<p>ಜೊಯಿಡಾ: ‘ಐತಿಹಾಸಿಕ ಸ್ಮಾರಕಗಳು, ಪಾರಂಪರಿಕ ತಾಣಗಳ ಸಂರಕ್ಷಣೆ ಜೊತೆಗೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಧಾರವಾಡ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ. ಖಾನ್ ಹೇಳಿದರು.</p>.<p>ತಾಲ್ಲೂಕಿನ ಉಳವಿಯಲ್ಲಿ ಹಮ್ಮಿಕೊಂಡಿರುವ ಧಾರವಾಡ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಎನ್ಎಸ್ಎಸ್ ಕಾರ್ಯಕ್ರಮದ ಸಂಯೋಜನಾಧಿಕಾರಿ ಎಂ.ಬಿ. ದಳಪತಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಮೇ 21ರವರೆಗೆ ನಡೆಯುವ ಶಿಬಿರದಲ್ಲಿ ಕಾರವಾರ, ಗದಗ, ಧಾರವಾಡ ಜಿಲ್ಲೆಯ ವಿವಿಧ ಕಾಲೇಜುಗಳಿಂದ 200 ಸ್ವಯಂ ಸೇವಕರು, 10 ಕಾರ್ಯಕ್ರಮಾಧಿಕಾರಿಗಳು ಪಾಲ್ಗೊಂಡಿದ್ದಾರೆ’ ಎಂದರು.</p>.<p>‘ಪ್ಲಾಸ್ಟಿಕ್ ಮುಕ್ತ ಉಳವಿ, ಸ್ಮಾರಕಗಳ ಸಂರಕ್ಷಣೆ, ಜನರಲ್ಲಿ ಸ್ವಚ್ಛತೆ ಅರಿವು ಮೂಡಿಸುವುದು, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಅರಿವು ಮೂಡಿಸುವುದು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವುದು ಹಾಗೂ ಭಾವೈಕ್ಯ ಮೂಡಿಸುವುದು ಶಿಬಿರದ ಉದ್ದೇಶವಾಗಿದೆ’ ಎಂದು ತಿಳಿಸಿದರು.</p>.<p>ದೇವಸ್ಥಾನದ ಪ್ರಧಾನ ಅರ್ಚಕ ಶಂಕ್ರಯ್ಯ ಕಲ್ಮಠ ಶಾಸ್ತ್ರಿ, ಉಳವಿ ಚನ್ನಬಸವೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಸಂಜಯ್ ಕಿತ್ತೂರು, ಗೋಪಾಲಕೃಷ್ಣ ಶಿವಪೂರ ಮಾತನಾಡಿದರು.</p>.<p>ಉಳವಿ ಸೇವಾ ಸಹಕಾರ ಸಂಘದ ಕಾರ್ಯದರ್ಶಿ ಅಸ್ಲಂ ಮುಗದ, ಜೊಯಿಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಅಂಜಲಿ ರಾಣೆ, ಶಿಬಿರಾಧಿಕಾರಿ ಮಹಮ್ಮದ್ ವಾಯೀಜ್, ಶಿವಯೋಗಿ ಹಾವೇರಿ ಇದ್ದರು. ಕಸ್ತೂರಿ ದಳವಾಯಿ ನಿರೂಪಿಸಿದರು. ನೇತ್ರಾವತಿ ಗಬ್ಬುರು ಸ್ವಾಗತಿಸಿದರು. ಪುಂಡಲೀಕ ಮಾದರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-20-254460300</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೊಯಿಡಾ: ‘ಐತಿಹಾಸಿಕ ಸ್ಮಾರಕಗಳು, ಪಾರಂಪರಿಕ ತಾಣಗಳ ಸಂರಕ್ಷಣೆ ಜೊತೆಗೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಧಾರವಾಡ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ. ಖಾನ್ ಹೇಳಿದರು.</p>.<p>ತಾಲ್ಲೂಕಿನ ಉಳವಿಯಲ್ಲಿ ಹಮ್ಮಿಕೊಂಡಿರುವ ಧಾರವಾಡ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಎನ್ಎಸ್ಎಸ್ ಕಾರ್ಯಕ್ರಮದ ಸಂಯೋಜನಾಧಿಕಾರಿ ಎಂ.ಬಿ. ದಳಪತಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಮೇ 21ರವರೆಗೆ ನಡೆಯುವ ಶಿಬಿರದಲ್ಲಿ ಕಾರವಾರ, ಗದಗ, ಧಾರವಾಡ ಜಿಲ್ಲೆಯ ವಿವಿಧ ಕಾಲೇಜುಗಳಿಂದ 200 ಸ್ವಯಂ ಸೇವಕರು, 10 ಕಾರ್ಯಕ್ರಮಾಧಿಕಾರಿಗಳು ಪಾಲ್ಗೊಂಡಿದ್ದಾರೆ’ ಎಂದರು.</p>.<p>‘ಪ್ಲಾಸ್ಟಿಕ್ ಮುಕ್ತ ಉಳವಿ, ಸ್ಮಾರಕಗಳ ಸಂರಕ್ಷಣೆ, ಜನರಲ್ಲಿ ಸ್ವಚ್ಛತೆ ಅರಿವು ಮೂಡಿಸುವುದು, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಅರಿವು ಮೂಡಿಸುವುದು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವುದು ಹಾಗೂ ಭಾವೈಕ್ಯ ಮೂಡಿಸುವುದು ಶಿಬಿರದ ಉದ್ದೇಶವಾಗಿದೆ’ ಎಂದು ತಿಳಿಸಿದರು.</p>.<p>ದೇವಸ್ಥಾನದ ಪ್ರಧಾನ ಅರ್ಚಕ ಶಂಕ್ರಯ್ಯ ಕಲ್ಮಠ ಶಾಸ್ತ್ರಿ, ಉಳವಿ ಚನ್ನಬಸವೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಸಂಜಯ್ ಕಿತ್ತೂರು, ಗೋಪಾಲಕೃಷ್ಣ ಶಿವಪೂರ ಮಾತನಾಡಿದರು.</p>.<p>ಉಳವಿ ಸೇವಾ ಸಹಕಾರ ಸಂಘದ ಕಾರ್ಯದರ್ಶಿ ಅಸ್ಲಂ ಮುಗದ, ಜೊಯಿಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಅಂಜಲಿ ರಾಣೆ, ಶಿಬಿರಾಧಿಕಾರಿ ಮಹಮ್ಮದ್ ವಾಯೀಜ್, ಶಿವಯೋಗಿ ಹಾವೇರಿ ಇದ್ದರು. ಕಸ್ತೂರಿ ದಳವಾಯಿ ನಿರೂಪಿಸಿದರು. ನೇತ್ರಾವತಿ ಗಬ್ಬುರು ಸ್ವಾಗತಿಸಿದರು. ಪುಂಡಲೀಕ ಮಾದರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-20-254460300</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>