<p>ದಾವಣಗೆರೆ: ‘ವಿಕಸಿತ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡಲು ಶ್ರಮಿಸಬೇಕು’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ಬೆಳಗಾವಿ) ಕುಲಪತಿ ಎಸ್.ವಿದ್ಯಾಶಂಕರ ಹೇಳಿದರು.</p>.<p>ಇಲ್ಲಿನ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ‘ಚೈತ್ರ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುಬಿಡಿಟಿ ಕಾಲೇಜು ಯಾವುದೇ ಖಾಸಗಿ ಕಾಲೇಜಿಗಿಂತ ಹಿಂದೆ ಉಳಿದಿಲ್ಲ. ಮೇ 29, 30ರಂದು ಅಮೃತ ಮಹೋತ್ಸವ ಆಚರಿಸುತ್ತಿರುವ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಬಹಳ ಅದೃಷ್ಟವಂತರು’ ಎಂದರು.</p>.<p>‘ಕಾಲೇಜಿನಲ್ಲಿ 800 ಆಸನಗಳ ಸುಸಜ್ಜಿತ ಆಡಿಟೋರಿಯಂ ಸಿದ್ಧವಾಗುತ್ತಿದೆ. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಎಲ್ಲಾ ಬಗೆಯ ಲ್ಯಾಬ್ಗಳಿವೆ. ವಿಟಿಯುಗೆ ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳು ಬಂದಿವೆ’ ಎಂದು ತಿಳಿಸಿದರು.</p>.<p>‘ಕಲೆ, ಕ್ರೀಡೆಗೂ ಉತ್ತೇಜನ ನೀಡುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಾರಿಯ ಕಾರ್ಯಕ್ರಮ ವಿಶೇಷವಾಗಿರುವ ಕಾರಣ ಕಾಲೇಜು ಕೇಳಿದ್ದಕ್ಕಿಂತ ₹ 20 ಲಕ್ಷ ಹೆಚ್ಚು ಅನುದಾನವನ್ನು ವಿಶ್ವವಿದ್ಯಾಲಯದಿಂದ ನೀಡಲಾಗಿದೆ. ದೇಶದಲ್ಲೇ ಅಗ್ರಗಣ್ಯ ತಾಂತ್ರಿಕ ವಿಶ್ವವಿದ್ಯಾಲಯ ನಮ್ಮದಾಗಬೇಕು ಎಂಬ ಕನಸಿದೆ’ ಎಂದು ಹೇಳಿದರು.</p>.<p>‘ಈ ಹಿಂದೆ ₹ 90 ಸಾವಿರ ಅನುದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಿದ್ದೆವು. ಈ ಬಾರಿ ₹ 75 ಲಕ್ಷ ವೆಚ್ಚದಲ್ಲಿ ಚೈತ್ರ ಕಾರ್ಯಕ್ರಮ ನಡೆಸುತ್ತಿದ್ದೇವೆ. ಕುಲಪತಿ ಆದಿಯಾಗಿ ಎಲ್ಲರ ಸಹಕಾರದಿಂದ ಇದು ಸಾಧ್ಯವಾಗುತ್ತಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಡಿ.ಪಿ.ನಾಗರಾಜಪ್ಪ ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ., ವಿವಿಧ ವಿಭಾಗಗಳ ಡೀನ್ಗಳಾದ ಮಂಜಾನಾಯ್ಕ ಎನ್., ಎಸ್.ಮಂಜಪ್ಪ, ಈರಪ್ಪ ಸೊಗಲದ, ಕೆ.ಮಂಜುನಾಥ್, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-43-1056853166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ವಿಕಸಿತ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡಲು ಶ್ರಮಿಸಬೇಕು’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ಬೆಳಗಾವಿ) ಕುಲಪತಿ ಎಸ್.ವಿದ್ಯಾಶಂಕರ ಹೇಳಿದರು.</p>.<p>ಇಲ್ಲಿನ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ‘ಚೈತ್ರ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುಬಿಡಿಟಿ ಕಾಲೇಜು ಯಾವುದೇ ಖಾಸಗಿ ಕಾಲೇಜಿಗಿಂತ ಹಿಂದೆ ಉಳಿದಿಲ್ಲ. ಮೇ 29, 30ರಂದು ಅಮೃತ ಮಹೋತ್ಸವ ಆಚರಿಸುತ್ತಿರುವ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಬಹಳ ಅದೃಷ್ಟವಂತರು’ ಎಂದರು.</p>.<p>‘ಕಾಲೇಜಿನಲ್ಲಿ 800 ಆಸನಗಳ ಸುಸಜ್ಜಿತ ಆಡಿಟೋರಿಯಂ ಸಿದ್ಧವಾಗುತ್ತಿದೆ. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಎಲ್ಲಾ ಬಗೆಯ ಲ್ಯಾಬ್ಗಳಿವೆ. ವಿಟಿಯುಗೆ ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳು ಬಂದಿವೆ’ ಎಂದು ತಿಳಿಸಿದರು.</p>.<p>‘ಕಲೆ, ಕ್ರೀಡೆಗೂ ಉತ್ತೇಜನ ನೀಡುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಾರಿಯ ಕಾರ್ಯಕ್ರಮ ವಿಶೇಷವಾಗಿರುವ ಕಾರಣ ಕಾಲೇಜು ಕೇಳಿದ್ದಕ್ಕಿಂತ ₹ 20 ಲಕ್ಷ ಹೆಚ್ಚು ಅನುದಾನವನ್ನು ವಿಶ್ವವಿದ್ಯಾಲಯದಿಂದ ನೀಡಲಾಗಿದೆ. ದೇಶದಲ್ಲೇ ಅಗ್ರಗಣ್ಯ ತಾಂತ್ರಿಕ ವಿಶ್ವವಿದ್ಯಾಲಯ ನಮ್ಮದಾಗಬೇಕು ಎಂಬ ಕನಸಿದೆ’ ಎಂದು ಹೇಳಿದರು.</p>.<p>‘ಈ ಹಿಂದೆ ₹ 90 ಸಾವಿರ ಅನುದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಿದ್ದೆವು. ಈ ಬಾರಿ ₹ 75 ಲಕ್ಷ ವೆಚ್ಚದಲ್ಲಿ ಚೈತ್ರ ಕಾರ್ಯಕ್ರಮ ನಡೆಸುತ್ತಿದ್ದೇವೆ. ಕುಲಪತಿ ಆದಿಯಾಗಿ ಎಲ್ಲರ ಸಹಕಾರದಿಂದ ಇದು ಸಾಧ್ಯವಾಗುತ್ತಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಡಿ.ಪಿ.ನಾಗರಾಜಪ್ಪ ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ., ವಿವಿಧ ವಿಭಾಗಗಳ ಡೀನ್ಗಳಾದ ಮಂಜಾನಾಯ್ಕ ಎನ್., ಎಸ್.ಮಂಜಪ್ಪ, ಈರಪ್ಪ ಸೊಗಲದ, ಕೆ.ಮಂಜುನಾಥ್, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-43-1056853166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>