<p>ಚಿತ್ರದುರ್ಗ: ‘ಸ್ವಾತಂತ್ರ್ಯ ಹೋರಾಟ ಮತ್ತು ನಂತರದ ಸುಧಾರಣೆಗೆ ಅಂಬೇಡ್ಕರ್ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಡೆ, ನುಡಿ, ಚಿಂತನೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು’ ಎಂದು ಎಸ್ಜೆಎಂ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಎಲ್.ಈಶ್ವರಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯಲ್ಲಿ ಆಯೋಜಿಸಿರುವ ಎನ್ಎಸ್ಎಸ್ ಶಿಬಿರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಕಲ್ಪನೆ ತೀರ ವಿಭಿನ್ನ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಗಳನ್ನು ಒಟ್ಟಿಗೆ ಸಾಧಿಸಬಲ್ಲ ಸಂವಿಧಾನವನ್ನು ನಮಗೆ ನೀಡಿದ್ದಾರೆ’ ಎಂದರು.</p>.<p>‘ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ, ಭೇದ– ಭಾವ ನಿರ್ವಹಣೆ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಿದ್ದಾರೆ. ಅವರ ತತ್ವಗಳನ್ನು, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಕೀಲೆ ದಿಲ್ಷದ್ ಉನ್ನೀಸಾ ತಿಳಿಸಿದರು.</p>.<p>ನಿವೃತ್ತ ಸೈನಿಕರಾದ ಜಯಣ್ಣ, ಎನ್.ಟಿ. ಗೋವಿಂದರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಗೀತಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-44-1011542612</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಸ್ವಾತಂತ್ರ್ಯ ಹೋರಾಟ ಮತ್ತು ನಂತರದ ಸುಧಾರಣೆಗೆ ಅಂಬೇಡ್ಕರ್ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಡೆ, ನುಡಿ, ಚಿಂತನೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು’ ಎಂದು ಎಸ್ಜೆಎಂ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಎಲ್.ಈಶ್ವರಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯಲ್ಲಿ ಆಯೋಜಿಸಿರುವ ಎನ್ಎಸ್ಎಸ್ ಶಿಬಿರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಕಲ್ಪನೆ ತೀರ ವಿಭಿನ್ನ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಗಳನ್ನು ಒಟ್ಟಿಗೆ ಸಾಧಿಸಬಲ್ಲ ಸಂವಿಧಾನವನ್ನು ನಮಗೆ ನೀಡಿದ್ದಾರೆ’ ಎಂದರು.</p>.<p>‘ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ, ಭೇದ– ಭಾವ ನಿರ್ವಹಣೆ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಿದ್ದಾರೆ. ಅವರ ತತ್ವಗಳನ್ನು, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಕೀಲೆ ದಿಲ್ಷದ್ ಉನ್ನೀಸಾ ತಿಳಿಸಿದರು.</p>.<p>ನಿವೃತ್ತ ಸೈನಿಕರಾದ ಜಯಣ್ಣ, ಎನ್.ಟಿ. ಗೋವಿಂದರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಗೀತಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-44-1011542612</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>