<p>ದಾಂಡೇಲಿ: ‘ಶಿಕ್ಷಣ, ಶಿಕ್ಷೆಯಾಗಬಾರದು. ಅಂಕ ಗಳಿಕೆಗಿಂತ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಬೇಕು’ ಎಂದು ಧಾರವಾಡದ ಐಐಟಿ ಡೀನ್ ಹಾಗೂ ವಿಜ್ಞಾನಿ ಎಸ್.ಎಂ.ಶಿವಪ್ರಸಾದ ಹೇಳಿದರು.</p>.<p>ಅಂಬೇವಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.</p>.<p>‘ಯುವ ಜನರೇ ಹೆಚ್ಚಿರುವ ಭಾರತದಲ್ಲಿ ಯುವಶಕ್ತಿ ,ಸಾಮರ್ಥ್ಯ ಅಭಿವ್ಯಕ್ತಗೊಳ್ಳುತ್ತಿಲ್ಲ. ತನ್ನನ್ನು ತಾನು ತಿಳಿಯದೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಕೀಳರಿಮೆಗಳಿಂದ ಹೊರಬಂದು ತಮ್ಮ ಅಂತರಂಗದ ಸಾಮರ್ಥ್ಯ ಸಾಬೀತುಪಡಿಸಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಎಂ. ಡಿ.ಒಕ್ಕುಂದ ಮಾತನಾಡಿ, ‘ಪಠ್ಯೇತರ ಚಟುವಟಿಕೆಗಳು ಸಾಮಾಜಿಕ ಜವಾಬ್ದಾರಿ ಕಲಿಸಿಕೊಡುತ್ತವೆ’ ಎಂದು ತಿಳಿಸಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಯಾಸ್ಮಿನ ಕಿತ್ತೂರ ಬಹುಮಾನ ವಿತರಿಸಿದರು. ಉಪನ್ಯಾಸಕರಾದ ವಿನಯಾ ಜಿ.ನಾಯಕ, ಚಂದ್ರಶೇಖರ ಲಮಾಣಿ, ಬಸವರಾಜ ಹೂಲಿಕಟ್ಟಿ, ಮನೋಹರ ಉಡಚಂಚಿ, ಉಪನ್ಯಾಸಕ ಉಮೇಶಗೌಡ ಪಾಟೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-20-1957261120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾಂಡೇಲಿ: ‘ಶಿಕ್ಷಣ, ಶಿಕ್ಷೆಯಾಗಬಾರದು. ಅಂಕ ಗಳಿಕೆಗಿಂತ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಬೇಕು’ ಎಂದು ಧಾರವಾಡದ ಐಐಟಿ ಡೀನ್ ಹಾಗೂ ವಿಜ್ಞಾನಿ ಎಸ್.ಎಂ.ಶಿವಪ್ರಸಾದ ಹೇಳಿದರು.</p>.<p>ಅಂಬೇವಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.</p>.<p>‘ಯುವ ಜನರೇ ಹೆಚ್ಚಿರುವ ಭಾರತದಲ್ಲಿ ಯುವಶಕ್ತಿ ,ಸಾಮರ್ಥ್ಯ ಅಭಿವ್ಯಕ್ತಗೊಳ್ಳುತ್ತಿಲ್ಲ. ತನ್ನನ್ನು ತಾನು ತಿಳಿಯದೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಕೀಳರಿಮೆಗಳಿಂದ ಹೊರಬಂದು ತಮ್ಮ ಅಂತರಂಗದ ಸಾಮರ್ಥ್ಯ ಸಾಬೀತುಪಡಿಸಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಎಂ. ಡಿ.ಒಕ್ಕುಂದ ಮಾತನಾಡಿ, ‘ಪಠ್ಯೇತರ ಚಟುವಟಿಕೆಗಳು ಸಾಮಾಜಿಕ ಜವಾಬ್ದಾರಿ ಕಲಿಸಿಕೊಡುತ್ತವೆ’ ಎಂದು ತಿಳಿಸಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಯಾಸ್ಮಿನ ಕಿತ್ತೂರ ಬಹುಮಾನ ವಿತರಿಸಿದರು. ಉಪನ್ಯಾಸಕರಾದ ವಿನಯಾ ಜಿ.ನಾಯಕ, ಚಂದ್ರಶೇಖರ ಲಮಾಣಿ, ಬಸವರಾಜ ಹೂಲಿಕಟ್ಟಿ, ಮನೋಹರ ಉಡಚಂಚಿ, ಉಪನ್ಯಾಸಕ ಉಮೇಶಗೌಡ ಪಾಟೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-20-1957261120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>