<p>ಚಿಕ್ಕನಾಯಕನಹಳ್ಳಿ: ‘ತಾಲ್ಲೂಕಿನಲ್ಲಿ ಎಲ್ಕೆಜಿಯಿಂದ ಪಿಯುಸಿವರೆಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯದಲ್ಲೇ ಮಾದರಿ ಶೈಕ್ಷಣಿಕ ಕ್ಷೇತ್ರವನ್ನಾಗಿ ರೂಪಿಸುವುದು ನನ್ನ ಆಶಯ. ಕ್ಷೇತ್ರದ ಮಕ್ಕಳ ಶೈಕ್ಷಣಿಕ ಮಟ್ಟ ಹೆಚ್ಚಿಸಿ, ಪ್ರತಿ ಮನೆಯಲ್ಲೂ ಒಬ್ಬ ಸರ್ಕಾರಿ ಅಧಿಕಾರಿಯನ್ನು ಸೃಷ್ಟಿಸಬೇಕಿದೆ’ ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.</p>.<p>ಪಟ್ಟಣದಲ್ಲಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ‘ಜ್ಞಾನಕಲ್ಪ’ ಉಪಕ್ರಮದಡಿ ಶನಿವಾರ ಆಯೋಜಿಸಲಾಗಿದ್ದ ‘ನಮ್ಮ ಮೇಷ್ಟ್ರು ನಮಗೆ ಪ್ರೇರಣೆ’ ಎಂಬ ವಿಶೇಷ ಶಿಕ್ಷಕರ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ರೂಪಿಸಿದ ತಾಲ್ಲೂಕಿನ ಶಿಕ್ಷಕರನ್ನು ಸತ್ಕರಿಸಲಾಯಿತು.</p>.<p>ತಾಲ್ಲೂಕು ಶೇ 94.25ರಷ್ಟು ಗುಣಾತ್ಮಕ ಫಲಿತಾಂಶ ದಾಖಲಿಸಿದೆ. ಫಲಿತಾಂಶದ ಶೇಕಡಾವಾರು ಕಳೆದ ಬಾರಿಗಿಂತ ಕೊಂಚ ಕಡಿಮೆಯಾಗಿದೆ ಎಂದು ಶಿಕ್ಷಕರು ಧೃತಿಗೆಡಬೇಕಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ. ಈ ಫಲಿತಾಂಶ ನಮಗೆ ಮುಂಬರುವ ದಿನಗಳಿಗೆ ಎಚ್ಚರಿಕೆ ಗಂಟೆಯಾಗಬೇಕು ಎಂದರು.</p>.<p>ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ, ನೀಟ್, ಪ್ರೇರಣಾ ಹಾಗೂ ಸಂಜೀವಿನಿ ಶಿಬಿರ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಚಿತ ತರಬೇತಿ ನೀಡಲಾಗುವುದು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಕಾಂತರಾಜು, ಅಕ್ಷರ ದಾಸೋಹ ಅಧಿಕಾರಿ ಗವಿರಂಗಪ್ಪ, ಸಂಪನ್ಮೂಲ ಶಿಕ್ಷಕ ರಮೇಶ್, ಎಸ್ಎಸ್ಎಲ್ಸಿಯಲ್ಲಿ 623 ಅಂಕ ಗಳಿಸಿದ ಯಶ್ವಂತ್ ಕೆ.ಮಾತನಾಡಿದರು. ಕೆಪಿಎಸ್ ಶಾಲೆಯ ಮಹಾಲಕ್ಷ್ಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-17-1879149558</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ‘ತಾಲ್ಲೂಕಿನಲ್ಲಿ ಎಲ್ಕೆಜಿಯಿಂದ ಪಿಯುಸಿವರೆಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯದಲ್ಲೇ ಮಾದರಿ ಶೈಕ್ಷಣಿಕ ಕ್ಷೇತ್ರವನ್ನಾಗಿ ರೂಪಿಸುವುದು ನನ್ನ ಆಶಯ. ಕ್ಷೇತ್ರದ ಮಕ್ಕಳ ಶೈಕ್ಷಣಿಕ ಮಟ್ಟ ಹೆಚ್ಚಿಸಿ, ಪ್ರತಿ ಮನೆಯಲ್ಲೂ ಒಬ್ಬ ಸರ್ಕಾರಿ ಅಧಿಕಾರಿಯನ್ನು ಸೃಷ್ಟಿಸಬೇಕಿದೆ’ ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.</p>.<p>ಪಟ್ಟಣದಲ್ಲಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ‘ಜ್ಞಾನಕಲ್ಪ’ ಉಪಕ್ರಮದಡಿ ಶನಿವಾರ ಆಯೋಜಿಸಲಾಗಿದ್ದ ‘ನಮ್ಮ ಮೇಷ್ಟ್ರು ನಮಗೆ ಪ್ರೇರಣೆ’ ಎಂಬ ವಿಶೇಷ ಶಿಕ್ಷಕರ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ರೂಪಿಸಿದ ತಾಲ್ಲೂಕಿನ ಶಿಕ್ಷಕರನ್ನು ಸತ್ಕರಿಸಲಾಯಿತು.</p>.<p>ತಾಲ್ಲೂಕು ಶೇ 94.25ರಷ್ಟು ಗುಣಾತ್ಮಕ ಫಲಿತಾಂಶ ದಾಖಲಿಸಿದೆ. ಫಲಿತಾಂಶದ ಶೇಕಡಾವಾರು ಕಳೆದ ಬಾರಿಗಿಂತ ಕೊಂಚ ಕಡಿಮೆಯಾಗಿದೆ ಎಂದು ಶಿಕ್ಷಕರು ಧೃತಿಗೆಡಬೇಕಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ. ಈ ಫಲಿತಾಂಶ ನಮಗೆ ಮುಂಬರುವ ದಿನಗಳಿಗೆ ಎಚ್ಚರಿಕೆ ಗಂಟೆಯಾಗಬೇಕು ಎಂದರು.</p>.<p>ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ, ನೀಟ್, ಪ್ರೇರಣಾ ಹಾಗೂ ಸಂಜೀವಿನಿ ಶಿಬಿರ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಚಿತ ತರಬೇತಿ ನೀಡಲಾಗುವುದು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಕಾಂತರಾಜು, ಅಕ್ಷರ ದಾಸೋಹ ಅಧಿಕಾರಿ ಗವಿರಂಗಪ್ಪ, ಸಂಪನ್ಮೂಲ ಶಿಕ್ಷಕ ರಮೇಶ್, ಎಸ್ಎಸ್ಎಲ್ಸಿಯಲ್ಲಿ 623 ಅಂಕ ಗಳಿಸಿದ ಯಶ್ವಂತ್ ಕೆ.ಮಾತನಾಡಿದರು. ಕೆಪಿಎಸ್ ಶಾಲೆಯ ಮಹಾಲಕ್ಷ್ಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-17-1879149558</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>