<p>ದಾವಣಗೆರೆ: ನಗರದ ಗುರು ಶಿವಯೋಗಿ ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾ ಚಟುವಟಿಕೆ, ಎನ್.ಎಸ್.ಎಸ್., ಯುವ ರೆಡ್ ಕ್ರಾಸ್ ಘಟಕದ ಸಮಾರೋಪ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.</p>.<p>ಕಾಲೇಜಿನ ಪ್ರಾಂಶುಪಾಲ ಗುರು ಎಂ.ಸಿ. ಮಾತನಾಡಿ, ‘ವಿದ್ಯಾರ್ಥಿಗಳು ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗವನ್ನು ಸೃಷ್ಟಿಸುವತ್ತ ಗಮನಹರಿಸಬೇಕು. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಲೆಕ್ಕ ಪರಿಶೋಧಕರಾದ ಸಹನಾ ವಿ., ಸಿಂಘವಿ ದೇವ, ಉನ್ನಿ ಎಲ್ಎಲ್ಪಿ ಹಾಗೂ ಚಲನಚಿತ್ರ ನಟಿ ಕಾರುಣ್ಯಗೌಡ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು 3 ವರ್ಷ ಏನು ಕಲಿತೆ ಎಂಬುದನ್ನು ಪರಾಮರ್ಶಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗಕ್ಕೆ ನಿಮ್ಮನ್ನು ನೀವು ತೆರೆದುಕೊಳ್ಳಬೇಕು. ಏನೂ ಪ್ರಯತ್ನ ಮಾಡದೇ, ಗುರುತಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷ ಬಿ.ಸಿ. ಶಿವಕುಮಾರ್ ಹೇಳಿದರು.</p>.<p>‘ಪ್ರತಿದಿನ ಹೊಸತನ್ನು ಕಲಿಯುತ್ತಾ ಹೋಗಬೇಕು. ಸಾಧನೆ ಮಾಡಲು ಮೊದಲು ತಾಳ್ಮೆ ಇರಬೇಕು’ ಎಂದರು.</p>.<p>ಎಸ್ಬಿಸಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಷಣ್ಮುಖ ಕೆ., ಅಥಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಯಾನ ದಿವ್ಯಾ, ಕಾಲೇಜಿನ ಉಪನ್ಯಾಸಕರು, ಕಚೇರಿ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-43-826983033</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ನಗರದ ಗುರು ಶಿವಯೋಗಿ ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾ ಚಟುವಟಿಕೆ, ಎನ್.ಎಸ್.ಎಸ್., ಯುವ ರೆಡ್ ಕ್ರಾಸ್ ಘಟಕದ ಸಮಾರೋಪ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.</p>.<p>ಕಾಲೇಜಿನ ಪ್ರಾಂಶುಪಾಲ ಗುರು ಎಂ.ಸಿ. ಮಾತನಾಡಿ, ‘ವಿದ್ಯಾರ್ಥಿಗಳು ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗವನ್ನು ಸೃಷ್ಟಿಸುವತ್ತ ಗಮನಹರಿಸಬೇಕು. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಲೆಕ್ಕ ಪರಿಶೋಧಕರಾದ ಸಹನಾ ವಿ., ಸಿಂಘವಿ ದೇವ, ಉನ್ನಿ ಎಲ್ಎಲ್ಪಿ ಹಾಗೂ ಚಲನಚಿತ್ರ ನಟಿ ಕಾರುಣ್ಯಗೌಡ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು 3 ವರ್ಷ ಏನು ಕಲಿತೆ ಎಂಬುದನ್ನು ಪರಾಮರ್ಶಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗಕ್ಕೆ ನಿಮ್ಮನ್ನು ನೀವು ತೆರೆದುಕೊಳ್ಳಬೇಕು. ಏನೂ ಪ್ರಯತ್ನ ಮಾಡದೇ, ಗುರುತಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷ ಬಿ.ಸಿ. ಶಿವಕುಮಾರ್ ಹೇಳಿದರು.</p>.<p>‘ಪ್ರತಿದಿನ ಹೊಸತನ್ನು ಕಲಿಯುತ್ತಾ ಹೋಗಬೇಕು. ಸಾಧನೆ ಮಾಡಲು ಮೊದಲು ತಾಳ್ಮೆ ಇರಬೇಕು’ ಎಂದರು.</p>.<p>ಎಸ್ಬಿಸಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಷಣ್ಮುಖ ಕೆ., ಅಥಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಯಾನ ದಿವ್ಯಾ, ಕಾಲೇಜಿನ ಉಪನ್ಯಾಸಕರು, ಕಚೇರಿ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-43-826983033</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>