<p>ಧಾರವಾಡ: ‘ಇತ್ತೀಚಿನ ವರ್ಷಗಳಲ್ಲಿ ನವೋದ್ಯಮಗಳ ಸಂಖ್ಯೆ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಇಲ್ಲಿನ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ನಡೆದ ಸೃಷ್ಟಿ ನಾವೀನ್ಯತಾ ವಿನಿಮಯ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಜಗತ್ತಿನಲ್ಲಿಯೇ ಆರ್ಥಿಕವಾಗಿ ಅತಿ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಇಲ್ಲಿ ಯುವಜನರು ಹೆಚ್ಚಿ ಪ್ರಮಾಣದಲ್ಲಿದ್ದಾರೆ. ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದರು.</p>.<p>ಶಾಸಕ ಅರವಿಂದ ಬೆಲ್ಲದ ಮಾತನಾಡಿ, ‘ನವ ಕೌಶಲಗಳ ಕಲಿಕೆ ಮತ್ತು ವಿನಿಮಯಕ್ಕೆ ಸೃಷ್ಟಿ ಕಾರ್ಯಕ್ರಮವು ವೇದಿಕೆಯಾಗಿದೆ’ ಎಂದು ಹೇಳಿದರು.</p>.<p>ಇಸ್ರೊ ವಿಜ್ಞಾನಿ ಬಿ.ಎಚ್.ಎಂ. ದಾರುಕೇಶ ಮಾತನಾಡಿ, ‘ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಾಧನೆ ಮೆರೆಯುವ ಮೂಲಕ ತಮ್ಮದೇ ಆದ ಕೊಡುಗೆ ನೀಡಬೇಕು’ ಎಂದರು.</p>.<p>ಬೆಳಗಾವಿಯ ವಿಟಿಯು ಕುಲಪತಿ ವಿದ್ಯಾಶಂಕರ್, ಎಬಿವಿಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಷ್ ಚೌಹಾಣ, ಎಸ್ಡಿಎಂಇ ಸೊಸೈಟಿಯ ಕಾರ್ಯದರ್ಶಿ ಜೀವಂಧರ ಕುಮಾರ, ಪ್ರಾಚಾರ್ಯ ರಮೇಶ ಎಲ್. ಚಕ್ರಸಾಲಿ, ಎಬಿವಿಪಿಯ ಗೋಪಿ ರಂಗಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-24-439221818</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಇತ್ತೀಚಿನ ವರ್ಷಗಳಲ್ಲಿ ನವೋದ್ಯಮಗಳ ಸಂಖ್ಯೆ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಇಲ್ಲಿನ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ನಡೆದ ಸೃಷ್ಟಿ ನಾವೀನ್ಯತಾ ವಿನಿಮಯ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಜಗತ್ತಿನಲ್ಲಿಯೇ ಆರ್ಥಿಕವಾಗಿ ಅತಿ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಇಲ್ಲಿ ಯುವಜನರು ಹೆಚ್ಚಿ ಪ್ರಮಾಣದಲ್ಲಿದ್ದಾರೆ. ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದರು.</p>.<p>ಶಾಸಕ ಅರವಿಂದ ಬೆಲ್ಲದ ಮಾತನಾಡಿ, ‘ನವ ಕೌಶಲಗಳ ಕಲಿಕೆ ಮತ್ತು ವಿನಿಮಯಕ್ಕೆ ಸೃಷ್ಟಿ ಕಾರ್ಯಕ್ರಮವು ವೇದಿಕೆಯಾಗಿದೆ’ ಎಂದು ಹೇಳಿದರು.</p>.<p>ಇಸ್ರೊ ವಿಜ್ಞಾನಿ ಬಿ.ಎಚ್.ಎಂ. ದಾರುಕೇಶ ಮಾತನಾಡಿ, ‘ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಾಧನೆ ಮೆರೆಯುವ ಮೂಲಕ ತಮ್ಮದೇ ಆದ ಕೊಡುಗೆ ನೀಡಬೇಕು’ ಎಂದರು.</p>.<p>ಬೆಳಗಾವಿಯ ವಿಟಿಯು ಕುಲಪತಿ ವಿದ್ಯಾಶಂಕರ್, ಎಬಿವಿಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಷ್ ಚೌಹಾಣ, ಎಸ್ಡಿಎಂಇ ಸೊಸೈಟಿಯ ಕಾರ್ಯದರ್ಶಿ ಜೀವಂಧರ ಕುಮಾರ, ಪ್ರಾಚಾರ್ಯ ರಮೇಶ ಎಲ್. ಚಕ್ರಸಾಲಿ, ಎಬಿವಿಪಿಯ ಗೋಪಿ ರಂಗಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-24-439221818</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>