<p>ಚಿಕ್ಕಮಗಳೂರು: ಪದವಿ ಗಳಿಸಿದ ವಿದ್ಯಾರ್ಥಿಗಳು ವಿಭಿನ್ನ ರೀತಿಯ ಆಲೋಚನೆಗಳ ಮೂಲಕ ಕೆಲಸ ನಿಭಾಯಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ನಗರದ ಎಐಟಿ ಕಾಲೇಜಿನ ಎಸ್.ಟಿ.ಎನ್. ರಂಗಮಂದಿರ ದಲ್ಲಿ ಸೋಮವಾರ ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭ ಹಾಗೂ ರ್ಯಾಂಕ್ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಲಿಕೆಯ ನಂತರ ವಿದ್ಯಾರ್ಥಿ ಜೀವನ ಸಮಾಜದಲ್ಲಿ ಇನ್ನೊಂದು ರೀತಿ ಬದಲಾವಣೆ ಆಗಲಿದೆ. ನಾಯಕತ್ವ, ಶಿಸ್ತು ಮತ್ತು ಸಮಾಜದೊಂದಿಗೆ ಆವಿನಾಭಾವ ಸಂಬಂಧ ಬೆಳಸಿಕೊಳ್ಳಬೇಕು. ಭವಿಷ್ಯದಲ್ಲಿ ಉದ್ದಿಮೆದಾರರಾಗಿ ಬೆಳವಣಿಗೆ ಹೊಂದಬೇಕು ಎಂದು ಸಲಹೆ ನೀಡಿದರು.</p>.<p>ವೃತ್ತಿ ಆರಂಭದಲ್ಲಿಯೇ ಇಂದಿನ ಯುವಜನ ಅನೇಕ ಒತ್ತಡ ಎದುರಿಸುತ್ತಿದ್ದಾರೆ. ಇದನ್ನು ಸಮರ್ಥವಾಗಿ ಎದುರಿಸುವ ಚಾಕಕ್ಯತೆ ಅವಶ್ಯಕ. ಕಷ್ಟ-ಸುಖ, ಲಾಭ-ನಷ್ಟಗಳು ಬದುಕಿನಲ್ಲಿ ಎದುರಾಗುವುದು ಸಹಜ. ಉದ್ವೇಗಕ್ಕೆ ಒಳಗಾಗದೆ ಸದಾ ಸಮಾಧಾನದಿಂದ ನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಸಮಾಜದ ಎದುರು ವಿದ್ಯಾರ್ಥಿಗಳು ಮೊದಲು ವಿನಯಶೀಲರಾಗಬೇಕು. ಜ್ಞಾನಕ್ಕೆ ಸಂಬಂಧಿಸಿದ ಕೌಶಲಗಳ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿ ಜೀವನದ ನಂತರ ಸಮಾಜವೇ ಬದುಕಿನ ಪಾಠ ಕಲಿಸಲಿದೆ. ಸ್ವಯಂ ಪ್ರೇರಣೆಯಿಂದ ಒಳ್ಳೆತನವನ್ನು ಬೆಳೆಸಿಕೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ತೇಗಳುವಿಕೆ ಹೆಚ್ಚಾಗಲಿದೆ ಎಂದರು.</p>.<p>ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್(ಎಐಸಿಟಿಇ) ಮಾಜಿ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್ ಮಾತನಾಡಿ, ‘ವಿದ್ಯಾರ್ಥಿಗಳು ಸಮಾಜಕ್ಕಾಗಿ ಮೌಲ್ಯ ಸೃಷ್ಟಿಸಿದಾಗ ಅಲ್ಲಿ ಯಶಸ್ಸು ಸಾಧ್ಯ. ವಾಸ್ತವಾಗಿ ಸುವರ್ಣ ಕಾಲದಲ್ಲಿ ನೀವು ಜೀವಿಸುತ್ತಿದ್ದೀರಿ. ಕೇಂದ್ರ ಸರ್ಕಾರವು ಅಮೃತ ಕಾಲವೆಂದೇ ಹೇಳುತ್ತದೆ. ಈ ಸಮಯದಲ್ಲಿ ಏನೇ ಮಾಡಿದರೂ ಬಹಳ ಯಶಸ್ವಿಯಾಗುತ್ತದೆ’ ಎಂದು ಹೇಳಿದರು.