<p>ಧಾರವಾಡ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆಸೋರಿಕೆಯಲ್ಲಿ ಭಾಗಿಯಾಗಿದವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆ (ಎಸ್ಐಒ) ಜಿಲ್ಲಾ ಘಟಕದವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>‘ಕೇಂದ್ರೀಕೃತ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸುವಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಪದೇ ಪದೆ ವಿಫಲವಾಗುತ್ತಿದೆ. 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಮೊದಲೇ ಸೋರಿಕೆ ಆಗಿರುವುದು ಎನ್ಟಿಎ ಮತ್ತು ಕೇಂದ್ರ ಸರ್ಕಾರದ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಸಂಪೂರ್ಣ ಕುಸಿತವನ್ನು ಎತ್ತಿ ತೋರಿಸುತ್ತದೆ’ ಎಂದು ದೂರಿದರು.</p>.<p>‘ಪರೀಕ್ಷಾ ವ್ಯವಸ್ಥೆಯ ವಿಕೇಂದ್ರಿಕರಣ ಮತ್ತು ಏಜೆನ್ಸಿಯ ರಚನೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು. ಕೇಂದ್ರ ಶಿಕ್ಷಣ ಸಚಿವರು ನೀಟ್ ಪರೀಕ್ಷೆಯ ವೈಫಲ್ಯದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಖಿಲಾಲ್ ಗುರಾಣಿ, ಮೊಹಮ್ಮದ್ ಇರ್ಫಾನ್, ಖಲೀಮ್ ಶೇಖ, ಸಾಯಿದ್ ಶೇಖ, ಎಂ.ಎಂ. ಹಾವೇರಿಪೇಟ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-24-1293548068</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆಸೋರಿಕೆಯಲ್ಲಿ ಭಾಗಿಯಾಗಿದವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆ (ಎಸ್ಐಒ) ಜಿಲ್ಲಾ ಘಟಕದವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>‘ಕೇಂದ್ರೀಕೃತ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸುವಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಪದೇ ಪದೆ ವಿಫಲವಾಗುತ್ತಿದೆ. 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಮೊದಲೇ ಸೋರಿಕೆ ಆಗಿರುವುದು ಎನ್ಟಿಎ ಮತ್ತು ಕೇಂದ್ರ ಸರ್ಕಾರದ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಸಂಪೂರ್ಣ ಕುಸಿತವನ್ನು ಎತ್ತಿ ತೋರಿಸುತ್ತದೆ’ ಎಂದು ದೂರಿದರು.</p>.<p>‘ಪರೀಕ್ಷಾ ವ್ಯವಸ್ಥೆಯ ವಿಕೇಂದ್ರಿಕರಣ ಮತ್ತು ಏಜೆನ್ಸಿಯ ರಚನೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು. ಕೇಂದ್ರ ಶಿಕ್ಷಣ ಸಚಿವರು ನೀಟ್ ಪರೀಕ್ಷೆಯ ವೈಫಲ್ಯದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಖಿಲಾಲ್ ಗುರಾಣಿ, ಮೊಹಮ್ಮದ್ ಇರ್ಫಾನ್, ಖಲೀಮ್ ಶೇಖ, ಸಾಯಿದ್ ಶೇಖ, ಎಂ.ಎಂ. ಹಾವೇರಿಪೇಟ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-24-1293548068</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>