<p>ದಾವಣಗೆರೆ: ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ಶನಿವಾರ ಡಿಆರ್ಎಂ ವಿಜ್ಞಾನ ಕಾಲೇಜಿನ ಸಾಂಸ್ಕೃತಿಕ ಸಂಘ, ಐಕ್ಯೂಎಸಿ ಅಡಿಯಲ್ಲಿ 2025- 26ನೇ ಸಾಲಿನ ಸಮಾರೋಪ ಸಮಾರಂಭ ನಡೆಯಿತು.</p>.<p>ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ಶಿವಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಆದರ್ಶಮಯವಾದ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ರಂಗಕಲಾ ಶಿಕ್ಷಕ ವೆಂಕಟೇಶ್ವರ ಕೆ. ಅವರು ಡಿಆರ್ಎಂ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ರೋಹಿತ್ ಎಲ್.ಎಸ್. ಅವರ ಎರಡು ಇಂಗ್ಲಿಷ್ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ ಎಂ.ಪಿ. ಮಾತನಾಡಿದರು.</p>.<p>ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರಮುಖರಾದ ಡಾ.ಮಂಜುನಾಥ್ ಚೆನ್ನಿ, ಶಿವಪ್ಪ ಮಳ್ಳೂರ, ಡಾ.ಮಂಜುರಾಜ್ ಟಿ., ಡಾ.ವಸಂತ್ ನಾಯ್ಕ ಹಾಗೂ ಕಾಲೇಜಿನ ಎಲ್ಲ ಅಧ್ಯಾಪಕ ವೃಂದದವರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-43-2024441168</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ಶನಿವಾರ ಡಿಆರ್ಎಂ ವಿಜ್ಞಾನ ಕಾಲೇಜಿನ ಸಾಂಸ್ಕೃತಿಕ ಸಂಘ, ಐಕ್ಯೂಎಸಿ ಅಡಿಯಲ್ಲಿ 2025- 26ನೇ ಸಾಲಿನ ಸಮಾರೋಪ ಸಮಾರಂಭ ನಡೆಯಿತು.</p>.<p>ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ಶಿವಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಆದರ್ಶಮಯವಾದ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ರಂಗಕಲಾ ಶಿಕ್ಷಕ ವೆಂಕಟೇಶ್ವರ ಕೆ. ಅವರು ಡಿಆರ್ಎಂ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ರೋಹಿತ್ ಎಲ್.ಎಸ್. ಅವರ ಎರಡು ಇಂಗ್ಲಿಷ್ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ ಎಂ.ಪಿ. ಮಾತನಾಡಿದರು.</p>.<p>ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರಮುಖರಾದ ಡಾ.ಮಂಜುನಾಥ್ ಚೆನ್ನಿ, ಶಿವಪ್ಪ ಮಳ್ಳೂರ, ಡಾ.ಮಂಜುರಾಜ್ ಟಿ., ಡಾ.ವಸಂತ್ ನಾಯ್ಕ ಹಾಗೂ ಕಾಲೇಜಿನ ಎಲ್ಲ ಅಧ್ಯಾಪಕ ವೃಂದದವರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-43-2024441168</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>