<p>ಧಾರವಾಡ: ‘ಪ್ರಸ್ತುತ ಸಿನಿಮಾ ಹಾಡುಗಳು, ಕವಿತೆ, ಕಥೆಗಳು ಕೃತಕ ಬುದ್ಧಿಮತ್ತೆ (ಎಐ) ಮೂಲಕ ಬರುತ್ತಿವೆ. ಇದು ಸೃಜನಶೀಲ ಬರವಣಿಗೆ ಮೇಲಿನ ದಾಳಿಯಾಗಿದೆ' ಎಂದು ಸಾಹಿತಿ ವಿನಯಾ ಒಕ್ಕುಂದ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಎಐ ಬರವಣಿಗೆಯಲ್ಲಿ ಜೀವಂತಿಕೆ ಇಲ್ಲ. ವಿಷಯವನ್ನು ಜೋಡಿಸಿ ಕೊಡುತ್ತೆ ಎಂಬುದು ಹೊರತುಪಡಿಸಿದರೆ, ಸೃಜನಶೀಲತೆಯು ಈ ಬರವಣಿಗೆಯಲ್ಲಿ ಕಂಡುಬರುವುದಿಲ್ಲ’ ಎಂದರು.</p>.<p>‘ಕನ್ನಡ ಸಾಹಿತ್ಯ ಬಿಕ್ಕಟ್ಟಿಗೆ ಸಿಲುಕಿದೆ. ಒಂದೊಮ್ಮೆ ಪ್ರತಿರೋಧ ಒಡ್ಡುತ್ತಿದ್ದ ಕನ್ನಡ ಸಾಹಿತ್ಯ ಇಂದು ಮೌನವಾಗಿದೆ. ಇಂದು ಬರಹವು ಬಹಳಷ್ಟು ಸುಲಭವಾಗಿದೆ. ಆದರೆ, ಅದು ಅವಕಾಶವಾದಿ ಮತ್ತು ಅಪಯಕಾರಿಯಾಗಿ ಬದಲಾಗಿದೆ. ಇದರಿಂದ ಸಾಹಿತ್ಯದ ಗೌರವ ಕಡಿಮೆಯಾಗಿದೆ. ಈ ಬಗ್ಗೆ ಹಿರಿಯ ಸಾಹಿತಿಗಳು ಚಿಂತನೆ ನಡೆಸಬೇಕು’ ಎಂದರು.</p>.<p>ಸಮ್ಮೇಳನಾಧ್ಯಕ್ಷೆ ಹೇಮಾ ಪಟ್ಟಣಶೆಟ್ಟಿ ಮಾತನಾಡಿ, ‘ಕನ್ನಡ ಸಾಹಿತ್ಯವು ಅಕ್ಷರಗಳ ವಿಲಾಸವಾಗಬಾರದು. ಅದು ಸಮಾಜದ ಎಲ್ಲರ ಧ್ವನಿಯಾಗಬೇಕು. ಮನುಷ್ಯತ್ವ ಎಚ್ಚರಿಸುವ ಮತ್ತು ಪ್ರೀತಿಯನ್ನು ಬಿತ್ತುವ ಕನ್ನಡಿಯಾಗಬೇಕು’ ಎಂದರು.</p>.<p>‘ಜಾಗತೀಕರಣದಿಂದ ಕನ್ನಡ ಭಾಷೆ ಸೊರಗಬಾರದು. ತಂತ್ರಜ್ಞಾನದ ಜೊತೆಗೆ ಕನ್ನಡವನ್ನು ಬೆಸೆಯಬೇಕು. ಕನ್ನಡಿಗರು ಕೀಳರಿಮೆ ಬಿಟ್ಟು ಹೆಮ್ಮೆಯಿಂದ ಕನ್ನಡ ಮಾತನಾಡಬೇಕು. ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಥಮ ಅದ್ಯತೆ ಸಿಗಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಬಾಲವಿಕಾಸ ಅಕ್ಯಾಡೆಮಿ ಅಧ್ಯಕ್ಷ ಅಡವೀಶ ಇಟಗಿ ಮಾತನಾಡಿ, ‘ಮಕ್ಕಳು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಇದು ಒಳ್ಳೆಯ ನಿರ್ಧಾರ’ ಎಂದರು.</p>.<p>ಸಾಹಿತಿ ಸಿದ್ಧಲಿಂಗ ಪಟ್ಟಣಶೆಟ್ಟಿ, ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ, ವೀಣಾ ಬಿರಾದಾರ, ಸವಿತಾ ಅಮರಶೆಟ್ಟಿ, ಎಸ್.ಎಸ್.