<p>ಉಪ್ಪಿನಬೆಟಗೇರಿ: ’ವಿದ್ಯೆಯೊಂದಿಗೆ ಸಂಸ್ಕಾರ ಮತ್ತು ಮೌಲ್ಯವು ಬೆರೆತಾಗ ಮಾತ್ರ ಸುಸಂಸ್ಕೃತ ಸಮಾಜ ಕಟ್ಟಲು ಸಾಧ್ಯ’ ಎಂದು ಹರ್ಲಾಪುರದ ಅಭಿನವ ಕೊಟ್ಟೂರೇಶ್ವರ ಸ್ವಾಮೀಜಿ ಹೇಳಿದರು.</p>.<p>ಧಾರವಾಡ ತಾಲ್ಲೂಕಿನ ನೀರಲಕಟ್ಟಿ ಗ್ರಾಮದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಭಾನುವಾರ ಏರ್ಪಡಿಸಿದ್ದ ’ಪ್ರಥಮ ಪಾಠ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮನುಷ್ಯನು ಭೂಮಿ, ಧನ, ಆಸ್ತಿಯ ರೂಪದಲ್ಲಿ ಗಳಿಸಿದ ಸಂಪತ್ತು ಕ್ರಮೇಣ ವ್ಯಯವಾಗುತ್ತ ಹೋಗುತ್ತದೆ. ಆದರೆ ವಿದ್ಯೆ ಎಂಬುವ ಸಂಪತ್ತು ಬಳಸಿದಂತೆ ಹೆಚ್ಚಾಗುತ್ತಾ ಹೋಗುತ್ತದೆ. ವಿದ್ಯಾರ್ಥಿಗಳು ವಿದ್ಯಾ ಸಂಪತ್ತು ಗಳಿಸುವತ್ತ ಗಮನ ಹರಿಸಬೇಕು’ ಎಂದರು.</p>.<p>ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಹಾಗೂ ವಿದ್ಯಾಲಯದ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ ಅಧ್ಯಕ್ಷತೆ ವಹಿಸಿ ವಿದ್ಯಾಕೇಂದ್ರದ ಮುಂದಿನ ಗುರಿಗಳ ಕುರಿತು ಮಾತನಾಡಿದರು.</p>.<p>ಶಾಲಾ ವಿಭಾಗದ ಪ್ರಾಚಾರ್ಯೆ ಅನಿತಾ ರೈ ಹಾಗೂ ಕಾಲೇಜು ವಿಭಾಗದ ಪ್ರಾಚಾರ್ಯ ರವಿಪ್ರಕಾಶ ಎಸ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಜೋಶಿ, ಗುರುರಾಜ ಅಗಡಿ, ರಾಮಕೃಷ್ಣ.ಎಚ್. ಇದ್ದರು. ದೀಪಾ ಕುಲಕರ್ಣಿ ಸ್ವಾಗತಿಸಿದರು, ಗಿರಿಜಾ ಜಿ., ವಂದಿಸಿದರು, ಪ್ರೇಮಾ.ಎಸ್. ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-24-1250607956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಪ್ಪಿನಬೆಟಗೇರಿ: ’ವಿದ್ಯೆಯೊಂದಿಗೆ ಸಂಸ್ಕಾರ ಮತ್ತು ಮೌಲ್ಯವು ಬೆರೆತಾಗ ಮಾತ್ರ ಸುಸಂಸ್ಕೃತ ಸಮಾಜ ಕಟ್ಟಲು ಸಾಧ್ಯ’ ಎಂದು ಹರ್ಲಾಪುರದ ಅಭಿನವ ಕೊಟ್ಟೂರೇಶ್ವರ ಸ್ವಾಮೀಜಿ ಹೇಳಿದರು.</p>.<p>ಧಾರವಾಡ ತಾಲ್ಲೂಕಿನ ನೀರಲಕಟ್ಟಿ ಗ್ರಾಮದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಭಾನುವಾರ ಏರ್ಪಡಿಸಿದ್ದ ’ಪ್ರಥಮ ಪಾಠ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮನುಷ್ಯನು ಭೂಮಿ, ಧನ, ಆಸ್ತಿಯ ರೂಪದಲ್ಲಿ ಗಳಿಸಿದ ಸಂಪತ್ತು ಕ್ರಮೇಣ ವ್ಯಯವಾಗುತ್ತ ಹೋಗುತ್ತದೆ. ಆದರೆ ವಿದ್ಯೆ ಎಂಬುವ ಸಂಪತ್ತು ಬಳಸಿದಂತೆ ಹೆಚ್ಚಾಗುತ್ತಾ ಹೋಗುತ್ತದೆ. ವಿದ್ಯಾರ್ಥಿಗಳು ವಿದ್ಯಾ ಸಂಪತ್ತು ಗಳಿಸುವತ್ತ ಗಮನ ಹರಿಸಬೇಕು’ ಎಂದರು.</p>.<p>ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಹಾಗೂ ವಿದ್ಯಾಲಯದ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ ಅಧ್ಯಕ್ಷತೆ ವಹಿಸಿ ವಿದ್ಯಾಕೇಂದ್ರದ ಮುಂದಿನ ಗುರಿಗಳ ಕುರಿತು ಮಾತನಾಡಿದರು.</p>.<p>ಶಾಲಾ ವಿಭಾಗದ ಪ್ರಾಚಾರ್ಯೆ ಅನಿತಾ ರೈ ಹಾಗೂ ಕಾಲೇಜು ವಿಭಾಗದ ಪ್ರಾಚಾರ್ಯ ರವಿಪ್ರಕಾಶ ಎಸ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಜೋಶಿ, ಗುರುರಾಜ ಅಗಡಿ, ರಾಮಕೃಷ್ಣ.ಎಚ್. ಇದ್ದರು. ದೀಪಾ ಕುಲಕರ್ಣಿ ಸ್ವಾಗತಿಸಿದರು, ಗಿರಿಜಾ ಜಿ., ವಂದಿಸಿದರು, ಪ್ರೇಮಾ.ಎಸ್. ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-24-1250607956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>