<p>ಧಾರವಾಡ: ‘ಪ್ರಸ್ತುತ ಭಾರತದಂತಹ ಪ್ರಜಾಸತ್ತಾತ್ಮಕ ದೇಶದಲ್ಲಿ ಒಬ್ಬ ವ್ಯಕ್ತಿಯ ಪರಿಚಯವನ್ನು ಅವನ ಜಾತಿಯಿಂದ ಗುರುತಿಸುತ್ತಿರುವುದು ವಿಷಾದಕರ ಸಂಗತಿ’ ಎಂದು ಬೆಂಗಳೂರಿನ ದಲಿತ ಚಿಂತಕ ಪ್ರೊ.ಎ.ಹರಿರಾಮ ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಬಾಬು ಜಗಜೀವನರಾಂ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವು ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದ ಸಭಾಂಗಣದಲ್ಲಿ ಈಚೆಗೆ ನಡೆದ ಬಾಬು ಜಗಜೀವನರಾಂ ಜಯಂತ್ಯುತ್ಸವದಲ್ಲಿ ಮಾತನಾಡಿದರು.</p>.<p>‘ದೇಶ ಕಟ್ಟುವಲ್ಲಿ ಅನೇಕ ಮಹನೀಯರ ಕೊಡುಗೆ ಇದೆ. ಹೊಸ ಪೀಳಿಗೆಗೆ ದೇಶದ ಮಹಾನ್ ನಾಯಕರ ಸಂದೇಶಗಳನ್ನು ತಿಳಿಸುವ ಅಗತ್ಯವಿದೆ’ ಎಂದರು.</p>.<p>ಮನಸೂರಿ ರೇವಣ ಸಿದ್ದೇಶ್ವರ ಮಹಾಮಠದ ಬಸವರಾಜ ದೇವರು ಮಾತನಾಡಿ, ‘ಇಂದಿಗೂ ಜಾತಿ ತಾರತಮ್ಯ ಅವ್ಯಾಹತವಾಗಿ ನಡೆದಿದೆ. ಬಾಬು ಜಗಜೀವನರಾಂ ಅವರ ಸಂದೇಶಗಳನ್ನು ಜನರಿಗೆ ತಲುಪಲಿ’ ಎಂದು ಹೇಳಿದರು.</p>.<p>ಕರ್ನಾಟಕ ವಿವಿ ಕುಲಪತಿ ಪ್ರೊ.ಎ.ಎಂ.ಖಾನ್ ಮಾತನಾಡಿ, ‘ಜಾತ್ಯತೀತ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಶ್ರಮಿಸಬೇಕಾದ ಅಗತ್ಯವಿದೆ. ಹಸಿರು ಕ್ರಾಂತಿ ಮತ್ತು ಆಹಾರ ಭದ್ರತೆಗೆ ಬಾಬು ಜಗಜೀವನರಾಂ ಮಾಡಿದ ಕಾರ್ಯ ಶ್ಲಾಘನೀಯ’ ಎಂದರು.</p>.<p>ಪ್ರೊ.ಜಯಶ್ರೀ ದೇಶಮಾನೆ ಅವರ ಮೀಸಲಾತಿ ಜನಕ ಕೃತಿ ಬಿಡುಗಡೆ ಮಾಡಲಾಯಿತು.</p>.<p>ಕುಲಸಚಿವ ಶಂಕರೆಪ್ಪ ವಣಿಕ್ಯಾಳ, ಪರೀಕ್ಷಾಂಗ ಕುಲಸಚಿವ ನಿಜಲಿಂಗಪ್ಪ ಮಟ್ಟಿಹಾಳ, ಸಿಂಡಿಕೇಟ್ ಸದಸ್ಯ ಮಹೇಶ ಹುಲ್ಲೆನ್ನವರ, ಹಣಕಾಸು ಅಧಿಕಾರಿ ಪ್ರದೀಪಕುಮಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-24-348986043</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಪ್ರಸ್ತುತ ಭಾರತದಂತಹ ಪ್ರಜಾಸತ್ತಾತ್ಮಕ ದೇಶದಲ್ಲಿ ಒಬ್ಬ ವ್ಯಕ್ತಿಯ ಪರಿಚಯವನ್ನು ಅವನ ಜಾತಿಯಿಂದ ಗುರುತಿಸುತ್ತಿರುವುದು ವಿಷಾದಕರ ಸಂಗತಿ’ ಎಂದು ಬೆಂಗಳೂರಿನ ದಲಿತ ಚಿಂತಕ ಪ್ರೊ.