</p>.<p>ಭಾರತ ಉದ್ಯಮಶೀಲ ರಾಷ್ಟ್ರವಾಗಿ ಸಾಗುತ್ತಿದೆ. ಎ.ಐ ತಂತ್ರಜ್ಞಾನ ಯುವ ಜನತೆಗೆ ಉದ್ಯಮಿಯಾಗಲು ಸಹಾಯ ಮಾಡುತ್ತಿದೆ. ವಿದ್ಯಾರ್ಥಿ ದಿಸೆಯಿಂದಲೇ ಕೌಶಲ ಹೆಚ್ಚಿಸಿಕೊಳ್ಲಬೇಕು ಎಂದರು.</p>.<p>ಎಐಟಿ ಪ್ರಾಂಶುಪಾಲ ಎಂ.ಎ.ಗೌತಮ್ ಮಾತನಾಡಿ, ‘ವಿದ್ಯಾರ್ಥಿಗಳು ಪದವಿ ಪಡೆದು ನಿರ್ಗಮಿಸಿದರೂ, ಸಂಸ್ಥೆಯೊಂದಿಗಿನ ಸಂಬಂಧ ಕೊನೆಗೊಳ್ಳುವುದಿಲ್ಲ. ಹಳೆಯ ವಿದ್ಯಾರ್ಥಿಗಳಾಗಿ ಜೀವಮಾನದ ಬಂಧವಾಗಿ ರೂಪಾಂತರಗೊಳ್ಳಬೇಕು’ ಎಂದು ಹೇಳಿದರು.</p>.<p>ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಎಐಟಿ ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್, ಆದಿಚುಂಚನಗಿರಿ ವಿವಿ ರಿಜಿಸ್ಟ್ರರ್ ಸಿ.ಕೆ.ಸುಬ್ಬರಾಯ, ವಿದ್ಯಾರ್ಥಿ ಕ್ಷೇಮಾಭಿವೃದ್ದಿ ಅಧಿಕಾರಿ ಸಂಗಾರೆಡ್ಡಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-126-914172671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಪದವಿ ಗಳಿಸಿದ ವಿದ್ಯಾರ್ಥಿಗಳು ವಿಭಿನ್ನ ರೀತಿಯ ಆಲೋಚನೆಗಳ ಮೂಲಕ ಕೆಲಸ ನಿಭಾಯಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ನಗರದ ಎಐಟಿ ಕಾಲೇಜಿನ ಎಸ್.ಟಿ.ಎನ್. ರಂಗಮಂದಿರ ದಲ್ಲಿ ಸೋಮವಾರ ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭ ಹಾಗೂ ರ್ಯಾಂಕ್ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಲಿಕೆಯ ನಂತರ ವಿದ್ಯಾರ್ಥಿ ಜೀವನ ಸಮಾಜದಲ್ಲಿ ಇನ್ನೊಂದು ರೀತಿ ಬದಲಾವಣೆ ಆಗಲಿದೆ. ನಾಯಕತ್ವ, ಶಿಸ್ತು ಮತ್ತು ಸಮಾಜದೊಂದಿಗೆ ಆವಿನಾಭಾವ ಸಂಬಂಧ ಬೆಳಸಿಕೊಳ್ಳಬೇಕು. ಭವಿಷ್ಯದಲ್ಲಿ ಉದ್ದಿಮೆದಾರರಾಗಿ ಬೆಳವಣಿಗೆ ಹೊಂದಬೇಕು ಎಂದು ಸಲಹೆ ನೀಡಿದರು.</p>.