ದೊಡಮನಿ, ಪ್ರಮೀಳಾ ಜಕ್ಕಣ್ಣವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-24-1576099369</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಪ್ರಸ್ತುತ ಸಿನಿಮಾ ಹಾಡುಗಳು, ಕವಿತೆ, ಕಥೆಗಳು ಕೃತಕ ಬುದ್ಧಿಮತ್ತೆ (ಎಐ) ಮೂಲಕ ಬರುತ್ತಿವೆ. ಇದು ಸೃಜನಶೀಲ ಬರವಣಿಗೆ ಮೇಲಿನ ದಾಳಿಯಾಗಿದೆ' ಎಂದು ಸಾಹಿತಿ ವಿನಯಾ ಒಕ್ಕುಂದ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಎಐ ಬರವಣಿಗೆಯಲ್ಲಿ ಜೀವಂತಿಕೆ ಇಲ್ಲ. ವಿಷಯವನ್ನು ಜೋಡಿಸಿ ಕೊಡುತ್ತೆ ಎಂಬುದು ಹೊರತುಪಡಿಸಿದರೆ, ಸೃಜನಶೀಲತೆಯು ಈ ಬರವಣಿಗೆಯಲ್ಲಿ ಕಂಡುಬರುವುದಿಲ್ಲ’ ಎಂದರು.</p>.<p>‘ಕನ್ನಡ ಸಾಹಿತ್ಯ ಬಿಕ್ಕಟ್ಟಿಗೆ ಸಿಲುಕಿದೆ. ಒಂದೊಮ್ಮೆ ಪ್ರತಿರೋಧ ಒಡ್ಡುತ್ತಿದ್ದ ಕನ್ನಡ ಸಾಹಿತ್ಯ ಇಂದು ಮೌನವಾಗಿದೆ. ಇಂದು ಬರಹವು ಬಹಳಷ್ಟು ಸುಲಭವಾಗಿದೆ. ಆದರೆ, ಅದು ಅವಕಾಶವಾದಿ ಮತ್ತು ಅಪಯಕಾರಿಯಾಗಿ ಬದಲಾಗಿದೆ. ಇದರಿಂದ ಸಾಹಿತ್ಯದ ಗೌರವ ಕಡಿಮೆಯಾಗಿದೆ. ಈ ಬಗ್ಗೆ ಹಿರಿಯ ಸಾಹಿತಿಗಳು ಚಿಂತನೆ ನಡೆಸಬೇಕು’ ಎಂದರು.</p>.<p>ಸಮ್ಮೇಳನಾಧ್ಯಕ್ಷೆ ಹೇಮಾ ಪಟ್ಟಣಶೆಟ್ಟಿ ಮಾತನಾಡಿ, ‘ಕನ್ನಡ ಸಾಹಿತ್ಯವು ಅಕ್ಷರಗಳ ವಿಲಾಸವಾಗಬಾರದು. ಅದು ಸಮಾಜದ ಎಲ್ಲರ ಧ್ವನಿಯಾಗಬೇಕು. ಮನುಷ್ಯತ್ವ ಎಚ್ಚರಿಸುವ ಮತ್ತು ಪ್ರೀತಿಯನ್ನು ಬಿತ್ತುವ ಕನ್ನಡಿಯಾಗಬೇಕು’ ಎಂದರು.</p>.<p>‘ಜಾಗತೀಕರಣದಿಂದ ಕನ್ನಡ ಭಾಷೆ ಸೊರಗಬಾರದು. ತಂತ್ರಜ್ಞಾನದ ಜೊತೆಗೆ ಕನ್ನಡವನ್ನು ಬೆಸೆಯಬೇಕು. ಕನ್ನಡಿಗರು ಕೀಳರಿಮೆ ಬಿಟ್ಟು ಹೆಮ್ಮೆಯಿಂದ ಕನ್ನಡ ಮಾತನಾಡಬೇಕು. ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಥಮ ಅದ್ಯತೆ ಸಿಗಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಬಾಲವಿಕಾಸ ಅಕ್ಯಾಡೆಮಿ ಅಧ್ಯಕ್ಷ ಅಡವೀಶ ಇಟಗಿ ಮಾತನಾಡಿ, ‘ಮಕ್ಕಳು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಇದು ಒಳ್ಳೆಯ ನಿರ್ಧಾರ’ ಎಂದರು.</p>.<p>ಸಾಹಿತಿ ಸಿದ್ಧಲಿಂಗ ಪಟ್ಟಣಶೆಟ್ಟಿ, ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ, ವೀಣಾ ಬಿರಾದಾರ, ಸವಿತಾ ಅಮರಶೆಟ್ಟಿ, ಎಸ್.ಎಸ್.ದೊಡಮನಿ, ಪ್ರಮೀಳಾ ಜಕ್ಕಣ್ಣವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-24-1576099369</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>