<p>ಧಾರವಾಡ: ‘ಶಿಕ್ಷಕರು ಕೇವಲ ವಿದ್ಯಾರ್ಥಿಗಳಿಗೆ ಮಾತ್ರ ಶಿಕ್ಷಣ ನೀಡುತ್ತಿಲ್ಲ, ಅವರ ಸಾಧನೆಗೆ ದಾರಿದೀಪವಾಗುತ್ತ ಉತ್ತಮ ಸಮಾಜ ರೂಪಿಸುತ್ತಿದ್ದಾರೆ’ ಎಂದು ಜೆಎಸ್ಎಸ್ ಕಾರ್ಯದರ್ಶಿ ಅಜಿತ ಪ್ರಸಾದ ಹೇಳಿದರು.</p>.<p>ಬೆಂಗಳೂರಿನ ವಿಸ್ತಾರಾ ಗ್ಲೋಬಲ್ ಟೀಚರ್ಸ್ ಟ್ರೇನಿಂಗ್ ಅಕಾಡೆಮಿ ವತಿಯಿಂದ ವಿದ್ಯಾಗಿರಿಯ ಜೆಎಸ್ಎಸ್ ಸಂಸ್ಥೆಯು ಶಾಲೆಯ ಶಿಕ್ಷಕರಿಗೆ ಈಚೆಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಪ್ರಾಮಾಣಿಕತೆ ಮತ್ತು ದೇಶಪ್ರೇಮ ಬೆಳೆಸುತ್ತಾರೆ. ಅತಿ ವೇಗವಾಗಿ ಬೆಳೆಯುತ್ತಿರುವ ಈ ಯುಗದಲ್ಲಿ ಕಾಲಕಾಲಕ್ಕೆ ಶಿಕ್ಷಕರಿಗೆ ತರಬೇತಿ ಅವರನ್ನು ಇನ್ನೂ ಸಕ್ಷಮರನ್ನಾಗಿಸಬೇಕಾದುದು ಶಿಕ್ಷಣ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ’ ಎಂದರು.</p>.<p>‘ತರಬೇತಿಯಲ್ಲಿ ಶಿಕ್ಷಕರು ಹೊಸ ಬೋಧನಾ ವಿಧಾನಗಳನ್ನು ಕಲಿತು ವಿದ್ಯಾರ್ಥಿಗಳಿಗೆ ಸುಲಭವಾಗುವಂತೆ ಪಾಠ ಮಾಡಬೇಕು. ಇಂದಿನ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು. ಡಿಜಿಟಲ್ ಯುಗವಾದ ಕಾರಣ ಸ್ಮಾರ್ಟ್ ಕ್ಲಾಸ್, ಪ್ರೊಜೆಕ್ಟರ್, ಆನ್ಲೈನ್ ಪಾಠಗಳ ಬಳಕೆ ಮುಖ್ಯ’ ಎಂದರು.</p>.<p>ವಿಸ್ತಾರಾ ಗ್ಲೋಬಲ್ ಟೀಚರ್ಸ್ ಟ್ರೇನಿಂಗ್ ಅಕಾಡೆಮಿ ಮುಖ್ಯಸ್ಥ ಮಹೇಶ ಮಾಶಾಳ ಮಾತನಾಡಿ. ‘ಎಲ್ಲ ಶಿಕ್ಷಕರಿಗೂ ಸಮಾಜಕ್ಕೆ ಒಳ್ಳೆಯದನ್ನು ನೀಡುವ ಸಾಮರ್ಥ್ಯವಿದೆ. ಆದರೆ, ಮಾರ್ಗದರ್ಶನ, ಮಾಹಿತಿ ಮತ್ತು ಸರಿಯಾದ ಪಠ್ಯಕ್ರಮದ ಕೊರತೆಯಿಂದ ಶಿಕ್ಷಕರ ಸಾಧನೆಯಲ್ಲಿ ಕೊರೆತೆ ಕಾಣುತ್ತಿದೆ. ಆದ್ದರಿಂದ ಈ ಕಾರ್ಯಾಗಾರದ ಸದುಪಯೋಗ ಪಡೆಯಬೇಕು’ ಎಂದು ತಿಳಿಸಿದರು.</p>.<p>ಜೆಎಸ್ಎಸ್ ಆಡಳಿತಾಧಿಕಾರಿ ಅರಿಹಂತ ಪ್ರಸಾದ ಮಾತನಾಡಿ, ‘ಮಕ್ಕಳು ಪಾಲಕರ ಭವಿಷ್ಯದ ಕನಸುಗಳು, ಆ ಕನಸುಗಳನ್ನು ನೈತಿಕ ನೆಲೆಗಟ್ಟಿನಲ್ಲಿ ಸರಿಯಾದ ಮಾರ್ಗದರ್ಶನದಿಂದ ಸಾಕಾರಗೊಳಿಸಬೇಕಾದುದು ಶಿಕ್ಷಕರ ಕರ್ತವ್ಯ’ ಎಂದು ಹೇಳಿದರು.</p>.<p>ಜೆಎಸ್ಎಸ್ ಐಟಿಐ ಕಾಲೆಜಿನ ಪ್ರಾಚಾರ್ಯ ಮಹಾವೀರ ಉಪಾದ್ಯೆ, ವಾಣಿಶ್ರೀ, ಜೆಎಸ್ಎಸ್ ಶಾಲೆಯ ಎಲ್ಲ ಮುಖ್ಯಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-1514650172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಶಿಕ್ಷಕರು ಕೇವಲ ವಿದ್ಯಾರ್ಥಿಗಳಿಗೆ ಮಾತ್ರ ಶಿಕ್ಷಣ ನೀಡುತ್ತಿಲ್ಲ, ಅವರ ಸಾಧನೆಗೆ ದಾರಿದೀಪವಾಗುತ್ತ ಉತ್ತಮ ಸಮಾಜ ರೂಪಿಸುತ್ತಿದ್ದಾರೆ’ ಎಂದು ಜೆಎಸ್ಎಸ್ ಕಾರ್ಯದರ್ಶಿ ಅಜಿತ ಪ್ರಸಾದ ಹೇಳಿದರು.