<p>ವೃತ್ತಿ ಆರಂಭದಲ್ಲಿಯೇ ಇಂದಿನ ಯುವಜನ ಅನೇಕ ಒತ್ತಡ ಎದುರಿಸುತ್ತಿದ್ದಾರೆ. ಇದನ್ನು ಸಮರ್ಥವಾಗಿ ಎದುರಿಸುವ ಚಾಕಕ್ಯತೆ ಅವಶ್ಯಕ. ಕಷ್ಟ-ಸುಖ, ಲಾಭ-ನಷ್ಟಗಳು ಬದುಕಿನಲ್ಲಿ ಎದುರಾಗುವುದು ಸಹಜ. ಉದ್ವೇಗಕ್ಕೆ ಒಳಗಾಗದೆ ಸದಾ ಸಮಾಧಾನದಿಂದ ನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಸಮಾಜದ ಎದುರು ವಿದ್ಯಾರ್ಥಿಗಳು ಮೊದಲು ವಿನಯಶೀಲರಾಗಬೇಕು. ಜ್ಞಾನಕ್ಕೆ ಸಂಬಂಧಿಸಿದ ಕೌಶಲಗಳ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿ ಜೀವನದ ನಂತರ ಸಮಾಜವೇ ಬದುಕಿನ ಪಾಠ ಕಲಿಸಲಿದೆ. ಸ್ವಯಂ ಪ್ರೇರಣೆಯಿಂದ ಒಳ್ಳೆತನವನ್ನು ಬೆಳೆಸಿಕೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ತೇಗಳುವಿಕೆ ಹೆಚ್ಚಾಗಲಿದೆ ಎಂದರು.</p>.<p>ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್(ಎಐಸಿಟಿಇ) ಮಾಜಿ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್ ಮಾತನಾಡಿ, ‘ವಿದ್ಯಾರ್ಥಿಗಳು ಸಮಾಜಕ್ಕಾಗಿ ಮೌಲ್ಯ ಸೃಷ್ಟಿಸಿದಾಗ ಅಲ್ಲಿ ಯಶಸ್ಸು ಸಾಧ್ಯ. ವಾಸ್ತವಾಗಿ ಸುವರ್ಣ ಕಾಲದಲ್ಲಿ ನೀವು ಜೀವಿಸುತ್ತಿದ್ದೀರಿ. ಕೇಂದ್ರ ಸರ್ಕಾರವು ಅಮೃತ ಕಾಲವೆಂದೇ ಹೇಳುತ್ತದೆ. ಈ ಸಮಯದಲ್ಲಿ ಏನೇ ಮಾಡಿದರೂ ಬಹಳ ಯಶಸ್ವಿಯಾಗುತ್ತದೆ’ ಎಂದು ಹೇಳಿದರು.</p>.<p>ಭಾರತ ಉದ್ಯಮಶೀಲ ರಾಷ್ಟ್ರವಾಗಿ ಸಾಗುತ್ತಿದೆ. ಎ.ಐ ತಂತ್ರಜ್ಞಾನ ಯುವ ಜನತೆಗೆ ಉದ್ಯಮಿಯಾಗಲು ಸಹಾಯ ಮಾಡುತ್ತಿದೆ. ವಿದ್ಯಾರ್ಥಿ ದಿಸೆಯಿಂದಲೇ ಕೌಶಲ ಹೆಚ್ಚಿಸಿಕೊಳ್ಲಬೇಕು ಎಂದರು.</p>.<p>ಎಐಟಿ ಪ್ರಾಂಶುಪಾಲ ಎಂ.ಎ.ಗೌತಮ್ ಮಾತನಾಡಿ, ‘ವಿದ್ಯಾರ್ಥಿಗಳು ಪದವಿ ಪಡೆದು ನಿರ್ಗಮಿಸಿದರೂ, ಸಂಸ್ಥೆಯೊಂದಿಗಿನ ಸಂಬಂಧ ಕೊನೆಗೊಳ್ಳುವುದಿಲ್ಲ. ಹಳೆಯ ವಿದ್ಯಾರ್ಥಿಗಳಾಗಿ ಜೀವಮಾನದ ಬಂಧವಾಗಿ ರೂಪಾಂತರಗೊಳ್ಳಬೇಕು’ ಎಂದು ಹೇಳಿದರು.</p>.<p>ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಎಐಟಿ ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್, ಆದಿಚುಂಚನಗಿರಿ ವಿವಿ ರಿಜಿಸ್ಟ್ರರ್ ಸಿ.ಕೆ.ಸುಬ್ಬರಾಯ, ವಿದ್ಯಾರ್ಥಿ ಕ್ಷೇಮಾಭಿವೃದ್ದಿ ಅಧಿಕಾರಿ ಸಂಗಾರೆಡ್ಡಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-126-914172671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>