<p>ಧಾರವಾಡ: ‘ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಸಂಗೀತ, ನೃತ್ಯ, ನಾಟಕ ಕಲಿಯಬೇಕು’ ಎಂದು ರಂಗಸಮಾಜ ಸದಸ್ಯ ಎಸ್.ಜಹಾಂಗೀರ್ ಹೇಳಿದರು.</p>.<p>ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾ ಭವನದಲ್ಲಿ ಈಚೆಗೆ ನಡೆದ `ಅಭಿನಯ ಅಭಿವ್ಯಕ್ತಿ' ಚಿಣ್ಣರ ಮೇಳದ ಉದ್ಘಾಟನಾ ಶಿಬಿರದಲ್ಲಿ ಮಾತನಾಡಿದರು.</p>.<p>‘ಮಕ್ಕಳಿಗೆ ಬಾಲ್ಯದಲ್ಲಿ ಮಾರ್ಗದರ್ಶನ ನೀಡಬೇಕು. ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದರು.</p>.<p>ರಂಗಸಮಾಜ ಸದಸ್ಯ ಮಹಾಂತೇಶ ಗಜೇಂದ್ರಗಡ ಮಾತನಾಡಿ, ‘ರಂಗಭೂಮಿಯು ಕಲಿಸುವ ಪಾಠವನ್ನು ಯಾವುದೇ ಶಾಲೆ ಕಲಿಸಲ್ಲ. ಸಮಾಜದಲ್ಲಿ ಎಲ್ಲರೊಂದಿಗೆ ಬೆರೆಯುವುದನ್ನು ಕಲಿಸುತ್ತದೆ. ಸಂಬಂಧಗಳ ಮಹತ್ವ ತಿಳಿಸುತ್ತದೆ. ವ್ಯಕ್ತಿತ್ವವನ್ನು ಕಟ್ಟಿಕೊಳ್ಳಲು ಪೂರಕ ವಾತಾವರಣ ಸೃಷ್ಟಿಸುತ್ತದೆ’ ಎಂದರು.</p>.<p>‘ಮಕ್ಕಳು ಮೊಬೈಲ್ ಫೋನ್ ಗೀಳು ಬೆಳೆಸಿಕೊಳ್ಳಬಾರದು. ಮೇಳದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ರಂಗಾಯಣ ರೆಪರ್ಟರಿ ಕಲಾವಿದರು ‘ಮರಳಿ ಮಹಾತ್ಮನೆಡೆಗೆ' ನಾಟಕವನ್ನು ಪ್ರಸ್ತುತಪಡಿಸಿದರು. ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಚಿಣ್ಣರಮೇಳದ ಸಂಚಾಲಕ ಅರುಣಕುಮಾರ ಮೇದಾರ, ತರಬೇತುದಾರ ರಾಜ್ ಕವಡೆನವರ, ಸುನಂದಾ ನಿಂಬನಗೌಡರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-24-564944651</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಸಂಗೀತ, ನೃತ್ಯ, ನಾಟಕ ಕಲಿಯಬೇಕು’ ಎಂದು ರಂಗಸಮಾಜ ಸದಸ್ಯ ಎಸ್.ಜಹಾಂಗೀರ್ ಹೇಳಿದರು.</p>.<p>ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾ ಭವನದಲ್ಲಿ ಈಚೆಗೆ ನಡೆದ `ಅಭಿನಯ ಅಭಿವ್ಯಕ್ತಿ' ಚಿಣ್ಣರ ಮೇಳದ ಉದ್ಘಾಟನಾ ಶಿಬಿರದಲ್ಲಿ ಮಾತನಾಡಿದರು.</p>.<p>‘ಮಕ್ಕಳಿಗೆ ಬಾಲ್ಯದಲ್ಲಿ ಮಾರ್ಗದರ್ಶನ ನೀಡಬೇಕು. ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದರು.</p>.<p>ರಂಗಸಮಾಜ ಸದಸ್ಯ ಮಹಾಂತೇಶ ಗಜೇಂದ್ರಗಡ ಮಾತನಾಡಿ, ‘ರಂಗಭೂಮಿಯು ಕಲಿಸುವ ಪಾಠವನ್ನು ಯಾವುದೇ ಶಾಲೆ ಕಲಿಸಲ್ಲ. ಸಮಾಜದಲ್ಲಿ ಎಲ್ಲರೊಂದಿಗೆ ಬೆರೆಯುವುದನ್ನು ಕಲಿಸುತ್ತದೆ. ಸಂಬಂಧಗಳ ಮಹತ್ವ ತಿಳಿಸುತ್ತದೆ. ವ್ಯಕ್ತಿತ್ವವನ್ನು ಕಟ್ಟಿಕೊಳ್ಳಲು ಪೂರಕ ವಾತಾವರಣ ಸೃಷ್ಟಿಸುತ್ತದೆ’ ಎಂದರು.</p>.<p>‘ಮಕ್ಕಳು ಮೊಬೈಲ್ ಫೋನ್ ಗೀಳು ಬೆಳೆಸಿಕೊಳ್ಳಬಾರದು. ಮೇಳದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ರಂಗಾಯಣ ರೆಪರ್ಟರಿ ಕಲಾವಿದರು ‘ಮರಳಿ ಮಹಾತ್ಮನೆಡೆಗೆ' ನಾಟಕವನ್ನು ಪ್ರಸ್ತುತಪಡಿಸಿದರು. ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಚಿಣ್ಣರಮೇಳದ ಸಂಚಾಲಕ ಅರುಣಕುಮಾರ ಮೇದಾರ, ತರಬೇತುದಾರ ರಾಜ್ ಕವಡೆನವರ, ಸುನಂದಾ ನಿಂಬನಗೌಡರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-24-564944651</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>