<p>ಧಾರವಾಡ: ‘ಎಲ್ಲ ರಾಷ್ಟ್ರಗಳು ಪರಸ್ಪರ ಅವಲಂಬಿತವಾಗಿವೆ. ಎಲ್ಲರೂ ವಿಶ್ವಮಾನವ ಪ್ರಜ್ಞೆ ಬೆಳೆಸಿಕೊಳ್ಳುವುದು ಅವಶ್ಯ’ ಎಂದು ಹೋರಾಟಗಾರ ಸಿದ್ದನಗೌಡ ಪಾಟೀಲ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ದಧಕ ಸಂಘದ ವತಿಯಿಂದ ಗುರುಲಿಂಗ ಕಾಪಸೆ ದತ್ತಿಯಡಿ ನಡೆದ ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲೋ ಯುದ್ಧ ನಡೆದರೆ ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದುಕೊಳ್ಳಬಾರದು. ಯುದ್ಧ ಎಲ್ಲ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ, ಅದರಿಂದ ತೊಂದರೆಗಳಾಗುತ್ತವೆ ಎಂಬುದನ್ನು ತಿಳಿದುಕೊಳ್ಳಬೇಕು’ ಎಂದರು.</p>.<p>‘ಸಾಹಿತಿ ವೀಣಾ ಶಾಂತೇಶ್ವರ ಅವರು ಸ್ತ್ರೀ ಶೋಷಣೆ ವಿರೋಧಿ ಬರಹಗಾರ್ತಿ. ಅವರದು ಕಾಲದ ಮೌಲ್ಯಗಳನ್ನು ಮೀರಿದ ದಾರಿ. ಸಾಂಪ್ರದಾಯಿಕ ಮಿತಿಗಳನ್ನು ಮೀರುವ ಪ್ರಯತ್ನ ಅವರಿಗೆ ಹುಟ್ಟಿನಿಂದಲೇ ಬಂದಿದೆ. ಸ್ತ್ರೀವಾದ ಅವರ ಅಲೋಚನೆಯಲ್ಲೇ ಮಿಳಿತವಾಗಿದೆ’ ಎಂದು ಹೇಳಿದರು.</p>.<p>‘ವೀಣಾ ಅವರು ಸಾಮಾಜಿಕ ನೋವುಗಳನ್ನು ಕೃತಿಗಳಲ್ಲಿ ಬಿಂಬಿಸಿದ್ದಾರೆ. ಅವರಲ್ಲಿ ಪ್ರತಿರೋಧದ ಮನೋಭಾವ ಇತ್ತು. ಸ್ತ್ರೀಯನ್ನು ಮಾನವತಾವಾದದ ದೃಷ್ಟಿಯಿಂದ ನೋಡಬೇಕು. ಸ್ತ್ರೀ ಪ್ರಜ್ಞೆ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಪ್ರಕಾಶಕ ಚನ್ನಬಸವಣ್ಣ ಅವರು ಅಕ್ಷರ ದಾಸೋಹಿ. ಅವರು ಸಾಹಿತ್ಯ ಲೋಕದಲ್ಲಿ ಪ್ರತಿಭೆಗಳನ್ನು ಪರಿಚಯಿಸಿ, ಬೆಳೆಸಿದರು. ಪುಸ್ತಕ ಸಂಸ್ಕೃತಿ ಬೆಳವಣಿಗೆಗೆ ಹೊಸ ಮಾದರಿ ನೀಡಿದರು ಎಂದು ಹೇಳಿದರು.</p>.<p>‘ಚನ್ನಬಸವಣ್ಣ ಅವರು ಲೋಹಿಯಾವಾದದಿಂದ ಪ್ರಭಾವಿರಾದವರು. 1990ರಲ್ಲಿ ಪ್ರಕಾಶನ ಸಂಸ್ಥೆ ಆರಂಭಿಸಿದರು. ಪುಸ್ತಕ ಪ್ರಕಟಣೆಯು ಉದ್ಯಮವಲ್ಲ, ಅದೊಂದು ಸಂಸ್ಕೃತಿ’ ಎಂದು ಸಾರಿದವರು. ಅವರು ಬಂಡಾಯ ಸಾಹಿತ್ಯ ಚಳವಳಿಯ ಭಾಗವಾಗಿದ್ದರು’ ಎಂದರು.</p>.<p>ಬಸವರಾಜ ಸಾದರ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ವರಿ ಹುಲಮನಿ ಅವರಿಗೆ ಗುರುಲಿಂಗ ಕಾಪಸೆ ವಿದ್ಯಾರ್ಥಿ ಬಹುಮಾನ ನೀಡಲಾಯಿತು.</p>.<p>ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ವಿಮೋಚನಾ ಸಂಸ್ಥೆ ಅಧ್ಯಕ್ಷ ಬಿ.ಎಲ್.ಪಾಟೀಲ, ಪ್ರೊ.