<p>ಚಿಕ್ಕನಾಯಕನಹಳ್ಳಿ: ಪರೀಕ್ಷಾ ಪ್ರಾಧಿಕಾರಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಗಳು ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಭವಿಷ್ಯದ ವಿಚಾರದಲ್ಲಿ ಹುಡುಗಾಟ ಆಡಬಾರದು ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.</p>.<p>ಪಟ್ಟಣದಲ್ಲಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ಜ್ಞಾನಕಲ್ಪ ಉಪಕ್ರಮದಡಿ ಆಯೋಜಿಸಿದ್ದ ಒಂದು ತಿಂಗಳ ಉಚಿತ ನೀಟ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪರೀಕ್ಷಾ ಮಂಡಳಿಗಳ ಗೊಂದಲಕಾರಿ ನಿರ್ಧಾರಗಳು ಆಕ್ಷೇಪಾರ್ಹ. ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ಹಿಂದಿ ಭಾಷೆ ವಿಷಯವಾಗಿ ಗೊಂದಲ ಮೂಡಿಸಲಾಯಿತು. ಪ್ರಸ್ತುತ ನೀಟ್ ಪರೀಕ್ಷೆಗಳು ಹಾಗೂ ಹಿರಿಯೂರಿನಲ್ಲಿ ನಡೆದ ಕೃಷಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಅಸಹಜವಾಗಿ ಹೆಚ್ಚು ಅಂಕಗಳು ಬಂದಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಗೊಂದಲಗಳಿಗೆ ಯಾರ ಬೇಜವಾಬ್ದಾರಿತನ ಕಾರಣ ಎಂಬುದನ್ನು ಪತ್ತೆಹಚ್ಚಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಪರೀಕ್ಷಾ ವ್ಯವಸ್ಥೆಯಲ್ಲಿ ಎಷ್ಟೇ ಗೊಂದಲಗಳಿದ್ದರೂ ವಿದ್ಯಾರ್ಥಿಗಳು ಧೃತಿಗೆಡಬಾರದು. ಆಳವಾದ ಜ್ಞಾನವಿದ್ದರೆ ಇಂತಹ ಯಾವುದೇ ಸವಾಲುಗಳನ್ನು ಧೈರ್ಯವಾಗಿ ಎದುರಿಸಬಹುದು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್. ಮಾತನಾಡಿ, ಈ ಉಚಿತ ತರಬೇತಿ ಶಿಬಿರಕ್ಕೆ ತಾಲ್ಲೂಕು ಮಾತ್ರವಲ್ಲದೆ ಅಕ್ಕಪಕ್ಕದ ತಾಲ್ಲೂಕುಗಳಿಂದಲೂ ವಿದ್ಯಾರ್ಥಿಗಳು ಬರಲಿದ್ದಾರೆ. ಈ ವರ್ಷ ಜ್ಞಾನಕಲ್ಪ ಸಂಸ್ಥೆಯು ನಾಲ್ಕು ಹಂತಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದೆ. ಸಿಇಟಿ ಹಾಗೂ ಕೃಷಿ ವಿಜ್ಞಾನ ಕೋರ್ಸ್ಗಳಿಗೆ ವಿಶೇಷ ಪ್ರಾಯೋಗಿಕ ತರಬೇತಿ ನೀಡಿದ್ದರ ಫಲವಾಗಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದರು.</p>.<p>ಸಿಇಟಿ ಮತ್ತು ನೀಟ್ ತರಬೇತಿ ಸಮಿತಿಯ ಅಧ್ಯಕ್ಷ ನಾಗರಾಜು ಮಾತನಾಡಿದರು. ಉಪನ್ಯಾಸಕ ಸಂದೇಶ್, ಸಿಇಟಿ ನೀಟ್ ತರಬೇತಿ ಸಮಿತಿಯ ಜಾಕೀರ್, ವರಮಹಾಲಕ್ಷ್ಮಿ, ಯೋಗಿಶ್, ಸೋಮಶೇಖರ್, ಶಿವಣ್ಣ, ಸಾಖ್ಯಾಗೌತಮ್, ಜಾಕೀರ್, ತಾ. ಕಸಾಪ ಅದ್ಯಕ್ಷ ಎಂ.ಎಸ್.ರವಿಕುಮಾರ್, ಪುರಸಭಾ ಮಾಜಿ ಸದಸ್ಯ ಎಂ.ಎನ್.ಸುರೇಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-17-987307445</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ಪರೀಕ್ಷಾ ಪ್ರಾಧಿಕಾರಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಗಳು ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಭವಿಷ್ಯದ ವಿಚಾರದಲ್ಲಿ ಹುಡುಗಾಟ ಆಡಬಾರದು ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.</p>.<p>ಪಟ್ಟಣದಲ್ಲಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ಜ್ಞಾನಕಲ್ಪ ಉಪಕ್ರಮದಡಿ ಆಯೋಜಿಸಿದ್ದ ಒಂದು ತಿಂಗಳ ಉಚಿತ ನೀಟ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪರೀಕ್ಷಾ ಮಂಡಳಿಗಳ ಗೊಂದಲಕಾರಿ ನಿರ್ಧಾರಗಳು ಆಕ್ಷೇಪಾರ್ಹ. ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ಹಿಂದಿ ಭಾಷೆ ವಿಷಯವಾಗಿ ಗೊಂದಲ ಮೂಡಿಸಲಾಯಿತು. ಪ್ರಸ್ತುತ ನೀಟ್ ಪರೀಕ್ಷೆಗಳು ಹಾಗೂ ಹಿರಿಯೂರಿನಲ್ಲಿ ನಡೆದ ಕೃಷಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಅಸಹಜವಾಗಿ ಹೆಚ್ಚು ಅಂಕಗಳು ಬಂದಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಗೊಂದಲಗಳಿಗೆ ಯಾರ ಬೇಜವಾಬ್ದಾರಿತನ ಕಾರಣ ಎಂಬುದನ್ನು ಪತ್ತೆಹಚ್ಚಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಪರೀಕ್ಷಾ ವ್ಯವಸ್ಥೆಯಲ್ಲಿ ಎಷ್ಟೇ ಗೊಂದಲಗಳಿದ್ದರೂ ವಿದ್ಯಾರ್ಥಿಗಳು ಧೃತಿಗೆಡಬಾರದು. ಆಳವಾದ ಜ್ಞಾನವಿದ್ದರೆ ಇಂತಹ ಯಾವುದೇ ಸವಾಲುಗಳನ್ನು ಧೈರ್ಯವಾಗಿ ಎದುರಿಸಬಹುದು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್. ಮಾತನಾಡಿ, ಈ ಉಚಿತ ತರಬೇತಿ ಶಿಬಿರಕ್ಕೆ ತಾಲ್ಲೂಕು ಮಾತ್ರವಲ್ಲದೆ ಅಕ್ಕಪಕ್ಕದ ತಾಲ್ಲೂಕುಗಳಿಂದಲೂ ವಿದ್ಯಾರ್ಥಿಗಳು ಬರಲಿದ್ದಾರೆ. ಈ ವರ್ಷ ಜ್ಞಾನಕಲ್ಪ ಸಂಸ್ಥೆಯು ನಾಲ್ಕು ಹಂತಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದೆ. ಸಿಇಟಿ ಹಾಗೂ ಕೃಷಿ ವಿಜ್ಞಾನ ಕೋರ್ಸ್ಗಳಿಗೆ ವಿಶೇಷ ಪ್ರಾಯೋಗಿಕ ತರಬೇತಿ ನೀಡಿದ್ದರ ಫಲವಾಗಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದರು.</p>.<p>ಸಿಇಟಿ ಮತ್ತು ನೀಟ್ ತರಬೇತಿ ಸಮಿತಿಯ ಅಧ್ಯಕ್ಷ ನಾಗರಾಜು ಮಾತನಾಡಿದರು. ಉಪನ್ಯಾಸಕ ಸಂದೇಶ್, ಸಿಇಟಿ ನೀಟ್ ತರಬೇತಿ ಸಮಿತಿಯ ಜಾಕೀರ್, ವರಮಹಾಲಕ್ಷ್ಮಿ, ಯೋಗಿಶ್, ಸೋಮಶೇಖರ್, ಶಿವಣ್ಣ, ಸಾಖ್ಯಾಗೌತಮ್, ಜಾಕೀರ್, ತಾ. ಕಸಾಪ ಅದ್ಯಕ್ಷ ಎಂ.ಎಸ್.ರವಿಕುಮಾರ್, ಪುರಸಭಾ ಮಾಜಿ ಸದಸ್ಯ ಎಂ.ಎನ್.ಸುರೇಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-17-987307445</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>