ಎ.ಹರಿರಾಮ ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಬಾಬು ಜಗಜೀವನರಾಂ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವು ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದ ಸಭಾಂಗಣದಲ್ಲಿ ಈಚೆಗೆ ನಡೆದ ಬಾಬು ಜಗಜೀವನರಾಂ ಜಯಂತ್ಯುತ್ಸವದಲ್ಲಿ ಮಾತನಾಡಿದರು.</p>.<p>‘ದೇಶ ಕಟ್ಟುವಲ್ಲಿ ಅನೇಕ ಮಹನೀಯರ ಕೊಡುಗೆ ಇದೆ. ಹೊಸ ಪೀಳಿಗೆಗೆ ದೇಶದ ಮಹಾನ್ ನಾಯಕರ ಸಂದೇಶಗಳನ್ನು ತಿಳಿಸುವ ಅಗತ್ಯವಿದೆ’ ಎಂದರು.</p>.<p>ಮನಸೂರಿ ರೇವಣ ಸಿದ್ದೇಶ್ವರ ಮಹಾಮಠದ ಬಸವರಾಜ ದೇವರು ಮಾತನಾಡಿ, ‘ಇಂದಿಗೂ ಜಾತಿ ತಾರತಮ್ಯ ಅವ್ಯಾಹತವಾಗಿ ನಡೆದಿದೆ. ಬಾಬು ಜಗಜೀವನರಾಂ ಅವರ ಸಂದೇಶಗಳನ್ನು ಜನರಿಗೆ ತಲುಪಲಿ’ ಎಂದು ಹೇಳಿದರು.</p>.<p>ಕರ್ನಾಟಕ ವಿವಿ ಕುಲಪತಿ ಪ್ರೊ.ಎ.ಎಂ.ಖಾನ್ ಮಾತನಾಡಿ, ‘ಜಾತ್ಯತೀತ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಶ್ರಮಿಸಬೇಕಾದ ಅಗತ್ಯವಿದೆ. ಹಸಿರು ಕ್ರಾಂತಿ ಮತ್ತು ಆಹಾರ ಭದ್ರತೆಗೆ ಬಾಬು ಜಗಜೀವನರಾಂ ಮಾಡಿದ ಕಾರ್ಯ ಶ್ಲಾಘನೀಯ’ ಎಂದರು.</p>.<p>ಪ್ರೊ.ಜಯಶ್ರೀ ದೇಶಮಾನೆ ಅವರ ಮೀಸಲಾತಿ ಜನಕ ಕೃತಿ ಬಿಡುಗಡೆ ಮಾಡಲಾಯಿತು.</p>.<p>ಕುಲಸಚಿವ ಶಂಕರೆಪ್ಪ ವಣಿಕ್ಯಾಳ, ಪರೀಕ್ಷಾಂಗ ಕುಲಸಚಿವ ನಿಜಲಿಂಗಪ್ಪ ಮಟ್ಟಿಹಾಳ, ಸಿಂಡಿಕೇಟ್ ಸದಸ್ಯ ಮಹೇಶ ಹುಲ್ಲೆನ್ನವರ, ಹಣಕಾಸು ಅಧಿಕಾರಿ ಪ್ರದೀಪಕುಮಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-24-348986043</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>