ವೀರಣ್ಣ ರಾಜೂರ, ಶಂಕರ ಹಲಗತ್ತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-24-839448174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಎಲ್ಲ ರಾಷ್ಟ್ರಗಳು ಪರಸ್ಪರ ಅವಲಂಬಿತವಾಗಿವೆ. ಎಲ್ಲರೂ ವಿಶ್ವಮಾನವ ಪ್ರಜ್ಞೆ ಬೆಳೆಸಿಕೊಳ್ಳುವುದು ಅವಶ್ಯ’ ಎಂದು ಹೋರಾಟಗಾರ ಸಿದ್ದನಗೌಡ ಪಾಟೀಲ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ದಧಕ ಸಂಘದ ವತಿಯಿಂದ ಗುರುಲಿಂಗ ಕಾಪಸೆ ದತ್ತಿಯಡಿ ನಡೆದ ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲೋ ಯುದ್ಧ ನಡೆದರೆ ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದುಕೊಳ್ಳಬಾರದು. ಯುದ್ಧ ಎಲ್ಲ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ, ಅದರಿಂದ ತೊಂದರೆಗಳಾಗುತ್ತವೆ ಎಂಬುದನ್ನು ತಿಳಿದುಕೊಳ್ಳಬೇಕು’ ಎಂದರು.</p>.<p>‘ಸಾಹಿತಿ ವೀಣಾ ಶಾಂತೇಶ್ವರ ಅವರು ಸ್ತ್ರೀ ಶೋಷಣೆ ವಿರೋಧಿ ಬರಹಗಾರ್ತಿ. ಅವರದು ಕಾಲದ ಮೌಲ್ಯಗಳನ್ನು ಮೀರಿದ ದಾರಿ. ಸಾಂಪ್ರದಾಯಿಕ ಮಿತಿಗಳನ್ನು ಮೀರುವ ಪ್ರಯತ್ನ ಅವರಿಗೆ ಹುಟ್ಟಿನಿಂದಲೇ ಬಂದಿದೆ. ಸ್ತ್ರೀವಾದ ಅವರ ಅಲೋಚನೆಯಲ್ಲೇ ಮಿಳಿತವಾಗಿದೆ’ ಎಂದು ಹೇಳಿದರು.</p>.<p>‘ವೀಣಾ ಅವರು ಸಾಮಾಜಿಕ ನೋವುಗಳನ್ನು ಕೃತಿಗಳಲ್ಲಿ ಬಿಂಬಿಸಿದ್ದಾರೆ. ಅವರಲ್ಲಿ ಪ್ರತಿರೋಧದ ಮನೋಭಾವ ಇತ್ತು. ಸ್ತ್ರೀಯನ್ನು ಮಾನವತಾವಾದದ ದೃಷ್ಟಿಯಿಂದ ನೋಡಬೇಕು. ಸ್ತ್ರೀ ಪ್ರಜ್ಞೆ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಪ್ರಕಾಶಕ ಚನ್ನಬಸವಣ್ಣ ಅವರು ಅಕ್ಷರ ದಾಸೋಹಿ. ಅವರು ಸಾಹಿತ್ಯ ಲೋಕದಲ್ಲಿ ಪ್ರತಿಭೆಗಳನ್ನು ಪರಿಚಯಿಸಿ, ಬೆಳೆಸಿದರು. ಪುಸ್ತಕ ಸಂಸ್ಕೃತಿ ಬೆಳವಣಿಗೆಗೆ ಹೊಸ ಮಾದರಿ ನೀಡಿದರು ಎಂದು ಹೇಳಿದರು.</p>.<p>‘ಚನ್ನಬಸವಣ್ಣ ಅವರು ಲೋಹಿಯಾವಾದದಿಂದ ಪ್ರಭಾವಿರಾದವರು. 1990ರಲ್ಲಿ ಪ್ರಕಾಶನ ಸಂಸ್ಥೆ ಆರಂಭಿಸಿದರು. ಪುಸ್ತಕ ಪ್ರಕಟಣೆಯು ಉದ್ಯಮವಲ್ಲ, ಅದೊಂದು ಸಂಸ್ಕೃತಿ’ ಎಂದು ಸಾರಿದವರು. ಅವರು ಬಂಡಾಯ ಸಾಹಿತ್ಯ ಚಳವಳಿಯ ಭಾಗವಾಗಿದ್ದರು’ ಎಂದರು.</p>.<p>ಬಸವರಾಜ ಸಾದರ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ವರಿ ಹುಲಮನಿ ಅವರಿಗೆ ಗುರುಲಿಂಗ ಕಾಪಸೆ ವಿದ್ಯಾರ್ಥಿ ಬಹುಮಾನ ನೀಡಲಾಯಿತು.</p>.<p>ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ವಿಮೋಚನಾ ಸಂಸ್ಥೆ ಅಧ್ಯಕ್ಷ ಬಿ.ಎಲ್.ಪಾಟೀಲ, ಪ್ರೊ.ವೀರಣ್ಣ ರಾಜೂರ, ಶಂಕರ ಹಲಗತ್ತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-24-839448174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>