<p>ಹುನಗುಂದ: ‘ವಿದ್ಯಾರ್ಥಿಗಳು, ಹಿರಿಯರ ತ್ಯಾಗ ಮತ್ತು ಬಲಿದಾನ ಸ್ಮರಿಸಬೇಕು. ಸಾಧನೆಗೆ ದೇಶಪ್ರೇಮವೇ ಮೂಲವಾಗಬೇಕು. ರಾಷ್ಟ್ರಪ್ರೇಮ ಕಲಿಸದ ಶಿಕ್ಷಣ ವ್ಯರ್ಥ’ ಎಂದು ಧಾರವಾಡದ ರಂಗಕರ್ಮಿ ಶಶಿಧರ ನರೇಂದ್ರ ಹೇಳಿದರು.</p>.<p>ನಗರದ ವಿ.ಎಂ.ಎಸ್.ಆರ್.ವಿ. ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಘಟಕಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕಾಲೇಜಿನಲ್ಲಿನ ಸೌಕರ್ಯ ಸದ್ಬಳಕೆ ಮಾಡಿಕೊಂಡು, ಸತತ ಪ್ರಯತ್ನದ ಮೂಲಕ ಗುರಿ ಸಾಧಿಸಬೇಕು’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಇಳಕಲ್ನ ಗುರುಮಹಾಂತ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ತೊಡಗಬೇಕು ಹಾಗೂ ದುಶ್ಚಟಗಳಿಂದ ದೂರವಿರಬೇಕು’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಮಹಾಂತೇಶ ಕಡಪಟ್ಟಿ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ಸಮಾಜಮುಖಿ ಆಗಬೇಕು. ಉತ್ತಮ ಪ್ರಜೆಯಾಗಿ ಈ ನಾಡಿಗೆ ಹೆಚ್ಚಿನ ಸೇವೆ ಸಲ್ಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಚಾರ್ಯ ಎಸ್.ಆರ್. ಗೋಲಗೊಂಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ವರ್ಷದ ಶ್ರೇಷ್ಠ ವಿದ್ಯಾರ್ಥಿ ಪ್ರಶಸ್ತಿಯನ್ನು ವಿಜ್ಞಾನ ವಿಭಾಗ ಸೃಷ್ಟಿ ಗಡೇದ, ವಾಣಿಜ್ಯ ವಿಭಾಗದ ಸುರೇಖಾ ಪೂಜಾರ ಹಾಗೂ ಕಲಾ ವಿಭಾಗದ ಬಸಪ್ಪ ಮೇಟಿ ಪಡೆದುಕೊಂಡರು.</p>.<p>ಕ್ರೀಡಾ ನಿರ್ದೇಶಕ ಎಸ್.ಬಿ. ಚಳಗೇರಿ ಸ್ವಾಗತಿಸಿದರು. ಪ್ರಾಧ್ಯಾಪಕ ಎಲ್.ಎನ್. ಕುಲಕರ್ಣಿ ಅವರು ಅತಿಥಿಗಳನ್ನು ಪರಿಚಯಿಸಿದರು. ಕಾಲೇಜು ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಭೀಮಾಶಂಕರ ಹಲಸಂಗಿ ವರದಿ ವಾಚಿಸಿದರು. ರಮಜಾನಬಿ ಪಿಂಜಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-19-1282990541</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುನಗುಂದ: ‘ವಿದ್ಯಾರ್ಥಿಗಳು, ಹಿರಿಯರ ತ್ಯಾಗ ಮತ್ತು ಬಲಿದಾನ ಸ್ಮರಿಸಬೇಕು. ಸಾಧನೆಗೆ ದೇಶಪ್ರೇಮವೇ ಮೂಲವಾಗಬೇಕು. ರಾಷ್ಟ್ರಪ್ರೇಮ ಕಲಿಸದ ಶಿಕ್ಷಣ ವ್ಯರ್ಥ’ ಎಂದು ಧಾರವಾಡದ ರಂಗಕರ್ಮಿ ಶಶಿಧರ ನರೇಂದ್ರ ಹೇಳಿದರು.</p>.<p>ನಗರದ ವಿ.ಎಂ.ಎಸ್.ಆರ್.ವಿ. ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಘಟಕಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕಾಲೇಜಿನಲ್ಲಿನ ಸೌಕರ್ಯ ಸದ್ಬಳಕೆ ಮಾಡಿಕೊಂಡು, ಸತತ ಪ್ರಯತ್ನದ ಮೂಲಕ ಗುರಿ ಸಾಧಿಸಬೇಕು’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಇಳಕಲ್ನ ಗುರುಮಹಾಂತ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ತೊಡಗಬೇಕು ಹಾಗೂ ದುಶ್ಚಟಗಳಿಂದ ದೂರವಿರಬೇಕು’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಮಹಾಂತೇಶ ಕಡಪಟ್ಟಿ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ಸಮಾಜಮುಖಿ ಆಗಬೇಕು. ಉತ್ತಮ ಪ್ರಜೆಯಾಗಿ ಈ ನಾಡಿಗೆ ಹೆಚ್ಚಿನ ಸೇವೆ ಸಲ್ಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಚಾರ್ಯ ಎಸ್.ಆರ್. ಗೋಲಗೊಂಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ವರ್ಷದ ಶ್ರೇಷ್ಠ ವಿದ್ಯಾರ್ಥಿ ಪ್ರಶಸ್ತಿಯನ್ನು ವಿಜ್ಞಾನ ವಿಭಾಗ ಸೃಷ್ಟಿ ಗಡೇದ, ವಾಣಿಜ್ಯ ವಿಭಾಗದ ಸುರೇಖಾ ಪೂಜಾರ ಹಾಗೂ ಕಲಾ ವಿಭಾಗದ ಬಸಪ್ಪ ಮೇಟಿ ಪಡೆದುಕೊಂಡರು.</p>.<p>ಕ್ರೀಡಾ ನಿರ್ದೇಶಕ ಎಸ್.ಬಿ. ಚಳಗೇರಿ ಸ್ವಾಗತಿಸಿದರು. ಪ್ರಾಧ್ಯಾಪಕ ಎಲ್.ಎನ್. ಕುಲಕರ್ಣಿ ಅವರು ಅತಿಥಿಗಳನ್ನು ಪರಿಚಯಿಸಿದರು. ಕಾಲೇಜು ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಭೀಮಾಶಂಕರ ಹಲಸಂಗಿ ವರದಿ ವಾಚಿಸಿದರು. ರಮಜಾನಬಿ ಪಿಂಜಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-19-1282990541</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>