸುಕನ್ಯಾ ನಾಗರಾಜ್, ಎಂ.ವಿ. ರಮೇಶ್, ವಿಜಯ್ ನಾಯ್ಕ, ರೆಹಮತ್, ಗ್ರಂಥಪಾಲಕ ಸಾಗರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-43-241253257</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>