ದೈಹಿಕವಾಗಿ ಸದೃಢವಾಗಿದ್ದರೆ ಪರೀಕ್ಷೆ ಎದುರಿಸುವುದು ಸುಲಭ. ಇದಕ್ಕೆ ಪೌಷ್ಟಿಕ ಆಹಾರ ಸೇವಿಸಬೇಕು. ಆಗ ಮನಸ್ಸು ಸಕಾರಾತ್ಮಕವಾಗಿ ಸ್ಪಂದಿಸುತ್ತದೆ. ಕುರುಕಲು ತಿಂಡಿ ಸೇವಿಸುವುದನ್ನು ಕಡಿಮೆ ಮಾಡಬೇಕು. ಮೈದಾದಿಂದ ಮಾಡಿರುವ ಪದಾರ್ಥಗಳನ್ನು ತಿನ್ನಬಾರದು. ಬೇಕರಿ ಪದಾರ್ಥಗಳನ್ಮು ತಿನ್ನಬಾರದು. ಮನೆಯಲ್ಲಿಯೇ ತಯಾರಿಸುವ ಆಹಾರವನ್ನೇ ಸೇವಿಸಬೇಕು ಎಂದು ಸಲಹೆ ನೀಡಿದರು.