<p>ತುಳುವಿನಕೊಪ್ಪ (ಬಾಳೆಹೊನ್ನೂರು): ಸ್ಮಾರಕ ಶಿಲ್ಪಗಳು ಸಾಮಾಜಿಕ, ಐತಿಹಾಸಿಕ ನೆನಪುಗಳನ್ನು ಶಾಶ್ವತಗೊಳಿಸಲು ನಿರ್ಮಿಸಲಾದ ಕಲಾಕೃತಿಗಳು. ಇವು ನಮ್ಮ ಶ್ರೀಮಂತ ಪರಂಪರೆಯನ್ನು ಪ್ರತಿಬಿಂಬಿಸುವ ಜೊತೆಗೆ ಹಿಂದಿನ ಕಾಲದ ಸಾಮಾಜಿಕ, ಸಾಂಸ್ಕೃತಿಕ, ಮತ್ತು ರಾಜಕೀಯ ಇತಿಹಾಸವನ್ನು ತಿಳಿಸುವ ಪ್ರಮುಖ ಆಕರಗಳು ಎಂದು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ನ.ಸುರೇಶ ಕಲ್ಕೆರೆ ತಿಳಿಸಿದರು.</p>.<p>ತುಳುವಿನಕೊಪ್ಪ ಗ್ರಾಮ ಪಂಚಾಯಿತಿ, ಮತ್ತು ಗ್ರಂಥಾಲಯ ಅರಿವು ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಬೇಸಿಗೆ -ಬೆಸುಗೆ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ನಮ್ಮ ಊರು ನಮ್ಮ ಪರಂಪರೆಯ ಬಗ್ಗೆ ಮಾಹಿತಿ ನೀಡಿದ ಅವರು, ಶಾಸನ, ಮಾಸ್ತಿಕಲ್ಲು, ವೀರಗಲ್ಲುಗಳು ನಾಡಿನ ಇತಿಹಾಸ ಹೇಳುವ ಸ್ಮಾರಕ ಶಿಲ್ಪಗಳು. ಇಂಥ ಶಿಲ್ಪಗಳನ್ನು ಉಳಿಸಿಕೊಂಡು ಬರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸ್ಥಳಗಳ, ಊರಿನ ಇತಿಹಾಸ ಬಗ್ಗೆ ಬೆಳಕು ಚೆಲ್ಲುವ ಇಂತಹ ಶಿಲ್ಪಗಳನ್ನು ಅಧ್ಯಯನ ಮಾಡುವ ಮೂಲಕ ಸ್ಥಳೀಯ ಪರಿಸರಗಳ ಬಗ್ಗೆ ತಿಳಿದುಕೊಳ್ಳಬಹುದು. ಇಂತಹ ಸ್ಮಾರಕ ಶಿಲ್ಪಗಳನ್ನು ಸಂರಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದರು.</p>.<p>ಶಿಬಿರದಲ್ಲಿ ಮಕ್ಕಳಿಗೆ ಗಿಡ, ಮರ, ಬಳ್ಳಿಗಳು ಮತ್ತು ಸುತ್ತಮುತ್ತಲಿನ ಪ್ರಕೃತಿ ಬಗ್ಗೆ ಅರಿವು ಮಾಡಿಸುವ, ಪರಿಚ ಯಿ ಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಕೊಪ್ಪ ತಾಲ್ಲೂಕು ಪಂಚಾಯಿತಿಯ ಮಾಹಿತಿ ಶಿಕ್ಷಣ ಸಂವಹನ ಸಂಯೋ ಜಕಿ ಸುಮಲತಾ ಅವರು ಹಿಮಾಲಯ ಚಾರಣದ ಬಗ್ಗೆ ಅನುಭವ ಹಂಚಿಕೊಂಡರು. ಗ್ರಂಥಾಲಯದ ಗ್ರಂಥಪಾಲಕಿ ಅಕ್ಷತಾ, ಶಾಲಾ ಮಕ್ಕಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-126-385478396</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಳುವಿನಕೊಪ್ಪ (ಬಾಳೆಹೊನ್ನೂರು): ಸ್ಮಾರಕ ಶಿಲ್ಪಗಳು ಸಾಮಾಜಿಕ, ಐತಿಹಾಸಿಕ ನೆನಪುಗಳನ್ನು ಶಾಶ್ವತಗೊಳಿಸಲು ನಿರ್ಮಿಸಲಾದ ಕಲಾಕೃತಿಗಳು. ಇವು ನಮ್ಮ ಶ್ರೀಮಂತ ಪರಂಪರೆಯನ್ನು ಪ್ರತಿಬಿಂಬಿಸುವ ಜೊತೆಗೆ ಹಿಂದಿನ ಕಾಲದ ಸಾಮಾಜಿಕ, ಸಾಂಸ್ಕೃತಿಕ, ಮತ್ತು ರಾಜಕೀಯ ಇತಿಹಾಸವನ್ನು ತಿಳಿಸುವ ಪ್ರಮುಖ ಆಕರಗಳು ಎಂದು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ನ.ಸುರೇಶ ಕಲ್ಕೆರೆ ತಿಳಿಸಿದರು.</p>.<p>ತುಳುವಿನಕೊಪ್ಪ ಗ್ರಾಮ ಪಂಚಾಯಿತಿ, ಮತ್ತು ಗ್ರಂಥಾಲಯ ಅರಿವು ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಬೇಸಿಗೆ -ಬೆಸುಗೆ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ನಮ್ಮ ಊರು ನಮ್ಮ ಪರಂಪರೆಯ ಬಗ್ಗೆ ಮಾಹಿತಿ ನೀಡಿದ ಅವರು, ಶಾಸನ, ಮಾಸ್ತಿಕಲ್ಲು, ವೀರಗಲ್ಲುಗಳು ನಾಡಿನ ಇತಿಹಾಸ ಹೇಳುವ ಸ್ಮಾರಕ ಶಿಲ್ಪಗಳು. ಇಂಥ ಶಿಲ್ಪಗಳನ್ನು ಉಳಿಸಿಕೊಂಡು ಬರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸ್ಥಳಗಳ, ಊರಿನ ಇತಿಹಾಸ ಬಗ್ಗೆ ಬೆಳಕು ಚೆಲ್ಲುವ ಇಂತಹ ಶಿಲ್ಪಗಳನ್ನು ಅಧ್ಯಯನ ಮಾಡುವ ಮೂಲಕ ಸ್ಥಳೀಯ ಪರಿಸರಗಳ ಬಗ್ಗೆ ತಿಳಿದುಕೊಳ್ಳಬಹುದು. ಇಂತಹ ಸ್ಮಾರಕ ಶಿಲ್ಪಗಳನ್ನು ಸಂರಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದರು.</p>.<p>ಶಿಬಿರದಲ್ಲಿ ಮಕ್ಕಳಿಗೆ ಗಿಡ, ಮರ, ಬಳ್ಳಿಗಳು ಮತ್ತು ಸುತ್ತಮುತ್ತಲಿನ ಪ್ರಕೃತಿ ಬಗ್ಗೆ ಅರಿವು ಮಾಡಿಸುವ, ಪರಿಚ ಯಿ ಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಕೊಪ್ಪ ತಾಲ್ಲೂಕು ಪಂಚಾಯಿತಿಯ ಮಾಹಿತಿ ಶಿಕ್ಷಣ ಸಂವಹನ ಸಂಯೋ ಜಕಿ ಸುಮಲತಾ ಅವರು ಹಿಮಾಲಯ ಚಾರಣದ ಬಗ್ಗೆ ಅನುಭವ ಹಂಚಿಕೊಂಡರು. ಗ್ರಂಥಾಲಯದ ಗ್ರಂಥಪಾಲಕಿ ಅಕ್ಷತಾ, ಶಾಲಾ ಮಕ್ಕಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-126-385478396</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>