<p>ಧಾರವಾಡ: ‘ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಅದನ್ನು ತಲುಪಲು ಶ್ರಮಿಸಬೇಕು. ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಒಳ್ಳೆಯ ಪ್ರಜೆಯಾಗಿ ಬದುಕಬೇಕು’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎ.ಎಂ. ಖಾನ್ ಹೇಳಿದರು.</p>.<p>ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಜಿಮಖಾನಾ ವಿಭಾಗದಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಇತರೆ ಕಾರ್ಯಚಟುವಟಿಕೆಗಳ ಸಮಾರೋಪಸಮಾರಂಭ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತಂತ್ರಜ್ಞಾನವನ್ನುಸಾಧನವಾಗಿ ಬಳಸಿಕೊಳ್ಳಬೇಕು. ದೂರದೃಷ್ಟಿ ಇಟ್ಟುಕೊಂಡು ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಕಲಿಯುವ ಶಿಕ್ಷಣ ಸಂಸ್ಥೆ ಬಗ್ಗೆ ಅಭಿಮಾನ ಹೊಂದಿರಬೇಕು’ ಎಂದು ತಿಳಿಸಿದರು.</p>.<p>ರಂಗ ನಿರ್ದೇಶಕಿ ವಿಶ್ವೇಶ್ವರಿ ಹಿರೇಮಠ ಮಾತನಾಡಿ, ‘ವಿದ್ಯಾರ್ಥಿಗಳು ದೇಶಿಯ ಸಂಸ್ಕೃತಿ, ಜಾನಪದ ಕಲೆ, ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಬೇಕು. ಪ್ರಸ್ತುತ ತಂತ್ರಜ್ಞಾನದಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಕಡಿಮೆಯಾಗುತ್ತಿದೆ’ ಎಂದರು.</p>.<p>ಸಾಂಸ್ಕೃತಿಕ ಚಟುವಟಿಕೆಗಳ ವಿಭಾಗದ ಅಧ್ಯಕ್ಷ ಪ್ರೊ.ಬಿ.ಎಸ್.ಭಜಂತ್ರಿ ಮಾತನಾಡಿದರು. ರಾಷ್ಟ್ರಮಟ್ಟದಲ್ಲಿ ಎನ್.ಎಸ್.ಎಸ್, ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಸಂಜಯಕುಮಾರ ಬಿರಾದಾರ, ಮಹಿಮಾ ಮೇಟಿ ಹಾಘೂ ಪಠ್ಯ ಪಠ್ಯೇತರ ಚಟುವಟಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಪ್ರಾಚಾರ್ಯ ಪ್ರೊ. ಐ.ಸಿ. ಮುಳಗುಂದ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಕಾಂಚನ್ ಗಾಂವಕರ, ಮುಕುಂದ ಲಮಾಣಿ, ರಜನಿ., ಸುರೇಶ ಹುಲ್ಲನ್ನವರ, ಜಾಕೀರ, ಎ.ಸಿ.ಕುರಹಟ್ಟಿ, ಎಸ್.ಜಿ. ಜಾಧವ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-24-1707498662</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಅದನ್ನು ತಲುಪಲು ಶ್ರಮಿಸಬೇಕು. ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಒಳ್ಳೆಯ ಪ್ರಜೆಯಾಗಿ ಬದುಕಬೇಕು’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎ.ಎಂ. ಖಾನ್ ಹೇಳಿದರು.</p>.<p>ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಜಿಮಖಾನಾ ವಿಭಾಗದಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಇತರೆ ಕಾರ್ಯಚಟುವಟಿಕೆಗಳ ಸಮಾರೋಪಸಮಾರಂಭ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತಂತ್ರಜ್ಞಾನವನ್ನುಸಾಧನವಾಗಿ ಬಳಸಿಕೊಳ್ಳಬೇಕು. ದೂರದೃಷ್ಟಿ ಇಟ್ಟುಕೊಂಡು ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಕಲಿಯುವ ಶಿಕ್ಷಣ ಸಂಸ್ಥೆ ಬಗ್ಗೆ ಅಭಿಮಾನ ಹೊಂದಿರಬೇಕು’ ಎಂದು ತಿಳಿಸಿದರು.</p>.<p>ರಂಗ ನಿರ್ದೇಶಕಿ ವಿಶ್ವೇಶ್ವರಿ ಹಿರೇಮಠ ಮಾತನಾಡಿ, ‘ವಿದ್ಯಾರ್ಥಿಗಳು ದೇಶಿಯ ಸಂಸ್ಕೃತಿ, ಜಾನಪದ ಕಲೆ, ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಬೇಕು. ಪ್ರಸ್ತುತ ತಂತ್ರಜ್ಞಾನದಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಕಡಿಮೆಯಾಗುತ್ತಿದೆ’ ಎಂದರು.</p>.<p>ಸಾಂಸ್ಕೃತಿಕ ಚಟುವಟಿಕೆಗಳ ವಿಭಾಗದ ಅಧ್ಯಕ್ಷ ಪ್ರೊ.ಬಿ.ಎಸ್.ಭಜಂತ್ರಿ ಮಾತನಾಡಿದರು. ರಾಷ್ಟ್ರಮಟ್ಟದಲ್ಲಿ ಎನ್.ಎಸ್.ಎಸ್, ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಸಂಜಯಕುಮಾರ ಬಿರಾದಾರ, ಮಹಿಮಾ ಮೇಟಿ ಹಾಘೂ ಪಠ್ಯ ಪಠ್ಯೇತರ ಚಟುವಟಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಪ್ರಾಚಾರ್ಯ ಪ್ರೊ. ಐ.ಸಿ. ಮುಳಗುಂದ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಕಾಂಚನ್ ಗಾಂವಕರ, ಮುಕುಂದ ಲಮಾಣಿ, ರಜನಿ., ಸುರೇಶ ಹುಲ್ಲನ್ನವರ, ಜಾಕೀರ, ಎ.ಸಿ.ಕುರಹಟ್ಟಿ, ಎಸ್.ಜಿ. ಜಾಧವ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-24-1707498662</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>