<p>ಧಾರವಾಡ: ‘ಅಸ್ಪೃಶ್ಯತೆ ಮತ್ತು ಜಾತಿ ಪದ್ದತಿ ನಿರ್ಮೂಲನೆಗೆ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರು ಶ್ರಮಿಸಿದರು’ ಎಂದು ಜೆಎಸ್ಎಸ್ ಕಾರ್ಯದರ್ಶಿ ಅಜಿತ ಪ್ರಸಾದ ಹೇಳಿದರು.</p>.<p>ಜೆಎಸ್ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಐ.ಟಿ.ಐ ಕಾಲೇಜು ಮತ್ತು ಎಂಸಿಎ ಕಾಲೇಜು ವತಿಯಿಂದ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಅಂಬೇಡ್ಕರ್ ಅವರು ದಲಿತರ ಧ್ವನಿಯಾಗಿ, ಸ್ವಾತಂತ್ರ್ಯ ಪೂರ್ವ ಹಾಗೂ ನಂತರ ದಿನಗಳಲ್ಲಿ ಸತತವಾಗಿ ಹೋರಾಡಿದರು. ಸಂವಿಧಾನ ರಚಿಸಿ ಸಮಾನತೆ ಸಾರಿದರು. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪ್ರಯತ್ನಿಸಬೇಕು’ ಎಂದರು.</p>.<p>ಪ್ರಾಧ್ಯಾಪಕ ಆರ್.ವಿ. ಚಿಟಗುಪ್ಪಿ ಮಾತನಾಡಿ, ‘ಶೋಷಿತರು ಇಂದು ಸಮಾಜದಲ್ಲಿ ಒಳ್ಳೆಯ ಜೀವನ ನಡೆಸಲು ಅಂಬೇಡ್ಕರ್ ಅವರ ಹೋರಾಟವೇ ಕಾರಣ. ಸಮಾಜದಲ್ಲಿ ಸಮಾನತೆ ತರಬೇಕಾದರೆ ಎಲ್ಲರಿಗೂ ಶಿಕ್ಷಣ ದೊರೆಯಬೇಕು’ ಎಂದರು.</p>.<p>ಜೆಎಸ್ಎಸ್ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾದ್ಯೆ, ಜ್ಯೋತಿ ಅಕ್ಕಿ, ಶೃತಿ ಶೆಟ್ಟಿ, ರೋನಿಲ್ ಮನೋಹರ್, ಶಿಲ್ಪಾ ನಾಯಕ್, ಮುರಳಿಧರ್ ಹೆಗಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-1423859195</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಅಸ್ಪೃಶ್ಯತೆ ಮತ್ತು ಜಾತಿ ಪದ್ದತಿ ನಿರ್ಮೂಲನೆಗೆ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರು ಶ್ರಮಿಸಿದರು’ ಎಂದು ಜೆಎಸ್ಎಸ್ ಕಾರ್ಯದರ್ಶಿ ಅಜಿತ ಪ್ರಸಾದ ಹೇಳಿದರು.</p>.<p>ಜೆಎಸ್ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಐ.ಟಿ.ಐ ಕಾಲೇಜು ಮತ್ತು ಎಂಸಿಎ ಕಾಲೇಜು ವತಿಯಿಂದ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಅಂಬೇಡ್ಕರ್ ಅವರು ದಲಿತರ ಧ್ವನಿಯಾಗಿ, ಸ್ವಾತಂತ್ರ್ಯ ಪೂರ್ವ ಹಾಗೂ ನಂತರ ದಿನಗಳಲ್ಲಿ ಸತತವಾಗಿ ಹೋರಾಡಿದರು. ಸಂವಿಧಾನ ರಚಿಸಿ ಸಮಾನತೆ ಸಾರಿದರು. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪ್ರಯತ್ನಿಸಬೇಕು’ ಎಂದರು.</p>.<p>ಪ್ರಾಧ್ಯಾಪಕ ಆರ್.ವಿ. ಚಿಟಗುಪ್ಪಿ ಮಾತನಾಡಿ, ‘ಶೋಷಿತರು ಇಂದು ಸಮಾಜದಲ್ಲಿ ಒಳ್ಳೆಯ ಜೀವನ ನಡೆಸಲು ಅಂಬೇಡ್ಕರ್ ಅವರ ಹೋರಾಟವೇ ಕಾರಣ. ಸಮಾಜದಲ್ಲಿ ಸಮಾನತೆ ತರಬೇಕಾದರೆ ಎಲ್ಲರಿಗೂ ಶಿಕ್ಷಣ ದೊರೆಯಬೇಕು’ ಎಂದರು.</p>.<p>ಜೆಎಸ್ಎಸ್ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾದ್ಯೆ, ಜ್ಯೋತಿ ಅಕ್ಕಿ, ಶೃತಿ ಶೆಟ್ಟಿ, ರೋನಿಲ್ ಮನೋಹರ್, ಶಿಲ್ಪಾ ನಾಯಕ್, ಮುರಳಿಧರ್ ಹೆಗಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-1423859195</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>