</p>.<p>ಬೆಂಗಳೂರಿನ ವಿಸ್ತಾರಾ ಗ್ಲೋಬಲ್ ಟೀಚರ್ಸ್ ಟ್ರೇನಿಂಗ್ ಅಕಾಡೆಮಿ ವತಿಯಿಂದ ವಿದ್ಯಾಗಿರಿಯ ಜೆಎಸ್ಎಸ್ ಸಂಸ್ಥೆಯು ಶಾಲೆಯ ಶಿಕ್ಷಕರಿಗೆ ಈಚೆಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಪ್ರಾಮಾಣಿಕತೆ ಮತ್ತು ದೇಶಪ್ರೇಮ ಬೆಳೆಸುತ್ತಾರೆ. ಅತಿ ವೇಗವಾಗಿ ಬೆಳೆಯುತ್ತಿರುವ ಈ ಯುಗದಲ್ಲಿ ಕಾಲಕಾಲಕ್ಕೆ ಶಿಕ್ಷಕರಿಗೆ ತರಬೇತಿ ಅವರನ್ನು ಇನ್ನೂ ಸಕ್ಷಮರನ್ನಾಗಿಸಬೇಕಾದುದು ಶಿಕ್ಷಣ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ’ ಎಂದರು.</p>.<p>‘ತರಬೇತಿಯಲ್ಲಿ ಶಿಕ್ಷಕರು ಹೊಸ ಬೋಧನಾ ವಿಧಾನಗಳನ್ನು ಕಲಿತು ವಿದ್ಯಾರ್ಥಿಗಳಿಗೆ ಸುಲಭವಾಗುವಂತೆ ಪಾಠ ಮಾಡಬೇಕು. ಇಂದಿನ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು. ಡಿಜಿಟಲ್ ಯುಗವಾದ ಕಾರಣ ಸ್ಮಾರ್ಟ್ ಕ್ಲಾಸ್, ಪ್ರೊಜೆಕ್ಟರ್, ಆನ್ಲೈನ್ ಪಾಠಗಳ ಬಳಕೆ ಮುಖ್ಯ’ ಎಂದರು.</p>.<p>ವಿಸ್ತಾರಾ ಗ್ಲೋಬಲ್ ಟೀಚರ್ಸ್ ಟ್ರೇನಿಂಗ್ ಅಕಾಡೆಮಿ ಮುಖ್ಯಸ್ಥ ಮಹೇಶ ಮಾಶಾಳ ಮಾತನಾಡಿ. ‘ಎಲ್ಲ ಶಿಕ್ಷಕರಿಗೂ ಸಮಾಜಕ್ಕೆ ಒಳ್ಳೆಯದನ್ನು ನೀಡುವ ಸಾಮರ್ಥ್ಯವಿದೆ. ಆದರೆ, ಮಾರ್ಗದರ್ಶನ, ಮಾಹಿತಿ ಮತ್ತು ಸರಿಯಾದ ಪಠ್ಯಕ್ರಮದ ಕೊರತೆಯಿಂದ ಶಿಕ್ಷಕರ ಸಾಧನೆಯಲ್ಲಿ ಕೊರೆತೆ ಕಾಣುತ್ತಿದೆ. ಆದ್ದರಿಂದ ಈ ಕಾರ್ಯಾಗಾರದ ಸದುಪಯೋಗ ಪಡೆಯಬೇಕು’ ಎಂದು ತಿಳಿಸಿದರು.</p>.<p>ಜೆಎಸ್ಎಸ್ ಆಡಳಿತಾಧಿಕಾರಿ ಅರಿಹಂತ ಪ್ರಸಾದ ಮಾತನಾಡಿ, ‘ಮಕ್ಕಳು ಪಾಲಕರ ಭವಿಷ್ಯದ ಕನಸುಗಳು, ಆ ಕನಸುಗಳನ್ನು ನೈತಿಕ ನೆಲೆಗಟ್ಟಿನಲ್ಲಿ ಸರಿಯಾದ ಮಾರ್ಗದರ್ಶನದಿಂದ ಸಾಕಾರಗೊಳಿಸಬೇಕಾದುದು ಶಿಕ್ಷಕರ ಕರ್ತವ್ಯ’ ಎಂದು ಹೇಳಿದರು.</p>.<p>ಜೆಎಸ್ಎಸ್ ಐಟಿಐ ಕಾಲೆಜಿನ ಪ್ರಾಚಾರ್ಯ ಮಹಾವೀರ ಉಪಾದ್ಯೆ, ವಾಣಿಶ್ರೀ, ಜೆಎಸ್ಎಸ್ ಶಾಲೆಯ ಎಲ್ಲ ಮುಖ್ಯಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-1514650172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>