<p>ಚಿಂಚೋಳಿ: ‘ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅಗತ್ಯತೆಯನ್ನು ಮನಗಂಡು, ಚಿಂಚೋಳಿಯಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಶಾಸಕ ಡಾ.ಅವಿನಾಶ ಜಾಧವ ಹೇಳಿದರು.</p>.<p>ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ 2025-26ನೇ ಶೈಕ್ಷಣಿಕ ವರ್ಷದ ಸಮಾರೋಪ ಸಮಾರಂಭ ಹಾಗೂ ಪದವಿ ವ್ಯಾಸಂಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರೊ.ಪ್ರಲ್ಹಾದ ಚೆಂಗಟೆ ಮಾತನಾಡಿ, ‘ವಿದ್ಯಾರ್ಥಿಗಳು ಮೊಬೈಲ್ ವ್ಯಸನದಿಂದ ದೂರವಿದ್ದು ಜ್ಞಾನ, ಕೌಶಲ ಮತ್ತು ವ್ಯಕ್ತಿತ್ವ ವಿಕಸನದತ್ತ ಗಮನ ಹರಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಕರೆ ನೀಡಿದರು.</p>.<p>ಸೈಯದ್ ಪಟೇಲ್ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಕನಸುಗಳನ್ನು ಕಾಣಬೇಕು ಹಾಗೂ ಆ ಕನಸುಗಳನ್ನು ನನಸಾಗಿಸಿಕೊಳ್ಳಲು ನಿರಂತರ ಪರಿಶ್ರಮ ಪಡಬೇಕು. ಗುರಿಯತ್ತ ದೃಢ ಸಂಕಲ್ಪದೊಂದಿಗೆ ಸಾಗಿದಾಗ ಯಶಸ್ಸು ಖಚಿತ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಬಸವರಾಜ ಕೋನೆರಿ ಮಾತನಾಡಿದರು. ಸಂತೋಷ ಕಟಕೆ ಸ್ವಾಗತಿಸಿದರು. ಬಸವರಾಜೇಶ್ವರಿ ಹಾಲು ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮಿರಾಜ್ ಪಾಷಾ ಹಸನಲ್ ನಿರೂಪಿಸಿದರು. ಸತೀಶಕುಮಾರ ವಂದಿಸಿದರು. ಅನ್ನಪೂರ್ಣ ಸೇಡಂಕರ್ ಸೇರಿದಂತೆ ಚಿಂಚೋಳಿಯ ನಾಗರಿಕರು, ಶಿಕ್ಷಣ ಪ್ರೇಮಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-31-391207400</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ‘ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅಗತ್ಯತೆಯನ್ನು ಮನಗಂಡು, ಚಿಂಚೋಳಿಯಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಶಾಸಕ ಡಾ.ಅವಿನಾಶ ಜಾಧವ ಹೇಳಿದರು.</p>.<p>ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ 2025-26ನೇ ಶೈಕ್ಷಣಿಕ ವರ್ಷದ ಸಮಾರೋಪ ಸಮಾರಂಭ ಹಾಗೂ ಪದವಿ ವ್ಯಾಸಂಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರೊ.ಪ್ರಲ್ಹಾದ ಚೆಂಗಟೆ ಮಾತನಾಡಿ, ‘ವಿದ್ಯಾರ್ಥಿಗಳು ಮೊಬೈಲ್ ವ್ಯಸನದಿಂದ ದೂರವಿದ್ದು ಜ್ಞಾನ, ಕೌಶಲ ಮತ್ತು ವ್ಯಕ್ತಿತ್ವ ವಿಕಸನದತ್ತ ಗಮನ ಹರಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಕರೆ ನೀಡಿದರು.</p>.<p>ಸೈಯದ್ ಪಟೇಲ್ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಕನಸುಗಳನ್ನು ಕಾಣಬೇಕು ಹಾಗೂ ಆ ಕನಸುಗಳನ್ನು ನನಸಾಗಿಸಿಕೊಳ್ಳಲು ನಿರಂತರ ಪರಿಶ್ರಮ ಪಡಬೇಕು. ಗುರಿಯತ್ತ ದೃಢ ಸಂಕಲ್ಪದೊಂದಿಗೆ ಸಾಗಿದಾಗ ಯಶಸ್ಸು ಖಚಿತ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಬಸವರಾಜ ಕೋನೆರಿ ಮಾತನಾಡಿದರು. ಸಂತೋಷ ಕಟಕೆ ಸ್ವಾಗತಿಸಿದರು. ಬಸವರಾಜೇಶ್ವರಿ ಹಾಲು ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮಿರಾಜ್ ಪಾಷಾ ಹಸನಲ್ ನಿರೂಪಿಸಿದರು. ಸತೀಶಕುಮಾರ ವಂದಿಸಿದರು. ಅನ್ನಪೂರ್ಣ ಸೇಡಂಕರ್ ಸೇರಿದಂತೆ ಚಿಂಚೋಳಿಯ ನಾಗರಿಕರು, ಶಿಕ್ಷಣ ಪ್ರೇಮಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-31-391207400</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>