<p>ಧಾರವಾಡ: ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ತೀರ್ಮಾನವನ್ನು ಖಂಡಿಸಿ ಎಐಡಿಎಸ್ಒ ಜಿಲ್ಲಾ ಘಟಕ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.</p>.<p>ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ‘ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರ ಕೈಬಿಡಿ’, ‘ಶಿಕ್ಷಣ ಉಳಿಯಲಿ’ ಘೋಷಣೆ ಕೂಗಿದರು. ಭಿತ್ತಿ ಫಲಕಗಳನ್ನು ಪ್ರದರ್ಶಿಸಿದರು.</p>.<p>‘ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳು, ಶಿಕ್ಷಕರ ನೇಮಕಾತಿ ಮಾಡಿಕೊಂಡು ಅಭಿವೃದ್ಧಿಪಡಿಸಬೇಕಾದ ಸರ್ಕಾರ ಕಡಿಮೆ ದಾಖಲಾತಿಯ ನೆಪವೊಡ್ಡಿ ಸರಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ. ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರವು ಶಿಕ್ಷಣವನ್ನು ಸಂಪೂರ್ಣ ವ್ಯಾಪಾರೀಕರಣ ಮಾಡಲು ಹೊರಟಿದೆ’ ಎಂದು ಪ್ರತಿಭಟನಾಕಾರರು ದೂರಿದರು.</p>.<p>‘ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಕಾಡಂಚಿನ ಗ್ರಾಮಗಳು, ದೂರದ ಹಳ್ಳಿಗಳ 25 ಕ್ಕಿಂತ ಕಡಿಮೆ ದಾಖಲಾತಿ ಇರುತ್ತದೆ. ಈ ಪ್ರದೇಶಗಳಲ್ಲಿ ಬಹುಪಾಲು ಕೃಷಿ ಕಾರ್ಮಿಕರು ಹಾಗೂ ಕೂಲಿಕಾರರ ಮಕ್ಕಳು ಈ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ. ಶಾಲೆಗಳನ್ನು ಮುಚ್ಚುವ ನಿಲುವು ಬಡವರು, ಕಾರ್ಮಿಕರ ವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ವಿರುದ್ಧ ಬಲಿಷ್ಠವಾದ ಹೋರಾಟವನ್ನು ಕಟ್ಟಬೇಕು ಎಂದು ಆಗ್ರಹಿಸಿದರು.</p>.<p>ಲಿಂಗರಾಜ ಅಂಗಡಿ, ಶಶಿಕಲಾ ಮೇಟಿ, ಸಿಂಧು ಕೌದಿ, ಶರಣಬಸವ ಗೋನವಾರ, ಭುವನಾ ಬಳ್ಳಾರಿ, ಗಂಗಾ ಕೊಕರೆ, ವೀರಭದ್ರಯ್ಯ ಚಿಕ್ಕಮಠ, ಸದಸ್ಯ ಯಲ್ಲಪ್ಪ ಸಂಗ್ರೇಸಿಕೊಪ್ಪ, ನಾಗಪ್ಪ ಏಣಗಿ, ಸಿದ್ದು ಚಿಪ್ಪಲಕಟ್ಟಿ ಪ್ರತಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-24-1946103635</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ತೀರ್ಮಾನವನ್ನು ಖಂಡಿಸಿ ಎಐಡಿಎಸ್ಒ ಜಿಲ್ಲಾ ಘಟಕ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.</p>.<p>ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ‘ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರ ಕೈಬಿಡಿ’, ‘ಶಿಕ್ಷಣ ಉಳಿಯಲಿ’ ಘೋಷಣೆ ಕೂಗಿದರು. ಭಿತ್ತಿ ಫಲಕಗಳನ್ನು ಪ್ರದರ್ಶಿಸಿದರು.</p>.<p>‘ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳು, ಶಿಕ್ಷಕರ ನೇಮಕಾತಿ ಮಾಡಿಕೊಂಡು ಅಭಿವೃದ್ಧಿಪಡಿಸಬೇಕಾದ ಸರ್ಕಾರ ಕಡಿಮೆ ದಾಖಲಾತಿಯ ನೆಪವೊಡ್ಡಿ ಸರಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ. ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರವು ಶಿಕ್ಷಣವನ್ನು ಸಂಪೂರ್ಣ ವ್ಯಾಪಾರೀಕರಣ ಮಾಡಲು ಹೊರಟಿದೆ’ ಎಂದು ಪ್ರತಿಭಟನಾಕಾರರು ದೂರಿದರು.</p>.<p>‘ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಕಾಡಂಚಿನ ಗ್ರಾಮಗಳು, ದೂರದ ಹಳ್ಳಿಗಳ 25 ಕ್ಕಿಂತ ಕಡಿಮೆ ದಾಖಲಾತಿ ಇರುತ್ತದೆ. ಈ ಪ್ರದೇಶಗಳಲ್ಲಿ ಬಹುಪಾಲು ಕೃಷಿ ಕಾರ್ಮಿಕರು ಹಾಗೂ ಕೂಲಿಕಾರರ ಮಕ್ಕಳು ಈ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ. ಶಾಲೆಗಳನ್ನು ಮುಚ್ಚುವ ನಿಲುವು ಬಡವರು, ಕಾರ್ಮಿಕರ ವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ವಿರುದ್ಧ ಬಲಿಷ್ಠವಾದ ಹೋರಾಟವನ್ನು ಕಟ್ಟಬೇಕು ಎಂದು ಆಗ್ರಹಿಸಿದರು.</p>.<p>ಲಿಂಗರಾಜ ಅಂಗಡಿ, ಶಶಿಕಲಾ ಮೇಟಿ, ಸಿಂಧು ಕೌದಿ, ಶರಣಬಸವ ಗೋನವಾರ, ಭುವನಾ ಬಳ್ಳಾರಿ, ಗಂಗಾ ಕೊಕರೆ, ವೀರಭದ್ರಯ್ಯ ಚಿಕ್ಕಮಠ, ಸದಸ್ಯ ಯಲ್ಲಪ್ಪ ಸಂಗ್ರೇಸಿಕೊಪ್ಪ, ನಾಗಪ್ಪ ಏಣಗಿ, ಸಿದ್ದು ಚಿಪ್ಪಲಕಟ್ಟಿ ಪ್ರತಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-24-1946103635</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>