<p>ಶನಿವಾರಸಂತೆ: ಇಲ್ಲಿಗೆ ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಯ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯದಲ್ಲಿ ‘ವಿಶ್ವ ಪುಸ್ತಕ ದಿನ’ ವನ್ನು ಈಚೆಗೆ ಆಚರಿಸಲಾಯಿತು.</p>.<p>ದಿನದ ಮಹತ್ವ ಕುರಿತು ಗ್ರಂಥಾಲಯದ ಮೇಲ್ವಿಚಾರಕಿ ಎಸ್.ಪಿ.ದಿವ್ಯಾ ಮಾತನಾಡಿ, ‘ಪುಸ್ತಕವು ಜ್ಞಾನದ ಕಣಜವಾಗಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಮೂಲಕ ಜ್ಞಾನದ ಸಂಪಾದನೆ ಮಾಡಬೇಕು. ಎಲ್ಲರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಜೊತೆಯಲ್ಲಿ ತಮ್ಮ ಸ್ನೇಹಿತರಿಗೂ ಪುಸ್ತಕವನ್ನು ಓದುವಂತೆ ಪ್ರೇರಿಪಿಸಬೇಕು’ ಎಂದರು.</p>.<p>ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಳ್ಳಲು ಪುಸ್ತಕದ ಓದು ಮಹತ್ವದ ಪಾತ್ರ ವಹಿಸುತ್ತದೆ. ಸಂಸ್ಕಾರ, ನಡೆನುಡಿ ಸೇರಿದಂತೆ ಆಧುನಿಕ ಮತ್ತು ವೈಜ್ಞಾನಿಕ ವಿಚಾರಗಳ ಬಗ್ಗೆಯೂ ತಿಳಿದುಕೊಳ್ಳಬಹುದು. ಜೀವನ ನಡೆಸಲು ಮತ್ತು ಸಾಧನೆ ಮಾಡಲು ಸಹ ಪುಸ್ತಕಗಳು ಸಹಕಾರಿಯಾಗುತ್ತದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಪುಸ್ತಕದ ಪ್ರೇಮಿಯಾಗಿ ತನ್ನ ಜ್ಞಾನವನ್ನು ವೃದ್ದಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಗ್ರಂಥಾಲಯದ ಓದುಗರು, ವಿದ್ಯಾರ್ಥಿಗಳು, ಯುವಕ ಯುವತಿಯರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-51-469491150</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶನಿವಾರಸಂತೆ: ಇಲ್ಲಿಗೆ ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಯ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯದಲ್ಲಿ ‘ವಿಶ್ವ ಪುಸ್ತಕ ದಿನ’ ವನ್ನು ಈಚೆಗೆ ಆಚರಿಸಲಾಯಿತು.</p>.<p>ದಿನದ ಮಹತ್ವ ಕುರಿತು ಗ್ರಂಥಾಲಯದ ಮೇಲ್ವಿಚಾರಕಿ ಎಸ್.ಪಿ.ದಿವ್ಯಾ ಮಾತನಾಡಿ, ‘ಪುಸ್ತಕವು ಜ್ಞಾನದ ಕಣಜವಾಗಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಮೂಲಕ ಜ್ಞಾನದ ಸಂಪಾದನೆ ಮಾಡಬೇಕು. ಎಲ್ಲರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಜೊತೆಯಲ್ಲಿ ತಮ್ಮ ಸ್ನೇಹಿತರಿಗೂ ಪುಸ್ತಕವನ್ನು ಓದುವಂತೆ ಪ್ರೇರಿಪಿಸಬೇಕು’ ಎಂದರು.</p>.<p>ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಳ್ಳಲು ಪುಸ್ತಕದ ಓದು ಮಹತ್ವದ ಪಾತ್ರ ವಹಿಸುತ್ತದೆ. ಸಂಸ್ಕಾರ, ನಡೆನುಡಿ ಸೇರಿದಂತೆ ಆಧುನಿಕ ಮತ್ತು ವೈಜ್ಞಾನಿಕ ವಿಚಾರಗಳ ಬಗ್ಗೆಯೂ ತಿಳಿದುಕೊಳ್ಳಬಹುದು. ಜೀವನ ನಡೆಸಲು ಮತ್ತು ಸಾಧನೆ ಮಾಡಲು ಸಹ ಪುಸ್ತಕಗಳು ಸಹಕಾರಿಯಾಗುತ್ತದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಪುಸ್ತಕದ ಪ್ರೇಮಿಯಾಗಿ ತನ್ನ ಜ್ಞಾನವನ್ನು ವೃದ್ದಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಗ್ರಂಥಾಲಯದ ಓದುಗರು, ವಿದ್ಯಾರ್ಥಿಗಳು, ಯುವಕ ಯುವತಿಯರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-51-469491150</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>