<p>ಚಿಕ್ಕಮಗಳೂರು: ಐಡಿಎಸ್ಜಿ ಸರ್ಕಾರಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿ ಅಭಿಲಾಷ್ ಎಲ್.ಗೌಡ ಅವರು ಮೊದಲನೇ ರ್ಯಾಂಕ್ ಪಡೆಯುವ ಜತೆಗೆ 4 ಚಿನ್ನದ ಪದಕ ಹಾಗೂ 2 ನಗದು ಬಹುಮಾನ ಪಡೆದುಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಅವರು ಜಯನಗರದ ನಿವಾಸಿ ಲೋಕೇಶ್ ಹಾಗೂ ರಾಧಾ ದಂಪತಿಯ ಪುತ್ರ. ತಾಯಿ ರಾಧಾ ಅವರು ನಗರದ ಸೇಂಟ್ ಮೇರಿಸ್ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿದ್ದಾರೆ.</p>.<p>‘ಈ ಪ್ರಶಸ್ತಿ ತಾಯಿ ಹಾಗೂ ಅಣ್ಣನಿಗೆ ಸಲ್ಲಬೇಕು. ನನ್ನ ಕಲಿಕೆಗೆ ಪೋಷಕರು, ಶಿಕ್ಷಕರು, ಸ್ನೇಹಿತರ ಸಹಕಾರ ಕಾರಣ. ಬೇರೆ ಬೇರೆ ವಿಶ್ವ ವಿದ್ಯಾಲಯಗಳಿಂದ ಪುಸ್ತಕ ಹಾಗೂ ಮಾಹಿತಿ ಸಂಗ್ರಹಿಸುತ್ತಿದ್ದೆ. ಜೊತೆಗೆ ಪರಿಶ್ರಮವೂ ಇತ್ತು’ ಎಂದು ಅಭಿಲಾಷ್ ಎಲ್.ಗೌಡ ಹೇಳಿದರು.</p>.<p>ಮುಂದೆ ಪಿಎಚ್ಡಿ ಮಾಡಲು ನಿರ್ಧಾರ ಮಾಡಿದ್ದೇನೆ. ಉನ್ನತ ಶಿಕ್ಷಣದಿಂದ ಒಳ್ಳೆಯ ಅವಕಾಶಗಳು ಸಿಗುತ್ತವೆ. ಪ್ರತಿಯೊಬ್ಬರೂ ಗುರಿಗಳನ್ನು ಸಾಧಿಸಬೇಕು, ಈ ಫಲಿತಾಂಶ ಹಾಗೂ ಪ್ರಶಸ್ತಿ ನನಗೆ ತೃಪ್ತಿ ತಂದಿದೆ ಎಂದು ಅಭಿಪ್ರಾಯ ಹಂಚಿಕೊಂಡರು.</p>.<p>ರಾಧಾ ಮಾತನಾಡಿ, ‘ಮಗ ಬದುಕಿನಲ್ಲಿ ಕಷ್ಟಪಟ್ಟು ಮುಂದೆ ಬಂದಿದ್ದಾನೆ. ನಿರಂತರ ಪ್ರಯತ್ನದಿಂದ ಉತ್ತಮ ಫಲಿತಾಂಶ ಬಂದಿದೆ. ನಾನು ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡಿ ಮಗನ ವಿದ್ಯಾಭ್ಯಾಸ ಮಾಡಿಸಿದ್ದೇನೆ. ಮಗನ ಸಾಧನೆ ಸಂತಸ ತಂದಿದೆ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-126-142961719</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಐಡಿಎಸ್ಜಿ ಸರ್ಕಾರಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿ ಅಭಿಲಾಷ್ ಎಲ್.ಗೌಡ ಅವರು ಮೊದಲನೇ ರ್ಯಾಂಕ್ ಪಡೆಯುವ ಜತೆಗೆ 4 ಚಿನ್ನದ ಪದಕ ಹಾಗೂ 2 ನಗದು ಬಹುಮಾನ ಪಡೆದುಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಅವರು ಜಯನಗರದ ನಿವಾಸಿ ಲೋಕೇಶ್ ಹಾಗೂ ರಾಧಾ ದಂಪತಿಯ ಪುತ್ರ. ತಾಯಿ ರಾಧಾ ಅವರು ನಗರದ ಸೇಂಟ್ ಮೇರಿಸ್ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿದ್ದಾರೆ.</p>.<p>‘ಈ ಪ್ರಶಸ್ತಿ ತಾಯಿ ಹಾಗೂ ಅಣ್ಣನಿಗೆ ಸಲ್ಲಬೇಕು. ನನ್ನ ಕಲಿಕೆಗೆ ಪೋಷಕರು, ಶಿಕ್ಷಕರು, ಸ್ನೇಹಿತರ ಸಹಕಾರ ಕಾರಣ. ಬೇರೆ ಬೇರೆ ವಿಶ್ವ ವಿದ್ಯಾಲಯಗಳಿಂದ ಪುಸ್ತಕ ಹಾಗೂ ಮಾಹಿತಿ ಸಂಗ್ರಹಿಸುತ್ತಿದ್ದೆ. ಜೊತೆಗೆ ಪರಿಶ್ರಮವೂ ಇತ್ತು’ ಎಂದು ಅಭಿಲಾಷ್ ಎಲ್.ಗೌಡ ಹೇಳಿದರು.</p>.<p>ಮುಂದೆ ಪಿಎಚ್ಡಿ ಮಾಡಲು ನಿರ್ಧಾರ ಮಾಡಿದ್ದೇನೆ. ಉನ್ನತ ಶಿಕ್ಷಣದಿಂದ ಒಳ್ಳೆಯ ಅವಕಾಶಗಳು ಸಿಗುತ್ತವೆ. ಪ್ರತಿಯೊಬ್ಬರೂ ಗುರಿಗಳನ್ನು ಸಾಧಿಸಬೇಕು, ಈ ಫಲಿತಾಂಶ ಹಾಗೂ ಪ್ರಶಸ್ತಿ ನನಗೆ ತೃಪ್ತಿ ತಂದಿದೆ ಎಂದು ಅಭಿಪ್ರಾಯ ಹಂಚಿಕೊಂಡರು.</p>.<p>ರಾಧಾ ಮಾತನಾಡಿ, ‘ಮಗ ಬದುಕಿನಲ್ಲಿ ಕಷ್ಟಪಟ್ಟು ಮುಂದೆ ಬಂದಿದ್ದಾನೆ. ನಿರಂತರ ಪ್ರಯತ್ನದಿಂದ ಉತ್ತಮ ಫಲಿತಾಂಶ ಬಂದಿದೆ. ನಾನು ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡಿ ಮಗನ ವಿದ್ಯಾಭ್ಯಾಸ ಮಾಡಿಸಿದ್ದೇನೆ. ಮಗನ ಸಾಧನೆ ಸಂತಸ ತಂದಿದೆ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-126-142961719</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>