<p>ದಾವಣಗೆರೆ: 1951ರಲ್ಲಿ ಆರಂಭ ವಾಗಿರುವ ಇಲ್ಲಿನ ಸರ್ಕಾರಿ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿಗೆ 75 ವಸಂತಗಳು ತುಂಬಿರುವ ಅಂಗವಾಗಿ ಹಮ್ಮಿಕೊಂಡಿರುವ ಅಮೃತ ಮಹೋತ್ಸವ ಸಮಾರಂಭದ ಉದ್ಘಾಟನೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 29ರಂದು ನಗರಕ್ಕೆ ಆಗಮಿಸಲಿದ್ದಾರೆ.</p>.<p>‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ವ್ಯಾಪ್ತಿಯಲ್ಲಿರುವ ಬಿಡಿಟಿ ಕಾಲೇಜು ರಾಜ್ಯದ ಹಳೆಯ ತಾಂತ್ರಿಕ ಕಾಲೇಜುಗಳಲ್ಲೊಂದು. ಶುಕ್ರವಾರ ಮಧ್ಯಾಹ್ನ 12.20ಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿ, ಮಧ್ಯಾಹ್ನ 3.30ಕ್ಕೆ ಶಿವಮೊಗ್ಗಕ್ಕೆ ತೆರಳಲಿದ್ದಾರೆ’ ಎಂದು ಕುಲಪತಿ ಎಸ್. ವಿದ್ಯಾಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಅಮೃತ ಮಹೋತ್ಸವದ ಅಂಗವಾಗಿ ₹10 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲಾಗುತ್ತಿದೆ. 8 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ನಿರ್ಮಿಸುವ ಉದ್ದೇಶವಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-4-1631427993</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: 1951ರಲ್ಲಿ ಆರಂಭ ವಾಗಿರುವ ಇಲ್ಲಿನ ಸರ್ಕಾರಿ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿಗೆ 75 ವಸಂತಗಳು ತುಂಬಿರುವ ಅಂಗವಾಗಿ ಹಮ್ಮಿಕೊಂಡಿರುವ ಅಮೃತ ಮಹೋತ್ಸವ ಸಮಾರಂಭದ ಉದ್ಘಾಟನೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 29ರಂದು ನಗರಕ್ಕೆ ಆಗಮಿಸಲಿದ್ದಾರೆ.</p>.<p>‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ವ್ಯಾಪ್ತಿಯಲ್ಲಿರುವ ಬಿಡಿಟಿ ಕಾಲೇಜು ರಾಜ್ಯದ ಹಳೆಯ ತಾಂತ್ರಿಕ ಕಾಲೇಜುಗಳಲ್ಲೊಂದು. ಶುಕ್ರವಾರ ಮಧ್ಯಾಹ್ನ 12.20ಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿ, ಮಧ್ಯಾಹ್ನ 3.30ಕ್ಕೆ ಶಿವಮೊಗ್ಗಕ್ಕೆ ತೆರಳಲಿದ್ದಾರೆ’ ಎಂದು ಕುಲಪತಿ ಎಸ್. ವಿದ್ಯಾಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಅಮೃತ ಮಹೋತ್ಸವದ ಅಂಗವಾಗಿ ₹10 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲಾಗುತ್ತಿದೆ. 8 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ನಿರ್ಮಿಸುವ ಉದ್ದೇಶವಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-4-1631427993</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>